ಹಿಜಾಬ್ ಗೆ ಅವಕಾಶ ಕೊಡಿ, ಇಲ್ಲವಾದರೆ ಪರೀಕ್ಷೆ ಮುಂದೂಡಿ: ಚಾ.ನಗರದಲ್ಲಿ ವಿದ್ಯಾರ್ಥಿನಿಯರು


Team Udayavani, Feb 26, 2022, 12:28 PM IST

ಹಿಜಾಬ್ ಗೆ ಅವಕಾಶ ಕೊಡಿ, ಇಲ್ಲವಾದರೆ ಪರೀಕ್ಷೆ ಮುಂದೂಡಿ: ಚಾ.ನಗರದಲ್ಲಿ ವಿದ್ಯಾರ್ಥಿನಿಯರು

ಚಾಮರಾಜನಗರ: ರಾಜ್ಯ ಹೈಕೋರ್ಟ್ ಹಿಜಾಬ್ ಧರಿಸುವಿಕೆ ಬಗ್ಗೆ ತನ್ನ ತೀರ್ಪು ಪ್ರಕಟಗೊಳಿಸುವವರೆಗೆ ನಮಗೆ ಹಿಜಾಬ್ ಧರಿಸಿಯೇ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಬೇಕು. ಇಲ್ಲವಾದಲ್ಲಿ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನ ಪಿಯುಸಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ ವಿದ್ಯಾರ್ಥಿನಿಯರು ಒತ್ತಾಯಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದ್ಯಾರ್ಥಿನಿಯರಾದ ಹೀನಾ, ಖುತೇಜಾ, ಅಮೀನಾ, ಬೀಬಿ ಫಾತೀಮಾ ಹಾಗೂ ಶಿಫಾ, ನಾವು ಹಿಂದಿನಿಂದಲೂ ಕಾಲೇಜುವರೆಗೆ ಬುರ್ಖಾ ಧರಿಸಿ ಬಳಿಕ ಬುರ್ಖಾ ತೆಗೆದು ಹಿಜಾಬ್ ಧರಿಸಿ ತರಗತಿಗಳಿಗೆ ಹೋಗಿ ಪಾಠ ಕೇಳುತ್ತಿದ್ದೆವು. ಫೆ. 16ರವರೆಗೂ ಎಲ್ಲವೂ ಸರಿಯಾಗಿಯೇ ಇತ್ತು. ಆದರೆ, ಫೆ. 16ರ ಬಳಿಕ ನಮಗೆ ಹಿಜಾಬ್ ಧರಿಸಿ ತರಗತಿ ಪ್ರವೇಶಿಸಲು ಅವಕಾಶ ನೀಡುತ್ತಿಲ್ಲ. ಹಿಜಾಬ್ ತೆರೆದು ಬಂದರಷ್ಟೇ ತರಗತಿಗೆ ಬನ್ನಿ, ಇಲ್ಲವಾದರೆ ಪ್ರವೇಶವಿಲ್ಲ ಎಂದು ಪ್ರಾಂಶುಪಾಲರು ಹೇಳುತ್ತಿದ್ದಾರೆ ಎಂದರು.

ನಾವು ಅಂದಿನಿಂದಲೂ ಕಾಲೇಜಿಗೆ ತೆರಳಿದರೂ ತರಗತಿಯೊಳಗೆ ಅವಕಾಶ ನೀಡುತ್ತಿಲ್ಲ. ಇದರಿಂದ ನಮಗೆ ಹಾಜರಾತಿ, ಪಾಠ ತಪ್ಪಿ ಹೋಗುತ್ತಿದೆ. ಹಿಜಾಬ್ ನಮ್ಮ ಧರ್ಮದ ಸಂಸ್ಕೃತಿ. ಅದನ್ನು ನಾವು ಏಕಾಏಕಿ ಬಿಡುವುದು ಸಾಧ್ಯವಿಲ್ಲ ಎಂದರು.

