ಗುಂಡ್ಲುಪೇಟೆ : ಹೆಣ್ಣು ಹುಲಿ ಮೃತ ದೇಹ ಪತ್ತೆ


Team Udayavani, Mar 11, 2022, 12:33 PM IST

5tiger

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ಉಪ ವಿಭಾಗದ ಗುಂಡ್ರೆ ವಲಯದ ಹೊಸಹಳ್ಳಿ ಶಾಖೆಯ ನಾಯಿಹಳ್ಳಿ ಗಸ್ತಿನ ವೆಸಲಿ ಮಚ್ಚನ ಮೂಲೆ ಅರಣ್ಯ ಪ್ರದೇಶದಲ್ಲಿ ಸುಮಾರು 8 ರಿಂದ 9 ವರ್ಷದ ಹೆಣ್ಣು ಹುಲಿಯೊಂದರ ಮೃತ ದೇಹ ಪತ್ತೆಯಾಗಿದೆ.

ಮೃತ ಹುಲಿಯ ಛಾಯಚಿತ್ರವನ್ನು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆಸಿದ ಕ್ಯಾಮರಾ ಟ್ರ್ಯಾಪ್ ಹುಲಿಗಣತಿಯ ದತ್ತಾಂಶಕ್ಕೆ ಹೋಲಿಕೆ ಮಾಡಿದಾಗ ಹುಲಿ Bandipur 15_U1783 ಎಂದು ಗುರುತಿಸಿ ಇದು ಮೊದಲನೇ ಬಾರಿಗೆ 2015ರ ಮಾ.3ರಲ್ಲಿ ನಡೆದ ಕ್ಯಾಮರಾ ಟ್ರ್ಯಾಪ್ ಗಣತಿ ಕಾರ್ಯಕ್ರಮದಲ್ಲಿ ಗುಂಡ್ರೆ ವಲಯದಲ್ಲಿ ಸೆರೆಯಾಗಿದೆ. ನಂತರ 2019-20ನೇ ಸಾಲಿನ ಗಣತಿ ಕಾರ್ಯಕ್ರಮದಲ್ಲಿಯೂ ಸಹ ಗುಂಡ್ರೆ ವಲಯದಲ್ಲಿಯೇ ಸೆರೆಯಾಗಿರುತ್ತದೆ.

ಮೃತ ಹೆಣ್ಣು ಹುಲಿಯ ದೇಹ ಪರಿಶೀಲಿಸಿದಾಗ ಯಾವುದೇ ಹುರುಳಿನಿಂದ ಅಥವಾ ವಿಷಪ್ರಾಸನದಿಂದ ಮೃತಪಟ್ಟಿರುವುದು ಮೇಲ್ನೋಟಕ್ಕೆ ಕಂಡು ಬಂದಿಲ್ಲ ಹಾಗೂ ಹುಲಿಯ ದೇಹದ ಮೇಲೆ ಯಾವುದೇ ಗಾಯಗಳು ಸಹ ಕಂಡುಬಂದಿಲ್ಲ.

ಮೃತ ಹೆಣ್ಣು ಹುಲಿಯ ಎಲ್ಲಾ ಉಗುರುಗಳು, ಹಲ್ಲುಗಳು ಹಾಗೂ ಇತರೆ ಅಂಗಾಗಳು ಸುರಕ್ಷಿತವಾಗಿದ್ದು, ಯಾವುದೇ ಕಾದಾಟದಲ್ಲಿ ಭಾಗಿಯಾಗಿಯಾಗದೇ ಇರುವುದು ಕಂಡುಬಂದಿದೆ. ಇದರಲ್ಲಿ ಎರಡು ಹಲ್ಲುಗಳು ಸವೆದಿದ್ದು, ಹಲ್ಲು ಮತ್ತು ದವಡೆಯ ಭಾಗಗಳು ಹಳದಿ ಬಣ್ಣಕ್ಕೆ ತಿರುಗಿದ್ದು, ಮೇಲ್ನೋಟಕ್ಕೆ ಕಾಮಾಲೆ ಖಾಯಿಲೆಯಿಂದ ಬಳಲಿರಬಹುದು ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ:ಕುರುಕಲು ತಿಂಡಿಗಳ ಖಾಲಿ ಕವರ್‌ಗಳಲ್ಲಿ ಡ್ರಗ್ಸ್‌ ತುಂಬಿ ಮಾರಾಟ!

ಪಶು ವೈದ್ಯಾಧಿಕಾರಿ ಡಾ. ವಾಸೀಂ ಮಿರ್ಜಾ ಹುಲಿಯ ಮರಣೋತ್ತರ ಶವ ಪರೀಕ್ಷೆ ನಡೆಸಿದ್ದು, ಪ್ರಾಥಮಿಕ ಮರಣೋತ್ತರ ಪರೀಕ್ಷಾ ವರದಿಯ ಪ್ರಕಾರ ಮೃತ ಹುಲಿಯು ಅನೇಕ, ಆಂತರಿಕ ಖಾಯಿಲೆಗಳಿಂದ ಹಾಗೂ ಮೂತ್ರ ವಿಸರ್ಜನೆಯ ಭಾಗವು (ಗುದದ್ವಾರ) ಮುಚ್ಚಿ ಹೋಗಿರುವುದರಿಂದ ಜೊತೆಗೆ ಹುಲಿಗೆ ವಯಸ್ಸಾದ ಕಾರಣ ಮೃತಪಟ್ಟಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ.

ಮೃತ ಹುಲಿಯ ದೇಹವನ್ನು ಅರಣ್ಯ ಅಧಿಕಾರಿಗಳ ಹಾಗೂ ಸ್ಥಳೀಯರ ಸಮ್ಮುಖದಲ್ಲಿ ಸುಡಲಾಯಿತು. ಮೃತ ಹೆಣ್ಣು ಹುಲಿಯ ಸಾವಿಗೆ ನಿಖರವಾದ ಕಾರಣವನ್ನು ಪರೀಕ್ಷಾ ವರದಿ ಬಂದ ನಂತರ ಖಚಿತಪಡಿಸಲಾಗುವುದು ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ರಮೇಶ್ ಕುಮಾರ್ ತಿಳಿಸಿದರು.

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.