ನೀರಿನ ಸಮಸ್ಯೆಗೆ ಅಂತರ್ಜಲ ಮರುಪೂರಣ ಪರಿಹಾರ


Team Udayavani, Feb 4, 2020, 3:00 AM IST

neerina

ಚಾಮರಾಜನಗರ: ಮುಂಬರುವ ದಿನಗಳಲ್ಲಿ ಎದುರಾಗಬಹುದಾದ ನಿರೀನ ಸಮಸ್ಯೆ ತಪ್ಪಿಸಲು ಅಂತರ್ಜಲ ಮರುಪೂರಣ ಕಾರ್ಯ ಅತ್ಯವಶ್ಯಕ ಎಂದು ಜಿಯೊ ರೈನ್‌ ವಾಟರ್‌ ಬೋರ್ಡ್‌ನ ಭೂವಿಜ್ಞಾನಿ ಎನ್‌.ಜೆ.ದೇವರಾಜ್‌ ರೆಡ್ಡಿ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಸಹಯೋಗದಲ್ಲಿ ನಡೆದ ಜಲಮೂಲಗಳ ಪುನಶ್ಚೇತನ ಹಾಗೂ ವೈಜ್ಞಾನಿಕ ನಿರ್ಮಾಣ ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಹೆಚ್ಚುತ್ತಿರುವ ನೀರಿನ ಅಭಾವ: ಭಾರತ ದೇಶ ಪ್ರಪಂಚದಲ್ಲೇ ಎರಡನೇ ಅತೀ ದೊಡ್ಡ ಜಲ ಸಂಪತ್ತನ್ನು ಹೊಂದಿದೆ. ಹೀಗಿದ್ದೂ ಸಹ ದಿನ ಕಳೆದಂತೆ ನೀರಿನ ಅಭಾವ ಹೆಚ್ಚುತ್ತಲಿದೆ. ಸಾವಿರಾರು ಕೆರೆಗಳಿದ್ದರೂ, ವರ್ಷ ಪೂರ್ತಿ ನೀರು ಹೊಂದಿರದ ಕಾರಣ ಹಾಗೂ ಮಾಲಿನ್ಯದಿಂದಾಗಿ ಬಳಕೆಗೆ ಅಲಭ್ಯವಾಗಿದೆ. ಈ ಎಲ್ಲಾ ಸಮಸ್ಯೆಗಳಿಂದ ಹೊರ ಬರಲು ವೈಜ್ಞಾನಿಕ ರೀತಿಯಲ್ಲಿ ಅಂತರ್ಜಲ ಮರುಪೂರಣ ಕಾರ್ಯ ಅಗತ್ಯವಾಗಿ ಆಗಬೇಕಿದೆ ಎಂದರು.

ಮಳೆ ಕೊರತೆಯಿಂದ ಅಂತರ್ಜಲ ಕಡಿಮೆ: ಮಳೆ ಕೊರತೆಯಿಂದಾಗಿ ಅಂತರ್ಜಲ ಪ್ರಮಾಣ ಕಡಿಮೆಯಾಗಿದೆ. ಸಮುದ್ರ ತೀರ ಅಥವಾ ನೀರು ಹರಿವಿನ ಹತ್ತಿರ ಕೊಳವೆ ಬಾವಿ ಕೊರೆದರೆ ನೀರು ಬರುತ್ತದೆ ಎಂಬ ಮನಸ್ಥಿತಿ ಇದೆ. ಆದರೆ ಅಂತರ್ಜಲದ ಬಗೆಗೆ ಇದ್ಯಾವುದು ಪೂರ್ಣ ಸತ್ಯವಲ್ಲ. ಮಳೆ ಪ್ರಮಾಣ ಹೆಚ್ಚಿರುವ ಜಾಗದಲ್ಲೂ ಅಂತರ್ಜಲ ಮಟ್ಟ ಕಡಿಮೆ ಇರುವ ಎಷ್ಟೋ ಉದಾಹರಣೆಗಳಿವೆ. ನೀರು ಹತ್ತಿರವಿರುವೆಡೆ ತೆರೆದ ಕೊಳವೆ ಬಾವಿಗಳು ವಿಫ‌ಲವಾದ ನಿದರ್ಶನಗಳಿವೆ. ನೈಜವಾಗಿ ಮಾನವ ಅನುಸರಿಸುವ ಅವೈಜ್ಞಾನಿಕ ಪದ್ಧತಿಗಳು ಅಂತರ್ಜಲ ಕುಸಿತಕ್ಕೆ ಕಾರಣವಾಗಿದೆ ಎಂದು ತಿಳಿಸಿದರು.