ಈ ಬಗ್ಗೆ ಪ್ರಾಂಶುಪಾಲರನ್ನು ಪ್ರಶ್ನಿಸಿದರೆ ಅವರು ನ್ಯಾಯಾಲಯದ ತೀರ್ಪಿನ ಬಗ್ಗೆ ಹೇಳುತ್ತಾರೆ. ಅಲ್ಲದೇ ನಿಮ್ಮ ಆಂತರಿಕ ಅಂಕಗಳನ್ನು ಕಡಿತಗೊಳಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕುತ್ತಾರೆ. ಕಾಲೇಜ್ ಕ್ಯಾಂಪಸ್‌ನಲ್ಲೂ ನಾವು ಕೂರಲು ಅವಕಾಶ ನೀಡದೇ ಕೂರುವ ಜಾಗಕ್ಕೆ ನೀರು ಸಿಂಪಡಿಸಲಾಗುತ್ತಿದೆ. ಇದಕ್ಕೆ ಹೆದರಿ ನಮ್ಮ ಸಮುದಾಯದ 40 ವಿದ್ಯಾರ್ಥಿನಿಯರ ಪೈಕಿ ಹಲವರು ಹಿಜಾಬ್ ಧರಿಸದೇ ತರಗತಿಗೆ ಹಾಜರಾಗುತ್ತಿದ್ದಾರೆ. ಆದರೆ, ನಾವು ನಮ್ಮ ಸಂಸ್ಕೃತಿಯನ್ನು ಏಕಾಏಕಿ ಬಿಡಲು ಸಾಧ್ಯವಿಲ್ಲ. ಹೀಗಾಗಿ ನಾವು 22 ಮಂದಿ ಹಿಜಾಬ್ ಇಲ್ಲದೇ ತರಗತಿಗೆ ಹೋಗುವುದಿಲ್ಲ. ಇದು ತಾರತಮ್ಯ ನೀತಿ, ಅಸಮಾನತೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ:ಶಿವಮೊಗ್ಗ: ಹರ್ಷನ ಕುಟುಂಬಕ್ಕೆ ಸಾಂತ್ವಾನ ಹೇಳಿದ ವಿವಿಧ ಮಠಾಧೀಶರು

ಕಾಲೇಜು ಆಡಳಿತ ಮಂಡಳಿ ನ್ಯಾಯಾಂಗದ ಆದೇಶ ಪಾಲಿಸಬೇಕಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿದ್ಯಾರ್ಥಿನಿಯರು, ನಮ್ಮ ಕಾಲೇಜಿನಲ್ಲಿ  ಸಮವಸ್ತ್ರ ಇದೆಯಾದರೂ ಅದಕ್ಕೆ ತಕ್ಕ ನಿಬಂಧನೆಗಳೇನೂ ಇಲ್ಲ. ನಾವು ಸಮವಸ್ತ್ರ ಧರಿಸಿಯೇ ಹೋಗುತ್ತಿದ್ದೇವೆ. ತಲೆ ಮುಚ್ಚುವಂತೆ ಹಿಜಾಬ್ ಧರಿಸುತ್ತೇವೆ. ಡ್ರೆಸ್ ಕೋಡ್ ಹೀಗೆ ಇರಬೇಕೆಂಬ ಬಗ್ಗೆ ವಿವರ ಇಲ್ಲ. ಆದ್ದರಿಂದ ನಮಗೆ ಹಿಜಾಬ್ ಧರಿಸಲು ಅವಕಾಶ ನೀಡಬಹುದು ಎಂದು ಪ್ರತಿಕ್ರಿಯಿಸಿದರು.

ಈ ಕುರಿತು ನಾವು ಜಿಲ್ಲಾಧಿಕಾರಿ ಅವರ ಗಮನಕ್ಕೂ ತಂದಿದ್ದೇವೆ. ಹಾಗಾಗಿ ಹೈಕೋರ್ಟ್ ಅಂತಿಮ ತೀರ್ಪು ಬರುವವರೆಗೂ ನಮಗೆ ತರಗತಿ ಪ್ರವೇಶಿಸಲು ಅವಕಾಶ ನೀಡಬೇಕು. ಅದಕ್ಕೆ ಅನುಮತಿ ನೀಡದಿದ್ದರೆ ಆನ್‌ಲೈನ್ ತರಗತಿ ನಡೆಸಬೇಕು. ಅದೂ ಸಾಧ್ಯವಿಲ್ಲವೆಂದರೆ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.