ಚಾ.ನಗರ: ಬಂದ್‌ಗೆ ಉತ್ತಮ ಪ್ರತಿಕ್ರಿಯೆ


Team Udayavani, Sep 29, 2020, 12:16 PM IST

ಚಾ.ನಗರ: ಬಂದ್‌ಗೆ ಉತ್ತಮ ಪ್ರತಿಕ್ರಿಯೆ

ಚಾಮರಾಜನಗರ: ಭೂ ಸುಧಾರಣಾ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಸೋಮವಾರ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಚಾಮ ರಾಜನಗರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಜಿಲ್ಲಾ ಕೇಂದ್ರ ಚಾಮರಾಜನಗರದಲ್ಲಿ ಬಹುತೇಕ ಅಂಗಡಿಗಳು, ಹೋಟೆಲ್‌ ಗಳು ಮುಚ್ಚಿದ್ದವು. ಅಗತ್ಯ ವಸ್ತು ಮತ್ತು ಸೇವೆ ಹೊರತುಪಡಿಸಿ ವ್ಯಾಪಾರ ವಹಿ ವಾಟು ಸ್ಥಗಿತಗೊಂಡಿತ್ತು. ಕೆಎಸ್‌ಆರ್‌ ಟಿಸಿ ಹಾಗೂ ಖಾಸಗಿ ಬಸ್‌ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಸರ್ಕಾರಿ ಕಚೇರಿ ಗಳಲ್ಲಿ ಹಾಜರಾತಿ ವಿರಳವಾಗಿತ್ತು.

ಪ್ರತಿಭಟನೆ: ಬಂದ್‌ ವೇಳೆ ವಿವಿಧೆಡೆ ರೈತ ಹಾಗೂ ಇತರ ಸಂಘಟನೆಗಳ ಕಾರ್ಯ ಕರ್ತರು ಪ್ರತಿಭಟನೆ ನಡೆಸಿದರು ನಗರದ ಭುವನೇಶ್ವರಿ ವೃತ್ತದಲ್ಲಿ ಬೆಳ್ಳಂಬೆಳಗ್ಗೆ 6 ಗಂಟೆಗೆ ಸಮಾವೇಶ ಗೊಂಡ ಪ್ರತಿಭಟನಾನಿರತರು ಟೈರ್‌ಗೆ ಬೆಂಕಿಹಚ್ಚಿಕೇಂದ್ರಮತ್ತು ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಉರಿಯುವ ಬೆಂಕಿ ಟೈರನ್ನು ಪೊಲೀಸರು ಆಗ್ನಿಶಾಮಕದಳದವರಿಂದ ನಂದಿಸಲು ಮುಂದಾದಾಗ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.

ಪ್ರತಿಭಟನೆಯಲ್ಲಿ ಕಬ್ಬು ಬೆಳೆಗಾರರ ಸಂಘದ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್‌ ಮಾತನಾಡಿ, ಭೂ ಸುಧಾ ರಣೆ ಕಾಯ್ದೆಯಿಂದ ಇಡೀ ರೈತ ಸಂಕುಲ ನಾಶವಾಗಲಿದೆ. ಎಪಿಎಂಸಿ ಮತ್ತು ಭೂ ಸುಧಾರಣೆ ಕಾಯ್ದೆಗಳ ತಿದ್ದುಪಡಿಯನ್ನು ಹಿಂಪಡೆಯುವಂತೆ ಆಗ್ರಹಿಸಿದರು.

ಕಾಂಗ್ರೆಸ್‌ ಬೆಂಬಲ: ಪ್ರತಿಭಟನೆಯಲ್ಲಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಮಹ ಮ್ಮದ್‌ ಅಸ್ಗರ್‌, ಗುರುಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವು, ಕಾಗಲವಾಡಿಚಂದ್ರು, ಎಪಿಎಂಸಿ ಅಧ್ಯಕ್ಷ ನಾಗೇಂದ್ರ, ಎಂ.ಶಿವಮೂರ್ತಿ, ನಗರ ಸಭಾ ಮಾಜಿ ಸದಸ್ಯ ಪುಟ್ಟಸ್ವಾಮಿ, ಅಲ್ಪ ಸಂಖ್ಯಾತರ ಘಟಕ ಅಧ್ಯಕ್ಷ ಮಹಮ್ಮದ್‌ ಇಮ್ರಾನ್‌, ಫ‌ರ್ವಿಜ್‌ ಅಹಮದ್‌ ಭಾಗವಹಿಸಿ ಬೆಂಬಲ ಸೂಚಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್‌ ಬ್ಲಾಕ್‌ ಅಧ್ಯಕ್ಷ ಮಹಮ್ಮದ್‌ ಅಸYರ್‌ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ರೈತ ವಿರೋಧಿ ಕಾನೂನು ಜಾರಿಗೆ ತಂದು ರೈತರ ಪ್ರಾಣದ ಜತೆ ಚೆಲ್ಲಾಟ ಆಡುತ್ತಿದೆ. ಜನಪರ ಯೋಜನೆಗಳನ್ನು ತರುವಲ್ಲಿ ಸಂಪೂರ್ಣ ವಿಫ‌ಲವಾಗಿದೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಎ.ಎಂ.ಮಹೇಶ್‌ಪ್ರಭು, ಎನ್‌. ಮಹೇಶ್‌ ಅಭಿಮಾನಿ ಬಳಗದ ಆಲೂ ರುಮಲ್ಲು, ನಿಜಧ್ವನಿ ಗೋವಿಂದರಾಜ್‌, ಮೂಕಳ್ಳಿ ಮಹದೇವಸ್ವಾಮಿ, ಪಟೇಲ್‌ ಶಿವಮೂರ್ತಿ, ಪಾಲಹಳ್ಳಿ ಕುಮಾರ್‌, ಕುಂತೂರು ಪ್ರಭುಸ್ವಾಮಿ, ನಾಗರಾಜು, ಪರ್ವತ್‌ರಾಜ್‌, ಸುಂದರ್‌ರಾಜ್‌, ಹೆಬ್ಬ ಸೂರು ಬಸವಣ್ಣ, ಸಿದ್ದರಾಜು, ಚೆನ್ನ ಬಸಪ್ಪ, ಸಿ.ಎಸ್‌.ಸೈಯದ್‌ ಆರೀಫ್ ಇತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.