ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ: ಶಾಸಕ
Team Udayavani, Jul 12, 2022, 5:54 PM IST
ಗುಂಡ್ಲುಪೇಟೆ: ತಾಲೂಕಿನ ಬರಗಿ ಗ್ರಾಮದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಆಯ್ದ ಭಾಗಗಳಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಎಸ್. ನಿರಂಜನಕುಮಾರ್ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸಿ.ಎಸ್. ನಿರಂಜನಕುಮಾರ್, ಪಂಚಾಯತ್ ರಾಜ್ ಇಲಾಖೆಯಿಂದ ಲೆಕ್ಕ ಶೀರ್ಷಿಕೆ 50-54 ಯೋಜನೆಯಲ್ಲಿಬರಗಿ ಗ್ರಾಮದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.ಗುತ್ತಿಗೆದಾರರು ಗುಣಮಟ್ಟದಿಂದ ಕಾಮಗಾರಿ ಯನ್ನುನೆರವೇರಿಸಬೇಕು. ಲೋಪ ಕಂಡು ಬಂದರೆ ಕೂಡಲೇ ಅದನ್ನು ಸರಿಪಡಿಸಲು ಸ್ಥಳೀಯರು ತಿಳಿಸಿ ಉತ್ತಮ ರಸ್ತೆ ಮಾಡಿಸಿಕೊಳ್ಳಬೇಕು ಎಂದರು.
ಈಗಾಗಲೇ ತಾಲೂಕಿಗೆ ಸುಮಾರು 50 ಕೋಟಿಗಿಂತಲೂ ಹೆಚ್ಚಿನ ವಿಶೇಷ ಅನುದಾನ ತಂದು ಎಸ್ಸಿ, ಎಸ್ಟಿ ಸಮುದಾಯದ ಬೀದಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿ ಅಭಿವೃದ್ಧಿ ಪಡಿಸಲಾಗಿದೆ. ಅಂತೆಯೇ ಸಾಮಾನ್ಯ ಜನರ ಬೀದಿಗಳಲ್ಲಿ ರಸ್ತೆ ನಿರ್ಮಾಣಕ್ಕೆ ಬಿ.ಎಸ್ .ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ಮನವಿ ಮಾಡಿದ ಹಿನ್ನೆಲೆ 22 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಿದರು. ಅದರಲ್ಲಿ ತಾಲೂಕಿನ 60 ಗ್ರಾಮಗಳ ಸಾಮಾನ್ಯ ಬೀದಿಗಳಿಗೆ ಆಯ್ಕೆ ಮಾಡಿ 50ಲಕ್ಷ ಹಣ ಮಂಜೂರು ಮಾಡಲಾಗಿತ್ತು. ಅದರಂತೆಇದೀಗ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಮಂಡಲ ಅಧ್ಯಕ್ಷ ದೊಡ್ಡಹುಂಡಿ ಜಗದೀಶ್, ಬಿಜೆಪಿ ಮುಖಂಡರಾದ ಕನ್ನೇಗಾಲ ಸ್ವಾಮಿ, ಸುಜೇಂದ್ರ, ಮಂಚಹಳ್ಳಿ ಬಾಬು, ಅಲತ್ತೂರು ರಾಜೇಶ್, ಮಾಡ್ರಹಳ್ಳಿ ನಾಗೇಂದ್ರ, ಮಿಂಚು ಮಹಾದೇವಪ್ಪ,ಚೆನ್ನಂಜಯ್ಯನಹುಂಡಿ ಬಸವಣ್ಣ, ಮಹದೇವಪ್ರಸಾದ್,ಮಲ್ಲಿಕಾರ್ಜುನ ಸ್ವಾಮಿ, ಪಂಚಾಯತ್ ರಾಜ್ ಇಲಾಖೆ ಎಇಇ ಸಂತೋಷ್ ಕುಮಾರ್ ಸೇರಿದಂತೆ ಸ್ಥಳೀಯ ಮುಖಂಡರು, ಬಿಜೆಪಿ ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು