ಗುಂಬಳ್ಳಿ ಗ್ರಾಮ ಪಂಚಾಯಿತಿಗೆ 3ನೇ ಬಾರಿ ಗಾಂಧಿ ಗ್ರಾಮ ಪುರಸ್ಕಾರ


Team Udayavani, Sep 24, 2021, 3:26 PM IST

ಗುಂಬಳ್ಳಿ ಗ್ರಾಮ ಪಂಚಾಯಿತಿಗೆ 3ನೇ ಬಾರಿ ಗಾಂಧಿ ಗ್ರಾಮ ಪುರಸ್ಕಾರ

ಯಳಂದೂರು: ತಾಲೂಕಿನ ಗುಂಬಳ್ಳಿ ಗ್ರಾಮ ಪಂಚಾಯಿತಿಗೆ 2020-21 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾಗಿದೆ. ಮೂರನೇ ಬಾರಿ ರಾಜ್ಯಮಟ್ಟದ ಪ್ರಶಸ್ತಿ ಪಡೆಯುತ್ತಿರುವುದು ವಿಶೇಷವಾಗಿದೆ.

ಬಿಳಿಗಿರಿರಂಗನಬೆಟ್ಟದ ತಪ್ಪಲಿನಲ್ಲಿರುವ ಈ ಪಂಚಾಯಿತಿಯು ಗುಂಬಳ್ಳಿ, ಕೃಷ್ಣಾಪುರ, ಉಪ್ಪಿನ ಮೋಳೆ, ಕೊಮಾರಪುರ ಗ್ರಾಮಗಳನ್ನು ಒಳಗೊಂಡಿದೆ. 17 ಜನ ಸದಸ್ಯ ಬಲದ ಪಂಚಾಯಿತಿ ಯಲ್ಲಿ 2011ರ ಜನಗಣತಿ ಪ್ರಕಾರ 7,979 ಜನಸಂಖ್ಯೆ ಇದೆ. ನರೇಗಾದಡಿ 2021-21 ನೇ ಸಾಲಿನಲ್ಲಿ 39,838 ಮಾನವ ದಿನಗಳನ್ನು ಸೃಜಿಸಲಾಗಿದೆ. ಕೆರೆ, ಕಟ್ಟೆ, ಕಾಲುವೆ ಸೇರಿದಂತೆ 84 ಸಮುದಾಯ ಕಾಮಗಾರಿ ಗಳು, ವೈಯುಕ್ತಿ ಕಾಮಗಾರಿಗಳಲ್ಲಿ 45 ಇಂಗುಗುಂಡಿ, 85 ಕೈ ತೋಟ, 12 ದನದ ಕೊಟ್ಟಿಗೆ, 15 ವಸತಿ ಯೋಜನೆ ಹಾಗೂ 1 ಗೊಬ್ಬರದ ಗುಂಡಿ, 79 ಶೌಚಗೃಹ ನಿರ್ಮಿಸಲಾಗಿದೆ.

