ಕುದುರೆ ಮೇಲೆ ಶಾಲೆಗೆ ಹೋಗುವ ಚಿಣ್ಣರು!


Team Udayavani, Jun 20, 2022, 10:44 AM IST

3

ಯಳಂದೂರು: ಪ್ರತಿನಿತ್ಯ ಮಕ್ಕಳು ಶಾಲೆಗೆ ಬೈಕ್‌, ಕಾರು, ಸೈಕಲ್‌, ಬಸ್‌, ರೈಲುಗಳ ಮೂಲಕ ಹೋಗುವುದನ್ನು ಕೇಳಿದ್ದೀವಿ, ನೋಡಿದ್ದೀವಿ. ಆದರೆ ಕುದುರೆ ಮೂಲಕ ಹೋಗುವುದನ್ನು ನೋಡಿದ್ದೀರ, ಕೇಳಿದ್ದೀರ?

ಇಂಥದ್ದೊಂದು ವಿದ್ಯಮಾನ ತಾಲೂಕಿನ ಕಂದಹಳ್ಳಿಯಲ್ಲಿ ನಿತ್ಯ ನಡೆಯುತ್ತಿದೆ. ಕುದುರೆ ನಾಗೇಂದ್ರ ಎಂದೇ ಪ್ರಸಿದ್ಧಿಯಾದ ನಾಗೇಂದ್ರ ಅವರು ತಮ್ಮ ಮಕ್ಕಳಾದ ಸನ್ನಿಧಿ, ಸುದೀಪ್‌ ಅವರನ್ನು ಪ್ರತಿನಿತ್ಯ ಕುದುರೆ ಮೇಲೆ ಶಾಲೆಗೆ ಕರೆದುಕೊಂಡು ಹೋಗುತ್ತಾರೆ. ಆ ಸಮಯದಲ್ಲಿ ಶಾಲೆ ಬಿಟ್ಟಮಕ್ಕಳು ಇಲ್ಲವೇ ಶಾಲೆಗೆ ಹೋಗದೆ ಹಠ ಮಾಡುವ ಮಕ್ಕಳನ್ನು ಮನವೊಲಿಸಿ ಕುದುರೆ ಮೂಲಕ ಕರೆದುಕೊಂಡು ಹೋಗಿ ಮತ್ತೆ ಶಾಲೆ ಮೆಟ್ಟಿಲು ಹತ್ತುವಂತೆ ಮಾಡುತ್ತಿದ್ದಾರೆ.

ಪ್ರಾಣಿ ಪ್ರೀತಿಯಿಂದ ಕುದುರೆ ಸಾಕಿರುವ ನಾಗೇಂದ್ರ ಅವರು, ಶಾಲೆಗೆ ಹೋಗಲ್ಲ ಎನ್ನುವ ಮಕ್ಕಳನ್ನು ಪ್ರೀತಿಯಿಂದ ಕುದುರೆ ಮೇಲೆ ಕರೆದೊಯ್ಯುವ ಕೆಲಸಕ್ಕೆ ಗ್ರಾಮಸ್ಥರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ. ನಾಗೇಂದ್ರ ಅವರು ನಿತ್ಯವೂ ಸಮೀಪದ ಕಾರಾಪುರ ವಿರಕ್ತ ಮಠದ ನಿರಂಜನ ವಿದ್ಯಾಸಂಸ್ಥೆಗೆ ತನ್ನ ಮಕ್ಕಳು, ಸಂಬಂಧಿಕರ ಮಕ್ಕಳನ್ನು ಕುದುರೆ ಮೂಲಕವೇ ಕರೆದೊಯ್ಯುತ್ತಾರೆ. ಈ ವೇಳೆ ಶಾಲೆಗೆ ಹೋಗದಂತಹ ಮಕ್ಕಳ ಬಗ್ಗೆ ಮಾಹಿತಿ ಸಿಕ್ಕರೆ, ಆ ಮಕ್ಕಳನ್ನೂ ಶಾಲೆಗೆ ಕರೆದುಕೊಂಡು ಹೋಗುತ್ತಾರೆ.

ಪ್ರಾಣಿಗಳು ಎಂದರೆ ಅಚ್ಚುಮೆಚ್ಚು: ನಾಗೇಂದ್ರ ಅವರಿಗೆ ಬಾಲ್ಯದಿಂದಲೂ ಪ್ರಾಣಿಗಳ ಮೇಲೆ ತುಂಬಾ ಆಸಕ್ತಿ. ವಿವಿಧ ಜಾತಿಯ ನಾಯಿ, ಬಾತುಕೋಳಿ, ಪಾರಿವಾಳ, ಗಿಳಿ, ಮೊಲದ ಮರಿ, ಕೋಳಿ ಸೇರಿ ಪ್ರಾಣಿಗಳನ್ನು ಪೋಷಿಸುತ್ತಿದ್ದಾರೆ. ಅದಕ್ಕೆಂದೇ ಪ್ರತ್ಯೇಕವಾಗಿ ಕೊಠಡಿ ಸಹ ನಿರ್ಮಿಸಿದ್ದಾರೆ. ಏಳು ವರ್ಷದ ಹಿಂದೆ ಕುದುರೆ ಸಾಕುವ ಹಂಬಲದಿಂದ ಮೈಸೂರಿನ ರೇಸ್‌ಕೋರ್ಸ್‌ನಲ್ಲಿ ಒಂದು ಕುದುರೆ ತಂದು ಸಾಕುತ್ತಿದ್ದಾರೆ.

ಶಾಲೆಗೆ ಬರುವ ಮಕ್ಕಳು ಹಠ ಮಾಡಿದರೆ ಕುದುರೆ ಮೇಲೆ ಒಂದು ಸುತ್ತು ಕರೆದುಕೊಂಡು ಬರುವುದರಿಂದ ಮಕ್ಕಳು ಖುಷಿಯಾಗುವುದರ ಜತೆಗೆ, ಶಾಲೆಗೆ ಪ್ರತಿ ನಿತ್ಯ ಆಗಮಿಸುವುದಕ್ಕೆ ಹೆಚ್ಚು ಅನುಕೂಲವಾಗಿದೆ. ● ಶಮಂತ್‌ ಮಣಿ, ಮುಖ್ಯಶಿಕ್ಷಕಿ, ನಿರಂಜನ್‌ ಕಾನ್ವೆಂಟ್‌ ಯಳಂದೂರು

● ಫೈರೋಜ್‌ ಖಾನ್‌

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.