ಬಡವರಿಗೆ ಸೌಲಭ್ಯ ಕಲ್ಪಿಸಲು ಸರ್ಕಾರ ವಿಫ‌ಲ


Team Udayavani, Dec 19, 2019, 3:00 AM IST

badavarige

ಚಾಮರಾಜನಗರ: ಭಾಗ್ಯ ಜ್ಯೋತಿ ಸೇರಿದಂತೆ ಬಡಜನರಿಗೆ ದೊರಕುತ್ತಿದ್ದ ಅನೇಕ ಸೌಲಭ್ಯಗಳನ್ನು ರಾಜ್ಯ ಸರ್ಕಾರ ಕಸಿದುಕೊಳ್ಳುತ್ತಿದೆ. ಇದರ ವಿರುದ್ಧ ಮುಂದಿನ ವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ ತಿಳಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನೇಕ ಇಲಾಖೆಗಳಲ್ಲಿ ಸರ್ಕಾರದಿಂದ ದೊರಕುತ್ತಿದ್ದ ಕಾನೂನು ಬದ್ಧ ಸೌಲಭ್ಯಗಳನ್ನು ತಲುಪಿಸಲು ಬಡವರ ಮೇಲೆ ದೌರ್ಜನ್ಯ ಮಾಡುತ್ತಿದೆ ಎಂದು ಆರೋಪಿಸಿದರು.

ವಿದ್ಯುತ್‌ ಸಂಪರ್ಕ ಕಡಿತ: ಬಡಜನರಿಗೆ ಉಚಿತ ವಿದ್ಯುತ್‌ ಕಲ್ಪಿಸುತ್ತಿದ್ದ ಭಾಗ್ಯಜ್ಯೋತಿ ಯೋಜನೆಯ ಹಣಕಟ್ಟುವಂತೆ ಸಾವಿರಾರು ಬಡ ಫ‌ಲಾನುಭವಿ ಮನೆಯ ವಿದ್ಯುತ್‌ ಸಂಪರ್ಕ ತೆಗೆದುಹಾಕಲಾಗುತ್ತಿದೆ. ಲೈನ್‌ಮ್ಯಾನ್‌ ಮೂಲಕ ದೌರ್ಜನ್ಯ ಮಾಡುತ್ತಿದ್ದಾರೆ. ಪ್ರತಿರೋಧ ವ್ಯಕ್ತಪಡಿಸುವ ಫ‌ಲಾನುಭವಿಯ ಮೇಲೆ ಕ್ರಿಮಿನಲ್‌ ಮೊಕದ್ದಮೆ ಹೂಡುತ್ತಿದ್ದಾರೆ. ಇದು ಖಂಡನೀಯವಾದದ್ದು, ಭಾಗ್ಯಜ್ಯೋತಿ ಯೋಜನೆಯಲ್ಲಿ 40 ಯುನಿಟ್‌ ಉಚಿತ ಎಂದು ಹೇಳುತ್ತಾರೆ. ಆದರೆ, 41ನೇ ಯುನಿಟ್‌ ವಿದ್ಯುತ್‌ ಬಳಕೆ ಮಾಡಿದರೆ ಹೆಚ್ಚುವರಿ ಒಂದು ಯುನಿಟ್‌ಗೆ ಹಣ ಕಟ್ಟಿಸಿಕೊಳ್ಳಬೇಕು. ಅದನ್ನು ಬಿಟ್ಟು 41 ಯುನಿಟ್‌ಗೂ ಪೂರ್ತಿ ಹಣ ಕಟ್ಟಿಸಿಕೊಳ್ಳುವ ಮೂಲಕ ಬಡವರಿಗೆ ಅನ್ಯಾಯ ಮಾಡಲಾಗುತ್ತಿದೆ. ಇದು ಬಹಳ ಅನ್ಯಾಯ ಎಂದು ದೂರಿದರು.

ಬಡವರ ಮೇಲೆ ದೌರ್ಜನ್ಯ: ಜಿಲ್ಲೆಯಲ್ಲಿ ಸ್ಮಶಾನ ಸಮಸ್ಯೆ, ಸಾಗುವಳಿ ಪತ್ರ ವಿತರಣೆ, ಇ-ಸ್ವತ್ತು ಸಮಸ್ಯೆ, ಸಾಗುವಳಿ ಚೀಟಿ ವಿತರಣೆಯಾದ ಫ‌ಲಾನುಭವಿಗಳಿಗೆ ಭೂಮಿಯನ್ನು ಖಾತೆ ಮಾಡಿಕೊಟ್ಟಿಲ್ಲ. ಪೋಡು ಮಾಡಿಲ್ಲ, ಜೀತವಿಮುಕ್ತ ಸಮಸ್ಯೆ, ಗುತ್ತಿಗೆ ನೌಕರರ ಸಮಸ್ಯೆ, ವಿವಿಧ ನಿಗಮಗಳಲ್ಲಿ, ಬ್ಯಾಂಕ್‌ಗಳಲ್ಲಿ ಆಧಾರ್‌ ಕಾರ್ಡ್‌ ವಿತರಣೆಯಲ್ಲಿ ಬಡವರ ಮೇಲೆ ದೌರ್ಜನ್ಯಗಳು ನಡೆಯುತ್ತಿದೆ. ಇವೆಲ್ಲ ಸಮಸ್ಯೆಗಳನ್ನು ರಾಜ್ಯ ಸರ್ಕಾರ, ಜಿಲ್ಲಾಡಳಿತದ ಗಮನಕ್ಕೆ ತರಲು ಮುಂದಿನ ವಾರ ನಮ್ಮ ಪಕ್ಷದ ವತಿಯಿಂದ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

