Gopalswami Hills: ಸಂಕಷ್ಟಗಳ ಸುಳಿಗೆ ಸಿಲುಕಿದ ಗೋಪಾಲಸ್ವಾಮಿ ಭಕ್ತರು


Team Udayavani, Aug 23, 2023, 3:40 PM IST

tdy-10

ಗುಂಡ್ಲುಪೇಟೆ: ಹೇಳಿಕೊಳ್ಳಲು ಪ್ರಖ್ಯಾತ ದೇಗುಲ. ಆದರೆ, ಸಮರ್ಪಕ ಶುದ್ಧ ನೀರಿಲ್ಲ, ಪಾರ್ಕಿಂಗ್‌ ಮಾಡಿದ ವಾಹನಗಳಿಗೆ ನೆರಳಿನ ವ್ಯವಸ್ಥೆಯಿಲ್ಲ, ಬೆಟ್ಟದಲ್ಲಿರುವ ಸ್ವಾಮಿಯ ದರ್ಶನಕ್ಕೆ ಸರ್ಕಾರಿ ಬಸ್‌ ಹತ್ತಲು ಹೋದರೆ, ಅಲ್ಲಿಯೂ ಕನಿಷ್ಠ ಆಸನಗಳ ವ್ಯವಸ್ಥೆಯಿಲ್ಲ, ಬಿಸಿಲಿನಲ್ಲೇ ಸರದಿ ಸಾಲಿನಲ್ಲಿ ನಿಂತು ಟಿಕೆಟ್‌ ತೆಗೆದುಕೊಳ್ಳಬೇಕಿದೆ. ಇನ್ನು ದುರ್ನಾತ ಬೀರುವ ಶೌಚಾಲಯವನ್ನೂ ದುಪ್ಪಟ್ಟು ಹಣ ನೀಡಿ ಬಳಸಬೇಕಿದೆ!.

ಹೌದು, ಈ ಸಮಸ್ಯೆ ಯಾವುದೋ ಸಣ್ಣ ದೇಗುಲದ ಭಕ್ತರದ್ದಲ್ಲ. ಬದಲಾಗಿ ಪ್ರಖ್ಯಾತಿ ಹೊಂದಿರುವ, ಸರ್ಕಾರಕ್ಕೆ ಹೆಚ್ಚಿನ ಆದಾಯ ತರುವ ಹಾಗೂ ಅರಣ್ಯ ಇಲಾಖೆಗೂ ಆದಾಯ ನೀಡುವ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದ ದೇಗುಲದ ಭಕ್ತರದ್ದಾಗಿದೆ.

ಪ್ರಾಕೃತಿಕ ಸೌಂದರ್ಯ ಹೊಂದಿರುವ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಭಕ್ತರು ಅಗತ್ಯ ಮೂಲ ಸೌಕರ್ಯವಿಲ್ಲದೆ ಪರದಾಡುವಂತಾಗಿದೆ.

ಪ್ರತಿನಿತ್ಯ ಬೆಂಗಳೂರು, ಮೈಸೂರು, ಕೇರಳ, ತಮಿಳುನಾಡಿನಿಂದ ಸಾವಿರಾರು ಮಂದಿ ಭೇಟಿ ನೀಡುತ್ತಾರೆ. ವಾರಾಂತ್ಯದಲ್ಲಿ ಪ್ರವಾಸಿಗರ ಸಂಖ್ಯೆಯೂ ದುಪ್ಪಟ್ಟಾಗುತ್ತದೆ. ಬೆಟ್ಟಕ್ಕೆ ಖಾಸಗಿ ವಾಹನ ನಿಷೇಧ ಹಿನ್ನೆಲೆ ತಮ್ಮ ಸ್ವಂತ ವಾಹನದಲ್ಲಿ ಆಗಮಿಸಿ ತಪ್ಪಲಿನಲ್ಲಿ ಪಾರ್ಕಿಂಗ್‌ ಮಾಡಿ ಬೆಟ್ಟಕ್ಕೆ ತೆರಳುತ್ತಾರೆ. ಆದರೆ, ತಪ್ಪಲಿನಲ್ಲಿ ಮೂಲ ಸೌಕರ್ಯಗಳಿಲ್ಲದೆ ಭಕ್ತರ ಪರದಾಟ ಹೇಳತೀರದಾಗಿದೆ.

