ಗುಂಡ್ಲುಪೇಟೆ : ಕಾಡಾನೆ ದಾಳಿಗೆ ರೈತರ ಬೆಳೆ ನಾಶ : ಅಧಿಕಾರಿಗಳ ವಿರುದ್ಧ ರೈತ ಮುಖಂಡರ ಆಕ್ರೋಶ
Team Udayavani, Jun 9, 2022, 8:00 PM IST
ಗುಂಡ್ಲುಪೇಟೆ(ಚಾಮರಾಜನಗರ): ತಾಲೂಕಿನ ಹುಂಡೀಪುರ ಗ್ರಾಮದ ರೈತರ ಜಮೀನುಗಳ ಮೇಲೆ ಕಾಡಾನೆ ದಾಳಿ ನಡೆಸಿ ಬಾಳೆ, ತೆಂಗು ಮತ್ತು ಸೋಲಾರ್ ವಿದ್ಯುತ್ ತಂತಿ ಬೇಲಿ ತುಳಿದು ನಾಶ ಪಡಿಸಿದ ಹಿನ್ನೆಲೆ ರೈತ ಮುಖಂಡರು ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿ ಅಧಿಕಾರಿಗಳ ವಾಹನಗಳ ಚಕ್ರದ ಗಾಳಿ ತೆಗೆಯುವ ಮೂಲಕ ದಿಗ್ಭಂದನ ವಿಧಿಸಿದರು.
ಹುಂಡೀಪುರ ಗ್ರಾಮದ ರವಿ, ಮಂಜು ಮತ್ತು ಕುಮಾರ ಎಂಬುವರ ಜಮೀನುಗಳಲ್ಲಿ ಬೆಳೆದಿದ್ದ ತೆಂಗು, ಬಾಳೆ ಮತ್ತು ಸೋಲಾರ್ ವಿದ್ಯುತ್ ತಂತಿ ಬೇಲಿಯನ್ನು ಆನೆಯೊಂದು ತಿಂದು, ತುಳಿದು ನಾಶ ಮಾಡಿತ್ತು. ಹಿಂದಿನ ಐದು ದಿನಗಳಲ್ಲೂ ಹಲವು ಕಡೆಗಳಲ್ಲಿ ಸಲಗದಿಂದ ಬೆಳೆ ಹಾನಿ ಸಂಭವಿಸಿತ್ತು. ಇದರಿಂದ ರೈತರು ಆಕ್ರೋಶಗೊಂಡಿದ್ದರು. ರೈತರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ನೌಕರರಿಂದ ಆನೆಯನ್ನು ಕಾಡಿಕಟ್ಟಲು ಸಾಧ್ಯವಾಗಿರಲಿಲ್ಲ. ಗುರುವಾರ ಬೆಳಗ್ಗೆ ಬೆಳೆ ಹಾನಿಯ ಬಗ್ಗೆ ಮಾಹಿತಿ ಪಡೆಯಲು ಬಂದ ಅರಣ್ಯ ಇಲಾಖೆ ನೌಕರರಿಗೆ ರೈತರು ದಿಗ್ಭಂಧನ ವಿಧಿಸಿದ್ದರು. ವಿಷಯ ತಿಳಿದ ಗೋಪಾಲಸ್ವಾಮಿ ಬೆಟ್ಟ, ಕುಂದಕೆರೆ ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕಾಗಮಿಸಿ ಮನವಿ ಆಲಿಸಿದರು. ಇದಕ್ಕೆ ಜಗ್ಗದ ರೈತರು ವಾಹನಗಳ ಗಾಳಿ ತೆಗೆಯುವ ಮೂಲಕ ಸ್ಥಳಕ್ಕೆ ಸಿಎಫ್ ಹಾಗು ಎಸಿಎಫ್ ಆಗಮಿಸಿ ಶಾಶ್ವತ ಪರಿಹಾರ ದೊರಕಿಸಿಕೊಡಬೇಕೆಂದು ಪಟ್ಟು ಹಿಡಿದರು.
