ಧರ್ಮಸ್ಥಳ ಸಂಸ್ಥೆಯಿಂದ ಉತ್ತಮ ಸಮಾಜ ನಿರ್ಮಾಣ


Team Udayavani, Dec 25, 2019, 3:00 AM IST

dharmastala

ಗುಂಡ್ಲುಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯು ಜಿಲ್ಲೆ ಮತ್ತು ತಾಲೂಕಿನಾದ್ಯಂತ ಹತ್ತು ಹಲವು ಸಾಮಾಜಿಕ ಕಳಕಳಿಯ ಕಾರ್ಯಗಳಲ್ಲಿ ತೊಡಗಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ನಾಂದಿ ಹಾಡಿದೆ ಎಂದು ಎಸ್‌.ಕೆ.ಡಿ.ಆರ್‌.ಡಿ.ಪಿಯ ಜಿಲ್ಲಾ ನಿರ್ದೇಶಕಿ ಲೀಲಾವತಿ ಹೇಳಿದರು. ಪಟ್ಟಣದ ಶಿವಶಕ್ತಿ ಕಾಂಪ್ಲೆಕ್ಸ್‌ನಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿಯ ಯೋಜನಾ ಕಚೇರಿಯಲ್ಲಿ ನೂತನ ವರ್ಷದ ಡೈರಿ ಬಿಡುಗಡೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

150ಕ್ಕೂ ಹೆಚ್ಚು ಕೃಷಿ ಅಧ್ಯಯನ ತರಬೇತಿ: ಈ ತಾಲೂಕಿನ ವ್ಯಾಪ್ತಿಯಲ್ಲಿ 3075 ಪ್ರಗತಿಬಂಧು ಸಂಘಗಳನ್ನು ರಚಿಸಿಕೊಂಡು ಸಹ್ರಸಾರು ಸಂಖ್ಯೆಯಲ್ಲಿ ಸದಸ್ಯರನ್ನು ಸೇರ್ಪಡೆ ಮಾಡಿಕೊಳ್ಳಲಾಗಿದೆ. ಈ ವ್ಯಾಪ್ತಿಯಲ್ಲಿ 150ಕ್ಕೂ ಹೆಚ್ಚು ಕೃಷಿ ಅಧ್ಯಯನ ತರಬೇತಿಗಳು, 39ಕ್ಕೂ ಹೆಚ್ಚು ನಾಗರಿಕ ಪ್ರಜ್ಞಾ ಕಾರ್ಯಗಳನ್ನು ನಡೆಸಲಾಗಿದೆ ಎಂದರು.

ಸಹಾಯ ಧನ ವಿತರಣೆ: ಸದಸ್ಯರ ಹಿತದೃಷ್ಠಿಯಿಂದ 1.40 ಕೋಟಿ ರೂಪಾಯಿಗೂ ಹೆಚ್ಚು ಪ್ರಗತಿ ನಿಧಿಯನ್ನು ವಿತರಿಸಲಾಗಿದೆ. 46 ನಿರ್ಗತಿಕ ಮಾಸಾಶನವನ್ನು ಸಂಸ್ಥೆಯು ಮಾನವೀಯತೆಯ ದೃಷ್ಠಿಯಲ್ಲಿ ನೀಡಲಾಗುತ್ತಿದೆ. ತಾಲೂಕಿನ ಹಾಲಿನ ಡೇರಿ ಕಟ್ಟಡಗಳ ನಿರ್ಮಾಣಕ್ಕಾಗಿ ಸಹಾಯ ಧನವಾಗಿ ಸುಮಾರು 5 ಲಕ್ಷ ರೂಪಾಯಿಗಳನ್ನು ಈಗಾಗಲೇ ವಿತರಿಸಲಾಗಿದೆ. ಇದಲ್ಲದೇ ಹೈನುಗಾರಿಕೆ, ಕುರಿ ಸಾಕಾಣಿಕೆ ಮತ್ತಿತರೆ ಉಪ ಕಸುಬಿಗಾಗಿ 1.20 ಲಕ್ಷ ರೂಪಾಯಿಗಳನ್ನು ಮತ್ತು ಕೃಷಿ ಸಲಕರಣೆಗಾಗಿ 90 ಸಾವಿರ ರೂಪಾಯಿಗಳನ್ನು ವಿತರಿಸಲಾಗಿದೆ ಎಂದು ಹೇಳಿದರು.

ಸ್ವಚ್ಛತೆಗೆ ಆದ್ಯತೆ ನೀಡಲು ತರಬೇತಿ: ಮಹಿಳೆಯರಿಗೆ ವಿಶೇಷವಾಗಿ ಜ್ಞಾನವಿಕಾಸ ಯೋಜನೆಯಡಿಯಲ್ಲಿ ಕಾನೂನು ಅರಿವು ಮತ್ತು ಸ್ವಚ್ಛತೆಗೆ ಆದ್ಯತೆ ನೀಡುವ ತರಬೇತಿ ಶಿಬಿರ ಮತ್ತು ಹತ್ತು ಹಲವು ಧಾರ್ಮಿಕ ಸಮಾರಂಭವನ್ನು ಹಮ್ಮಿಕೊಳ್ಳುವುದರೊಂದಿಗೆ ಸೋಲಾರ್‌ನ ಉಪಯೋಗ ಮತ್ತು ಅದರ ಲಾಭಗಳನ್ನು ತಿಳಿಸಿಕೊಡಲಾಗಿದೆ. ಇದೇ ರೀತಿಯಾಗಿ ಮುಂಬರುವ ವರ್ಷಗಳಲ್ಲಿಯೂ ಸಹ ಮತ್ತಷ್ಟು ಉತ್ತಮವಾಗಿ ಧರ್ಮಸ್ಥಳ ಸಂಸ್ಥೆಯ ಜನರ ನಾಡಿಮಿಡಿತವನ್ನು ಅರಿವು ಜನಾಭಿವೃದ್ಧಿಗಾಗಿ ಶ್ರಮಿಸಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಸ್‌.ಕೆ.ಡಿ.ಆರ್‌.ಡಿ.ಪಿ ತಾಲೂಕು ಯೋಜನಾಧಿಕಾರಿ ಶಿವಪ್ರಸಾದ್‌ ಮಾತನಾಡಿ, ಡಾ. ವೀರೇಂದ್ರ ಹೆಗಡೆಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಸಂಘವು ಅತ್ಯುತ್ತವವಾಗಿ ಬಡವರ, ಕೃಷಿಕರ ಮತ್ತು ಎಲ್ಲಾ ವರ್ಗದವರ ಹಿತಕಾಪಾಡಲು ಶ್ರಮಿಸುತ್ತಿದೆ ಎಂದರು. ಈ ಸಂದರ್ಭದಲ್ಲಿ ಕೃಷಿ ಮೇಲ್ವಿಚಾರಕ ನವೀನ್‌ ಸೇರಿದಂತೆ ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.