ಸೂಕ್ತ ಪಾರ್ಕಿಂಗ್‌ ವ್ಯವಸ್ಥೆ ಇಲ್ಲ: ಬೆಟ್ಟದ ತಪ್ಪಲಿನಲ್ಲಿ ಖಾಸಗಿ ವಾಹನಕ್ಕೆ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲಾಗಿದ್ದು, ಕಾರಿಗೆ 59 ರೂ., ಟಿಟಿ ವಾಹನಕ್ಕೆ 83, ಖಾಸಗಿ ಬಸ್‌ಗೆ 118 ರೂ. ಹಾಗೂ ಬೈಕ್‌ಗೆ 20 ರೂ. ನಿಗದಿ ಮಾಡಲಾಗಿದೆ. ತಿಂಗಳಿಗೆ ಸುಮಾರು 60-70 ಸಾವಿರ ಆದಾಯ ಬರುತ್ತದೆ. ಆದರೆ, ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ವಾಹನ ಬಿರು ಬಿಸಿಲಿನಲ್ಲಿ ಗಂಟೆಗಟ್ಟಲೇ ನಿಲ್ಲುವಂತಾ ಗಿದೆ. ಜತೆಗೆ ಪಾರ್ಕಿಂಗ್‌ ಸ್ಥಳ ಇಳಿಜಾರಾಗಿದ್ದು, ಮಳೆ ಬಂದ ಸಂದರ್ಭ ದಲ್ಲಿ ಕೆಸರು ಗದ್ದೆಯಂತಾ ಗುತ್ತಿದೆ.

ಕೆಟ್ಟುನಿಂತ ಶುದ್ಧ ನೀರಿನ ಘಟಕ: ತಪ್ಪಲಿನಲ್ಲಿ ವಾಹನ ಪಾರ್ಕಿಂಗ್‌ಗೆ ಹೊಂದಿ ಕೊಂಡಂತೆ ನಿರ್ಮಾಣ ಮಾಡಿ ರುವ ಶುದ್ಧ ನೀರಿನ ಘಟಕ ಕೆಟ್ಟುನಿಂತು ಹಲವು ತಿಂಗಳುಗಳೇ ಕಳೆದಿವೆ. ಹೀಗಿದ್ದರೂ ಅರಣ್ಯ ಇಲಾಖೆ ದುರಸ್ತಿಪಡಿಸಿಲ್ಲ. ಪರೋಕ್ಷವಾಗಿ ಅರಣ್ಯ ಇಲಾಖೆಯೇ ನಿಷೇಧಿಸಿರುವ ಪ್ಲಾಸ್ಟಿಕ್‌ ನೀರಿನ ಬಾಟಲ್‌ಗೆ ಉತ್ತೇಜನ ನೀಡುತ್ತಿದ್ದಾರೆಯೇ ಎಂಬ ಅನುಮಾನ ಮೂಡಿದೆ.

ಬಿಸಿಲಿನಲ್ಲೇ ಭಕ್ತರು ಬಸ್‌ಗಳನ್ನು ಹತ್ತುತ್ತಾರೆ:  ತಪ್ಪಲಿನಲ್ಲಿ ಕೆಎಸ್‌ಆರ್‌ಟಿಸಿಯಿಂದ ನಿರ್ಮಿಸಿರುವ ಕೌಂಟರ್‌ನಲ್ಲಿ ಟಿಕೆಟ್‌ ಖರೀದಿಸಿ ಬಸ್‌ ಹತ್ತಬೇಕಾಗಿದೆ. ಈ ಮಧ್ಯೆ ವಾರಾಂತ್ಯ, ರಜೆ, ವಿಶೇಷ ದಿನಗಳಲ್ಲಿ ಸಾವಿರಾರು ಪ್ರವಾಸಿಗರು ಆಗಮಿಸಲಿದ್ದು ಟಿಕೆಟ್‌ ಖರೀದಿಗೆ ಬಿಸಿಲಿನಲ್ಲಿ ಗಂಟೆಗಟ್ಟಲೇ ಕಾಯಬೇಕಿದೆ. ಜತೆಗೆ ಬಸ್ಸಿಗೂ ಕಾಯಬೇಕಾಗಿದೆ. ಕೆಲವರು ಮರದ ನೆರಳಿನ ಮೊರೆ ಹೋದರೆ, ಇನ್ನೂ ಕೆಲವರು ಬಿಸಿಲಿನಲ್ಲೇ ನಿಲ್ಲಬೇಕಿದೆ.

