ಗ್ರಾಮ ಪಂಚಾಯತ್ ಚುನಾವಣೆಗೆ ರಾಜಕೀಯ ಪಕ್ಷಗಳ ಸಿದ್ಧತೆ


Team Udayavani, Oct 15, 2020, 6:24 PM IST

ಗ್ರಾಮ ಪಂಚಾಯತ್ ಚುನಾವಣೆಗೆ ರಾಜಕೀಯ ಪಕ್ಷಗಳ ಸಿದ್ಧತೆ

ಚಾಮರಾಜನಗರ: ಡಿಸೆಂಬರ್‌ ಒಳಗೆ ಗ್ರಾ.ಪಂ. ಚುನಾವಣೆಗಳನ್ನು ನಡೆಸಬೇಕೆಂದು ಚುನಾವಣಾ ಆಯೋಗ ರಾಜ್ಯ ಸರ್ಕಾರಕ್ಕೆ
ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ವಾಸ್ತವವಾಗಿ ಆಯೋಗದ ನಿರ್ದೇಶನಕ್ಕೂ ಮುಂಚೆಯೇ ಯಾವುದೇ ಕ್ಷಣದಲ್ಲೂ ಗ್ರಾ.ಪಂ. ಚುನಾವಣೆ ನಡೆಯಬಹುದೆಂದು ಪ್ರಮುಖ ರಾಜಕೀಯ ಪಕ್ಷಗಳು ಚಟುವಟಿಕೆಗಳನ್ನು ನಡೆಸುತ್ತಲೇಬಂದಿವೆ.ಈಗ ಆಚಟುವಟಿಕೆಗಳು ಮತ್ತಷ್ಟು ಹೆಚ್ಚಾಗಲಿವೆ.ಕೋವಿಡ್‌ ಕಾರಣದಿಂದ ಜನ ಸಂದಣಿ ಸೇರ ಬಾರದು, ನೂರಾರು ಸಂಖ್ಯೆಯಲ್ಲಿ ಜನರನ್ನು ಸೇರಿಸಿ ಸಭೆ ನಡೆಸಬಾರದು ಎಂಬ ಮುನ್ನೆಚ್ಚರಿಕಾ ಕ್ರಮಗಳನ್ನು ಆರೋಗ್ಯ ಇಲಾಖೆ ಸೂಚಿಸಿದರೂ ರಾಜಕೀಯ ಪಕ್ಷಗಳು ಅದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಒಂದು ತಿಂಗಳಹಿಂದೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಸಭೆ ನಡೆಸಿದ್ದಾರೆ. ಗುಂಡ್ಲು ಪೇಟೆ ಚಾಮರಾಜನಗರ ಕ್ಷೇತ್ರಗಳಿಗೆ ಭೇಟಿ ನೀಡಿದ್ದ ಅವರು, ಚಾಮರಾಜನಗರದ ನಂದಿ ಭವನದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ್ದರು. ಕೋವಿಡ್‌ ಸಾಂಕ್ರಾಮಿಕ ಹರಡುವ ಆತಂಕದ ನಡುವೆಯೂ ನೂರಾರು
ಕಾರ್ಯಕರ್ತರನ್ನು ಸೇರಿಸಿ ಸಭೆ ನಡೆಸಲಾಗಿತ್ತು.

ಇದನ್ನೂ ಓದಿ:ಟಿಆರ್ ಪಿ ಹಗರಣ: ಮುಂಬೈ ಪೊಲೀಸರ ವಿರುದ್ಧದ ರಿಪಬ್ಲಿಕ್ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

ಮುಂಬರುವ ಗ್ರಾಪಂ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡೇ ಈ ಸಭೆಗಳನ್ನು ನಡೆಸಲಾಯಿತು ಎಂಬುದು ರಾಜಕೀಯ
ತಿಳಿದವರಿಗೆ ಗೊತ್ತಿರದ ವಿಷಯವೇನಲ್ಲ. ಇನ್ನು, ಕಾಂಗ್ರೆಸ್‌ ಪಕ್ಷ ಸ್ವಾಮಿ ಕಾರ್ಯ ಸ್ವಕಾರ್ಯ ಎಂಬಂತೆ, ಕೋವಿಡ್‌ ತಪಾಸಣೆ
ಹೆಸರಿನಲ್ಲಿ ಅಭಯ ಹಸ್ತ ಎಂಬ ಕಾರ್ಯಕ್ರಮವನ್ನುಹಳ್ಳಿಹಳ್ಳಿಗಳಲ್ಲಿ ನಡೆಸುತ್ತಿದೆ. ಪಕ್ಷದ ಮುಖಂಡರು, ಗ್ರಾಮಗಳಿಗೆ ತೆರಳಿ ಜನರ ಹಣೆ ಮೇಲೆ ಜ್ವರ ಮಾಪಕ ಹಿಡಿಯುವುದೇ ಕೋವಿಡ್‌ ತಪಾಸಣೆ. ಶಾಸಕರು, ಪಕ್ಷದ ಅಧ್ಯಕ್ಷರು ಗ್ರಾಮಗಳಿಗೆ ತೆರಳಿ, ಜನರ ಗುಂಪು ಸೇರಿಸಿ ತಪಾಸಣೆನಡೆಸಿದ್ದಾರೆ.ಇದುಚುನಾವಣೆ ಉದ್ದೇಶವಿಟ್ಟುಕೊಂಡೇ ನಡೆಸಿದ ಕಾರ್ಯಕ್ರಮ ಎಂಬುದು ತಿಳಿಯದ ಸಂಗತಿಯಲ್ಲ. ಚುನಾವಣೆ ಕಾರಣಕ್ಕೇ ಪ್ರಮುಖ ಪಕ್ಷಗಳು ಕೋವಿಡ್‌ ನಂತಹ ಗಂಭೀರ ಸಮಸ್ಯೆ ನಡುವೆಯೂ ಈ
ಕಾರ್ಯಕ್ರಮಗಳನ್ನು ನಡೆಸಿವೆ.

