ಗುಂಡ್ಲುಪೇಟೆ: ಕಾಂಗ್ರೆಸ್ ಅಭ್ಯರ್ಥಿ ಗಣೇಶ ಪ್ರಸಾದ್ ನಾಮಪತ್ರ ಸಲ್ಲಿಕೆ
Team Udayavani, Apr 13, 2023, 1:36 PM IST
ಗುಂಡ್ಲುಪೇಟೆ (ಚಾಮರಾಜನಗರ): ಪಟ್ಟಣದ ತಾಲೂಕು ಕಚೇರಿ ಸಭಾ ಭವನದಲ್ಲಿ ಗುಂಡ್ಲುಪೇಟೆ ಕಾಂಗ್ರೆಸ್ ಅಭ್ಯರ್ಥಿ ಎಚ್.ಎಂ.ಗಣೇಶಪ್ರಸಾದ್ ಇಂದು ತಮ್ಮ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಕೆ ಮಾಡಿದರು.
ಚುನಾವಣೆ ಅಧಿಕಾರ ಮಲ್ಲಿಕಾರ್ಜುನ್ ಅವರಿಗೆ ಗಣೇಶಪ್ರಸಾದ್ ಗುರುವಾರ ಮಧ್ಯಾಹ್ನ 1ಗಂಟೆ ಸಮಯದಲ್ಲಿ ಮೂರು ಸೆಟ್ ನಾಮಪತ್ರ ಸಲ್ಲಿಕೆ ಮಾಡಿದರು.
ಈ ವೇಳೆ ಮಾಜಿ ಸಂಸದ ಎ.ಸಿದ್ದರಾಜು, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನಿರಾಜು ಹಾಜರಿದ್ದರು.
ಪಾರ್ವತಿ ಬೆಟ್ಟದಲ್ಲಿ ವಿಶೇಷ ಪೂಜೆ: ತಾಲೂಕಿನ ಕಂದೇಗಾಲ ಸಮೀಪದ ಪಾರ್ವತಿ ಬೆಟ್ಟದಲ್ಲಿ ಬೆಳಗ್ಗೆ ಕುಟುಂಬಸ್ಥರ ಜೊತೆಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು.
ಅದ್ದೂರಿ ಮೆರವಣಿಗೆ: ಪಟ್ಟಣದ ಕಾಂಗ್ರೆಸ್ ಕಚೇರಿಯಿಂದ ತೆರೆದ ವಾಹನದಲ್ಲಿ ಪಟ್ಟಣದ ಪ್ರಮುಖ ರಸ್ತೆಯಲ್ಲಿ 8 ಸಾವಿರಕ್ಕೂ ಅಧಿಕ ಮಂದಿ ಬೆಂಬಲಿಗರೊಂದಿಗೆ ಅದ್ದೂರಿಯಿಂದ ಮೆರವಣಿಗೆ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!