ಶೌಚಾಲಯಕ್ಕೆ ದುಪ್ಪಟ್ಟು ಹಣ: ಬೆಟ್ಟದ ತಪ್ಪಲಿನ ಪಾರ್ಕಿಂಗ್‌ ಪ್ರದೇಶದಲ್ಲಿನ ಶೌಚಾಲಯಗಳು ದುರ್ನಾತ ಬೀರುತ್ತಿವೆ. ಮೂಗು ಮುಚ್ಚಿಕೊಂಡೇ ಬಳಕೆ ಮಾಡಬೇಕಿದೆ. ಈ ಮಧ್ಯೆ ಪ್ರವಾಸಿಗರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದಾರೆ.

ಸಾಕಷ್ಟು ಆದಾಯವಿದ್ದರೂ ಅಭಿವೃದ್ಧಿಯಿಲ್ಲ:  ಪಾರ್ಕಿಂಗ್‌ ಶುಲ್ಕ, ಬಸ್‌ ಟಿಕೆಟ್‌, ದೇಗುಲ ಹುಂಡಿ ಹಣ ಸೇರಿ ದಾನಿಗಳಿಂದ ಸಾಕಷ್ಟು ಆದಾಯವಿದೆ. ಹೀಗಿದ್ದರೂ, ಮೂಲ ಸೌಕರ್ಯ ನೀಡಲು ಅರಣ್ಯ ಇಲಾಖೆ, ತಾಲೂಕು ಆಡಳಿತ ಮನಸ್ಸು ಮಾಡುತ್ತಿಲ್ಲವೆಂದು ಪರಿಸರವಾದಿ ಬೇಂಡರವಾಡಿ ಆನಂದ್‌ ದೂರಿದ್ದಾರೆ.

ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸೂಕ್ತ ಪಾರ್ಕಿಂಗ್‌ ವ್ಯವಸ್ಥೆ, ಕೆಟ್ಟುನಿಂತ ಶುದ್ಧ ಕುಡಿಯುವ ನೀರಿನ ಘಟಕದ ದುರಸ್ತಿ ಸೇರಿ ಇನ್ನಿತರ ಹಲವು ಸೌಲಭ್ಯ ಒದಗಿಸಲು ಕ್ರಮ ವಹಿಸಲಾಗುವುದು.-ಪಿ.ರಮೇಶ್‌ಕುಮಾರ್‌, ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ  

-ಬಸವರಾಜು ಎಸ್‌.ಹಂಗಳ

ಟಾಪ್ ನ್ಯೂಸ್

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-qeqwqew

Gundlupete: ಕೊಳೆತ ಸ್ಥಿತಿಯಲ್ಲಿ ಹುಲಿಯ ಮೃತ ದೇಹ ಪತ್ತೆ

1-wqewqe

Gundlupete; ಓವರ್ ಟೇಕ್ ಭರದಲ್ಲಿ ಅಪಘಾತ: ಬೈಕ್ ಸವಾರ ಮೃತ್ಯು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

6-uv-fusion

Uv Fusion: ಮೈಮನ ಪುಳಕಿತಗೊಳಿಸುವ ಅಯ್ಯನಕೆರೆ

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

5-vijayanagara

Rain: ಹಲವು ವರ್ಷಗಳ ನಂತರ ಕೆರೆಗಳಿಗೆ ನೀರು; ರೈತರ ಮೊಗದಲ್ಲಿ ಮಂದಹಾಸ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.