ಅಂತರ್ಜಲ ಮರುಪೂರಣದಿಂದ ಜಲ ಪ್ರಮಾಣ ಹೆಚ್ಚಳ: ನೀರಿನ ಸಮಸ್ಯೆಗಳನ್ನು ದೀರ್ಘ‌ಕಾಲಿಕವಾಗಿ ನಿವಾರಿಸುವ ನಿಟ್ಟಿನಲ್ಲಿ ಅಂತರ್ಜಲ ಮರುಪೂರಣ ಕಾರ್ಯವನ್ನು ಮಾಡಲಾಗುತ್ತದೆ. ನೀರು ಬತ್ತಿ ಹೋದ ಅಥವಾ ಬಾರದೇ ಇರುವ ಕೊಳವೆ ಬಾವಿಗಳನ್ನು ಪರೀಕ್ಷಿಸಿ, ಅಲ್ಲಿ ನೀರಿನ ಪೊರೆಗಳ ಇರುವಿಕೆ ಕಂಡುಬಂದಲ್ಲಿ ಮರುಪೂರಣ ಪದ್ಧತಿಯನ್ನು ಅನುಷ್ಠಾಗೊಳಿಸಲಾಗುತ್ತದೆ. ಇದರಿಂದ ಜಲ ಪ್ರಮಾಣ ಹೆಚ್ಚುವು ದಲ್ಲದೇ ನೀರು ಸದಾ ಕಾಲ ಇರುವಂತೆ ಮಾಡುತ್ತದೆ ಎಂದು ಮಾಹಿತಿ ನೀಡಿದರು.

ನೀರನ್ನು ಪೋಲು ಮಾಡದಿರಿ: ನೀರಿನ ಸಮಸ್ಯೆಯನ್ನು ಮೂಲದಿಂದ ಸರಿಪಡಿಸಿಕೊಳ್ಳಲು ಪ್ರತಿಯೊಬ್ಬರ ಪಾಲ್ಗೊಳ್ಳುವಿಕೆ ಅಗತ್ಯ. ನೀರನ್ನು ಅನವಶ್ಯಕವಾಗಿ ಪೋಲು ಮಾಡದಂತೆ ಎಚ್ಚರ ವಹಿಸುವುದು, ಮಳೆ ನೀರು ಕೋಯ್ಲು ಮೂಲಕ ಮಳೆ ನೀರಿನ ಶೇಖರಣೆ ಮತ್ತು ಬಳಕೆಯಂಥಹ ಕೆಲವು ಉಪಕ್ರಮಗಳು ಎಲ್ಲರಿಂದ ಆಗಬೇಕು. ಕೊಳವೆ ಬಾವಿಗಳ ಬದಲಾಗಿ ತೆರೆದ ಬಾವಿಗಳಿಗೆ ಆದ್ಯತೆ ನೀಡಬೇಕು. ಇದು ಅಂತರ್ಜಲ ಮಟ್ಟವನ್ನು ಕಾಪಾಡಲು ಸಹಾಯಕಯವಾಗಲಿದೆ ಎಂದು ತಿಳಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ಉಪ ಕಾರ್ಯದರ್ಶಿ ಧರಣೇಶ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.