ಕುಡಿಯುವ ನೀರು, ಸುಗಮ ಆಡಳಿತದ ಸಾಧನೆ, ಗ್ರಾಮಸಭೆಗಳ ಆಯೋಜನೆ, ಸ್ವಚ್ಛ ಭಾರತ್‌, ಮಿಷಿನ್‌ ತೆರಿಗೆ ವಸೂಲಾತಿ, 14 ನೇ ಹಣಕಾಸು ನೀತಿ, ಅರ್ಥಿಕ ಪ್ರಗತಿ, ವಿಶೇಷ ವಾರ್ಡ್‌, ಗ್ರಾಮ ಸಭೆ, ಜಮಾಬಂಧಿ, ಸಾಮಾಜಿಕ ಲೆಕ್ಕ ತಪಾಸಣೆ, ವಾರ್ಷಿಕ ವರದಿಯಲ್ಲಿ ಗ್ರಾಪಂ ಪ್ರಗತಿ ಸಾಧಿಸಿದೆ. 2000 ಗಿಡ: ಗ್ರಾಮ ಪಂಚಾಯಿತಿಯಲ್ಲಿ ಪ್ರಸಕ್ತ ವರ್ಷದಲ್ಲಿ 2000 ಗಿಡ ನೆಡಲಾಗಿದೆ. ಇದರೊಂದಿಗೆ ಹಸರೀಕರಣಕ್ಕೆ ಒತ್ತು ನೀಡ ಲಾಗಿದೆ. ಕೋವಿಡ್‌ ವೇಳೆ ಅಂಗನ ವಾಡಿ, ಆಶಾ ಕಾರ್ಯಕರ್ತೆಯರಿಗೆ, ವಾರಿ ಯರ್ಸ್‌ಗಳಿಗೆ ಆಹಾರ ಕಿಟ್‌ ವಿತರಿಸಲಾಗಿದೆ. ಸಕಾಲ ಯೋಜನೆಯಲ್ಲಿ 1,616 ಅರ್ಜಿಗಳು ಬಂದಿದ್ದು ಎಲ್ಲಾ ಅರ್ಜಿ ವಿಲೇವಾರಿ ಮಾಡಲಾಗಿದೆ. 118 ಇ-ಸ್ವತ್ತು, ಬಾಪೂಜಿ ಸೇವಾ ಕೇಂದ್ರದಿಂದ ಜಾತಿ, ಆದಾಯ ಪ್ರಮಾಣ ಪತ್ರ ಹಾಗೂ ವಾಸಸ್ಥಳ ದೃಢೀಕರಣ ಮತ್ತಿತರ ಸೇವೆಗಳನ್ನು ಒದಗಿಸಲಾಗಿದೆ.

ಇದನ್ನೂ ಓದಿ:ಕನಸು ನನಸಾಗಿಸಲು ವಯಸ್ಸಿನ ಹಂಗೇಕೆ?82ನೇ ವಯಸ್ಸಿನಲ್ಲಿ ಬಾಹ್ಯಾಕಾಶ ಪ್ರಯಾಣ…

ಅಭಿವೃದಿ ದೂರದೃಷ್ಟಿ ಗೆ ತೊಡಕಾಗಲಿಲ್ಲ ದೃಷ್ಟಿ ದೋಷ
ಗುಂಬಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹೇಶ್‌ಗೆ ದೃಷ್ಟಿ ದೋಷವಿದೆ. ದಿವ್ಯಾಂಗರಾಗಿರುವ ಇವರು ಪಂಚಾಯಿತಿಯ ಅಭಿವೃದ್ಧಿ ಕೆಲಸಗಳಲ್ಲಿ ಸದಾ ಮುಂದಿರುತ್ತಾರೆ. ಪ್ರತಿ ಕೆಲಸವನ್ನು ಖುದ್ದು ನಿಂತು ಪರಿಶೀಲಿಸಿ ಕ್ರಮ ವಹಿಸುವ ಇವರ ಕಾರ್ಯವೈಖರಿ ಇತರರಿಗೆ ಮಾದರಿಯಾಗಿದೆ. ಪಂಚಾಯಿತಿಗೆ 203 ಅಂಕ ಪಡೆಯುವುದರೊಂದಿಗೆ ಮೂರನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಲಭಿಸಿದೆ. ಅ.2 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

ನಮ್ಮ ಪಂಚಾಯಿತಿಗೆ 203 ಅಂಕಗಳು ಲಭಿಸಿವೆ. ಈ ಹಿಂದೆ 2016-17 ನೇ ಸಾಲು ಹಾಗೂ 17-18 ನೇ ಸಾಲಿನಲ್ಲಿ ಪ್ರಶಸ್ತಿಗೆ ನಮ್ಮ ಪಂಚಾಯಿತಿ ಭಾಜನವಾಗಿದ್ದು ಈಗ 3ನೇ ಬಾರಿ ಪ್ರಶಸ್ತಿ ಲಭಿಸಿದೆ. ಇದಕ್ಕೆ ನಿಗದಿಯಾಗಿದ್ದ ಬಹುತೇಕ ಮಾನದಂಡಗಳಲ್ಲಿ ಪಂಚಾಯಿತಿ ಪ್ರಗತಿ ಸಾಧಿಸಿದೆ. ಇದಕ್ಕೆ ಸಹಕರಿಸಿದ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಸಾಧಿಸಲಾಗುವುದು.
– ಮಹೇಶ್‌, ಪಿಡಿಒ ಗುಂಬಳ್ಳಿ ಗ್ರಾಪಂ

 

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.