ಉಸಿರಾಡಲು ಯೋಗ್ಯ ಗಾಳಿಗೆ ಹೆಚ್ಚು ಮರ ಬೆಳೆಸಿ


Team Udayavani, May 11, 2019, 3:00 AM IST

usiradalu

ಚಾಮರಾಜನಗರ: ಭೂಮಿಗೆ ಹಸಿರ ಹೊದಿಕೆಯಾಗಬೇಕಿದೆ ರಸ್ತೆಗಳು, ಕೆರೆ ದಂಡೆಗಳು, ವಸತಿ ಪ್ರದೇಶಗಳು, ವಸತಿ ಯೋಜನೆಗಳು, ಶಾಲೆಗಳು, ವಸತಿ ನಿಲಯಗಳು, ಆಸ್ಪತ್ರೆಗಳು, ಕಚೇರಿಗಳು ಇತ್ಯಾದಿ ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚು ಹೆಚ್ಚು ಗಿಡ ಮರಗಳನ್ನು ಬೆಳೆಸಬೇಕು ಇದರಿಂದ ಉಸಿರಾಡಲು ಯೋಗ್ಯ ಗಾಳಿ ದೊರೆಯುತ್ತದೆ ಎಂದು ಬೆಂಗಳೂರು ರೋಟರಿ ಕೋಟಿ ನಾಟಿ ಅಧ್ಯಕ್ಷ ಹಾಗೂ ನಿವೃತ್ತ ಐಎಎಸ್‌ ಅಧಿಕಾರಿ ಕೆ.ಅಮರನಾರಾಯಣ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ, ಜಿಪಂ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಿಂದ ಸಮಗ್ರ ಹಸಿರೀಕರಣ, ಜಲ ಮರುಪೂರಣದ ರೂಪುರೇಷೆಗಳು ಹಾಗೂ ಘನ, ದ್ರವ ತ್ಯಾಜ್ಯಗಳ ವೈಜ್ಞಾನಿಕ ನಿರ್ವಹಣೆ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದರು.

ಹಸಿರು ಉಳಿಸುವ ಕೆಲಸ ಮಾಡಿ: ಚಾಮರಾಜನಗರ ಜಿಲ್ಲೆಯು ಕೋಟಿ ನಾಟಿ ಕಾರ್ಯಕ್ರಮ ಅನುಷ್ಠಾನ ಮಾಡುವುದರಿಂದ ಹಸಿರೀಕರಣವಾಗಲಿದೆ. ಅಧಿಕಾರಿಗಳ ಜತೆ ಸ್ವಯಂಸೇವಾ ಸಂಸ್ಥೆಗಳು ಜನರ ಸ್ಪಂದನೆ ಸಹಕಾರದಿಂದ ಹಸಿರು ಉಳಿಸುವ ಕೆಲಸ ಸಾಧ್ಯವಾಗಲಿದೆ ಎಂದರು.

ಕೋಟಿ ನಾಟಿ ಕಾರ್ಯಕ್ರಮದಡಿ ಪ್ರತಿ ಜಿಲ್ಲೆಗೆ 1 ಕೋಟಿ ಸಸಿಗಳನ್ನು ನೆಡುವುದರಿಂದ ಹಸಿರೀಕರಣ ಮಾಡುವುದು ನಮ್ಮ ಉದ್ದೇಶವಾಗಿದೆ. ಕೋಲಾರದಲ್ಲಿ ಈಗಾಗಲೇ 32 ಲಕ್ಷಕ್ಕೂ ಹೆಚ್ಚು ಸಸಿ ಗಿಡಗಳನ್ನು ಹಾಕಲಾಗಿದೆ ಎಂದು ಮಾಹಿತಿ ನೀಡಿದರು.

ಪರಿಸರ ಮಾಲಿನ್ಯ ಕೆಲಸಕ್ಕೆ ಕಡಿವಾಣ ಹಾಕಿ: ಭಾರತ ವೈವಿದ್ಯಮಯದಿಂದ ಕೂಡಿರುವ ದೇಶ. ಪ್ರಸ್ತುತ ದಿನಗಳಲ್ಲಿ ಮಾನವನ ಸ್ವಯಂಕೃತ ಅಪರಾಧಗಳಿಂದ ಕಣಿವೆ ಪ್ರದೇಶಗಳು ಮಾಲಿನ್ಯವಾಗುತ್ತಿವೆ, ಸರೋವರ ವಿಷಪೂರಿತವಾಗಿ ಮಾರ್ಪಡುತ್ತಿವೆ, ಧ್ರುವಗಳು ಕರಗುತ್ತಿವೆ, ನದಿಗಳು ಮಾಲಿನ್ಯ ವಾಗುತ್ತಿವೆ ಇಂತಹ ಪರಿಸರ ಮಾಲಿನ್ಯ ಕೆಲಸಗಳಿಗೆ ಕಡಿವಾಣ ಹಾಕಬೇಕಿದೆ ಎಂದರು.

ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಕಾಡಿನ ಹಸಿರು ಪ್ರದೇಶವನ್ನು ಇನ್ನಷ್ಟು ಹಸುರೀಕರಣ ಗೊಳಿಸಿ, ಬಂಜರು ಭೂಮಿಯನ್ನು ಹಸಿರು ಮಾಡಲು ಮುಂದಾಗಬೇಕು. ಪ್ರಕೃತಿಯ ಮೂಲವಾದ ಮರ ಗಿಡಗಳನ್ನು ನಾಶ ಮಾಡದೆ ಉಳಿಸಿ ಬೆಳೆಸುವುದರಿಂದ ಮಳೆಯು, ಇಳೆಗೆ ಸರಿಯಾದ ಸಮಯಕ್ಕೆ ಬೀಳುತ್ತದೆ ಎಂದು ತಿಳಿಸಿದರು.

ಹಸಿರೀಕರಣ ಅತ್ಯಗತ್ಯ: ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್‌.ಲತಾಕುಮಾರಿ ಮಾತನಾಡಿ, ಚಾಮರಾಜನಗರ ಜಿಲ್ಲೆಯು ಶೇ.52 ರಷ್ಟು ಕಾಡಿನ ಪ್ರದೇಶದಿಂದ ಕೂಡಿರುವುದು ವಿಶೇಷವಾಗಿದೆ. ಆದರೆ ಇನ್ನುಳಿದ ಭೂ ಪ್ರದೇಶಗಳಲ್ಲಿ ಅತಿ ಹೆಚ್ಚು ಬಂಜರು ಭೂಮಿ ಬಯಲು ಪದೇಶದಿಂದ ಕೂಡಿರುವುದರಿಂದ ಹಸಿರೀಕರಣ ಅತ್ಯಗತ್ಯವಾಗಿದೆ ಎಂದರು.

ನಾಗರಿಕರು ಶ್ರಮಿಸಿ: ಸ್ವಯಂ ಸೇವಾಸಂಸ್ಥೆಗಳು, ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಜನತೆಯ ಸಹಭಾಗಿತ್ವದೊಂದಿಗೆ ನಮ್ಮ ನಾಡನ್ನು ಹಸಿರೀಕರಣ ಮಾಡಿ ಸುಂದರ ಗೊಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ಪ್ರಕೃತಿ ಋಣ ಹಾಗೂ ತಾಯಿ ಋಣ ಎಂದೆಂದೂ ತೀರಿಸಲಾಗದು. ನಿಸರ್ಗದ ಉಳಿವಿಗೆ ಪ್ರತಿಯೊಬ್ಬ ನಾಗರಿಕ ಅದಷ್ಟೂ ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಸೂಕ್ತ ಯೋಜನೆ ರೂಪಿಸಿ: ಜಿಲ್ಲಾದ್ಯಂತ 13 ಸಾವಿರ ಕೊಳವೆ ಬಾವಿಗಳಿದ್ದು ಈ ಪೈಕಿ 8 ಸಾವಿರ ಕೊಳವೆ ಬಾವಿಗಳು ಬಳಕೆಯಲ್ಲಿವೆ ಇನ್ನುಳಿದ ಕೊಳವೆಬಾವಿಗಳು ಹಲವಾರು ಕಾರಣಗಳಿಂದ ಬಳಕೆಗೆ ಬಾರದಾಗಿದೆ. ಇದರ ಮರುಬಳಕೆ ಮಾಡುವ ನಿಟ್ಟಿನಲ್ಲಿ ಸೂಕ್ತ ಯೋಜನೆಗಳನ್ನು ರೂಪಿಸಿಕೊಂಡು ನಾವು ಕಾರ್ಯನಿರ್ವಹಿಸಬೇಕಾಗಿದೆ ಎಂದು ತಿಳಿಸಿದರು.

ಅಂತರ್ಜಲ ಅಭಿವೃದ್ಧಿಗೊಳಿಸಿ: ಜಿಲ್ಲೆಯ ಅತಿ ಹೆಚ್ಚು ಭೂ ಪ್ರದೇಶವು ಕಾಡಿನಿಂದ ಕೂಡಿದ್ದರೂ ಸಹ ಪ್ರಕೃತಿ ವಿಕೋಪದಿಂದ ಮಳೆ ಸರಿಯಾದ ಸಮಯಕ್ಕೆ ಬಾರದ ಕಾರಣ ನೀರಿನ ಸಮಸ್ಯೆ ಮತ್ತು ಬರದ ಪರಿಸ್ಥಿತಿ ತಲೆದೋರುತ್ತದೆ. ಇಂತಹ ವಿಷಯದಲ್ಲಿ ಬಹಳಷ್ಟು ಎಚ್ಚರ ವಹಿಸಬೇಕು ಸಾಂಪ್ರದಾಯಿಕ ನೀರಿನ ಮೂಲಗಳ ವ್ಯವಸ್ಥೆಗಳನ್ನು ಉಳಿಸಿ ಅಂತರ್ಜಲ ಅಭಿವೃದ್ಧಿ ಪಡಿಸಬೇಕು ಎಂದು ಲತಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಪಂ ಉಪಕಾರ್ಯದರ್ಶಿ ಹನುಮನರಸಯ್ಯ, ಸುಸ್ಥಿರ ಅಭಿವೃದ್ದಿ ಸಂಸ್ಥೆ ರಮೇಶ್‌ ಕಿಕ್ಕೇರಿ, ರೋಟರಿ ಸಂಸ್ಥೆಯ ರವಿ ಶಂಕರ್‌, ನಾಗೇಶ್‌, ಅರಣ್ಯಾಧಿಕಾರಿ ಏಳು ಕೊಂಡಲು ಇದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.