ನಮ್ಮ ಸಂಸ್ಕೃತಿಗೆ ಧಕ್ಕೆ: ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರ ರಚನೆಯಾದ ಮೇಲೆ ದೇವಸ್ಥಾನದ ಮುಂಭಾಗದಲ್ಲಿ ತಮಟೆ ಹೊಡೆಯುವಂತಿಲ್ಲ. ಕಂಸಾಳೆ ಹೊಡೆಯುವಂತಿಲ್ಲ, ಜಾನಪದ ಹಾಡು ಹಾಡುವಂತಿಲ್ಲ, ರಜೆ ಹೊಡೆಯುವಂತಿಲ್ಲ ಇದರಿಂದ ನಮ್ಮ ಸಂಸ್ಕೃತಿಗೆ ಧಕ್ಕೆಯಾಗಿದೆ. ಭಕ್ತರನ್ನು ಭಿಕ್ಷುಕರಂತೆ ನೋಡುವ ವಾತಾವರಣ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

ಆಧಾರ್‌ ಕಾರ್ಡ್‌ ನೋಂದಣಿ, ತಿದ್ದುಪಡಿ ಕೇಂದ್ರವನ್ನು ಗ್ರಾಮ ಪಂಚಾಯ್ತಿಗಳಿಗೆ ವಿಸ್ತರಿಸಿ, ಬಡವರಿಗೆ ಅನುಕೂಲ ಮಾಡಿಕೊಡಬೇಕು. ಬ್ಯಾಂಕ್‌ಗಳ, ಖಾಸಗಿ ಬ್ಯಾಂಕ್‌ಗಳ ಸಾಲ ವಸೂಲಾತಿಯಲ್ಲಿ ಬಡವರ ಮೇಲೆ ದೌರ್ಜನ್ಯ ಮಾಡುತ್ತಿವೆ. ಅಲ್ಲದೆ, ಗ್ರಾಮೀಣ ಪ್ರದೇಶಗಳಲ್ಲಿ ಖಾಸಗಿ ಹಣಕಾಸಿನ ಸಂಘ-ಸಂಸ್ಥೆಗಳು ಸಾಲ ನೀಡಿ, ಸಾಲ ವಸೂಲಾತಿಯಲ್ಲಿ ಹಿಂಬದಿಯಿಂದ ದೊಡ್ಡ ದೌರ್ಜನ್ಯ ನೀಡುತ್ತಿದೆ ಎಂದು ಹೇಳಿದರು.

ಅನುದಾನ ಬೇರೆ ಯೋಜನೆಗೆ ಬಳಸುವಂತಿಲ್ಲ: ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿಯಲ್ಲಿ ಶೇ.39ರಷ್ಟು ಅನುದಾನವನ್ನು ಮಾತ್ರ ಖರ್ಚು ಮಾಡಲಾಗಿದೆ. ಬಾಕಿ ಉಳಿಕೆ ಅನುದಾನವನ್ನು ಬೇರೆ ಬೇರೆ ಇಲಾಖೆಗಳಿಗೆ ಖರ್ಚು ಮಾಡುವಂತೆ ಸಮಾಜ ಕಲ್ಯಾಣ ಸಚಿವ ಹಾಗೂ ಉಪಮುಖ್ಯಮಂತ್ರಿ ಗೋವಿಂದಕಾರಜೋಳ ಹೇಳಿದ್ದಾರೆ. ಎಸ್‌ಸಿ, ಎಸ್‌ಟಿಗಳಿಗೆ ಮೀಸಲಾಗಿರುವ ಅನುದಾನವನ್ನು ಬೇರೆ ಯೋಜನೆಗಳಿಗೆ ಬಳಸುವಂತಿಲ್ಲ ಎಂದು ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬಿಎಸ್‌ಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬ.ಮ.ಕೃಷ್ಣಮೂರ್ತಿ, ಜಿಲ್ಲಾ ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ, ತಾಲೂಕು ಅಧ್ಯಕ್ಷ ಎಸ್‌.ಪಿ.ಮಹೇಶ್‌, ಖಜಾಂಚಿ ರಾಜೇಂದ್ರ ಹಾಜರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.