ಇದನ್ನೂ ಓದಿ: ಡೋಣಿ ನದಿ ಪ್ರವಾಹ: ನಡುಗಡ್ಡೆಯಲ್ಲಿ ಸಿಲುಕಿದ ಕಾರ್ಮಿಕರು! ರಕ್ಷಣಾ ಕಾರ್ಯ ಚುರುಕು

ಗ್ರಾಪಂಗಳ ಅವಧಿ ಮುಗಿದು 3-4 ತಿಂಗಳಾಗಿರುವುದರಿಂದ ಹೊಸ ಪಂಚಾಯ್ತಿಗಳನ್ನು ರಚಿಸಲು ಚುನಾವಣೆ ನಡೆಸಬೇಕೆಂಬುದು ಸ್ಥಳೀಯ ಆಕಾಂಕ್ಷಿಗಳ ಒತ್ತಾಯ. ಇನ್ನು ಕೆಲವರು, ಕೋವಿಡ್‌ ಇದ್ದರೂ ಅನೇಕ ಚಟುವಟಿಕೆ ಅವ್ಯಾಹತವಾಗಿ ಸಾಗಿವೆ. ಚುನಾವಣಾ ಆಯೋಗ ಕೂಡ ಚುನಾವಣೆ ನಡೆಸುವ ಬಗ್ಗೆ ಒಲವು ತೋರುತ್ತಿರುವುದು ಚುನಾವಣೆ ಪರ ಇರುವವರಿಗೆ
ಒತ್ತಾಸೆಯಾಗಿದೆ. ಚುನಾವಣೆ ಖಚಿತವಾದರೆ ಇನ್ನಷ್ಟು ರಾಜಕೀಯ ಬೆಳವಣಿಗೆ ಚುರುಕುಗೊಳ್ಳಲಿವೆ.

ಇಡೀ ಜಿಲ್ಲೆಯಾದ್ಯಂತ ಗ್ರಾ.ಪಂ. ಚುನಾವಣೆ ಹಿನ್ನೆಲೆಯಲ್ಲಿ ಮಹಾಶಕ್ತಿ ಕೇಂದ್ರಗಳ ಸಭೆಗಳು ಆರಂಭವಾಗಿವೆ. ಗ್ರಾಮಗಳಲ್ಲಿ ಸಭೆ ಆರಂಭಿಸಲಾಗಿದೆ. ಇಡೀ ಜಿಲ್ಲೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುವ ಗುರಿ ಹೊಂದಿದ್ದೇವೆ. ಚುನಾವಣಾ ಆಯೋಗದ ಸೂಚನೆ ಪಾಲಿಸಿ ಚುನಾವಣೆ ಎದುರಿಸುತ್ತೇವೆ. ಚುನಾವಣೆಗೆ ತಯಾರಾಗಿದ್ದೇವೆ.
– ಆರ್‌.ಸುಂದರ್‌, ಅಧ್ಯಕ್ಷ, ಜಿಲ್ಲಾ ಬಿಜೆಪಿ

ಗ್ರಾಪಂ ಚುನಾವಣೆ ಎದುರಿಸಲು ಕಾಂಗ್ರೆಸ್‌ ಸದಾ ಸಿದ್ಧವಿದೆ. ಹೋಬಳಿ ಮಟ್ಟದ ಸಭೆಗಳನ್ನು ನಡೆಸಲಾಗುತ್ತಿದೆ. ನಿನ್ನೆ ಸಹ
ಹರವೆ ಭಾಗದ ಸಭೆ ನಡೆಸಿದೆವು. ಅಲ್ಲದೇ ಜಿಪಂ ಕ್ಷೇತ್ರ ವ್ಯಾಪ್ತಿಯಲ್ಲಿ ಸಭೆಗಳನ್ನು ನಡೆಸುತ್ತಿದ್ದೇವೆ. ಚುನಾವಣೆಗೆ ಸಂಘಟನೆ ನಡೆಯುತ್ತಿದೆ.
– ಪಿ.ಮರಿಸ್ವಾಮಿ, ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್‌

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.