ಈ ವೇಳೆ ಮಾತನಾಡಿದ ರೈತ ಮುಖಂಡರು, ಸೋಲಾರ್ ವಿದ್ಯುತ್ ತಂತಿ ಬೇಲಿಯನ್ನು ಅರಣ್ಯ ಇಲಾಖೆಯವರು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ. ಮೂರನೇ ವ್ಯಕ್ತಿಗೆ ನಿರ್ವಹಣೆ ಹೊಣೆ ವಹಿಸಿ ನಮ್ಮ ತೆರಿಗೆ ಹಣ ಪೋಲು ಮಾಡುತ್ತಿದ್ದಾರೆ. ಕಂದಕ ಇದ್ದೂ ಇಲ್ಲದಂತಿದೆ. ಈಗಾಗಿ ಕಾಡಾನೆ ಹಾವಳಿ ಮಿತಿ ಮೀರಿದೆ. ಸಾಲ ಮಾಡಿ ಬೆಳೆ ಬೆಳೆದಿದ್ದೇವೆ. ಬೆಳವಣಿಗೆ ಹಂತದಲ್ಲಿ ಬೆಳೆ ನಾಶವಾದರೆ ಮಾಡಿದ ಸಾಲ ಮತ್ತು ಬಡ್ಡಿ ಕಟ್ಟುವುದು ಹೇಗೆ, ಜಮೀನಿನ ಸುತ್ತಲೂ ಹಾಕಿಕೊಂಡ ಫೆನ್ಸಿಂಗ್ ಅನ್ನು ಸಲಗ ಹಾಳು ಮಾಡಿದೆ. ಈಗಾದರೆ ಮತ್ತೆ ಲಕ್ಷಾಂತರ ರೂಪಾಯಿ ವ್ಯಯಿಸಿ ಫೆನ್ಸ್ ಮಾಡಿಸಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ನಮ್ಮ ಸಮಸ್ಯೆಗೆ ಶಾಸ್ವತ ಪರಿಹಾರದ ಭರವಸೆ ಸಿಗಬೇಕು. ಬೆಳೆ ಹಾನಿಗೆ ತಕ್ಷಣ ಪರಿಹಾರ ಕೊಡಿಸಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಅಪರಾಧ ವಿಭಾಗದ ಪಿಎಸ್ಐ ಸುಜಾತ ಗ್ರಾಮಸ್ಥರನ್ನು ಸಮಾಧಾನ ಪಡಿಸಿದರು ಬಗ್ಗದೆ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಂತರ ಸ್ಥಳಕ್ಕಾಗಮಿಸಿದ ಎಸಿಎಫ್ ರವೀಂದ್ರ, ಬೆಳೆ ಹಾನಿಗೆ ಸೂಕ್ತ ಪರಿಹಾರ ಕೊಡಿಸಲಾಗುವುದು, ಹಾಳಾಗಿರುವ ಸೋಲಾರ್ ಫೆನ್ಸಿಂಗ್ ಅನ್ನು ಸರಿ ಪಡಿಸಿಕೊಡುವ ಜತೆಗೆ ಗೋಪಾಲಸ್ವಾಮಿ ಬೆಟ್ಟ ಮತ್ತು ಕುಂದಕೆರೆ ಅರಣ್ಯ ವಲಯದ ನೌಕರರು ರಾತ್ರಿವೇಳೆ ಗಂಟೆಗೊಮ್ಮ ಗಸ್ತು ತಿರುಗುವ ವ್ಯವಸ್ಥೆ ಮಾಡಿಸುತ್ತೇನೆ. ಕುಂದಕೆರೆ ವಲಯ ಅರಣ್ಯಾಧಿಕಾರಿ ವರ್ಗಾವಣೆ ವಿಷಯವನ್ನು ಮೇಲಾಧಿಕಾರಿಗಳ ಗಮನಕ್ಕೆ ತರುತ್ತೇನೆ ಎಂದು ಭರವಸೆ ನೀಡಿದರು. ನಂತರ ರೈತರು ಪ್ರತಿಭಟನೆ ಹಿಂಪಡೆದರು.
ಕುಂದಕೆರೆ ಮತ್ತು ಗೋಪಾಲಸ್ವಾಮಿ ಬೆಟ್ಟ ವಲಯ ಅರಣ್ಯಾಧಿಕಾರಿಗಳಾದ ಶ್ರೀನಿವಾಸನಾಯಕ, ಎನ್.ಪಿ.ನವೀನ್ಕುಮಾರ್, ರೈತರಾದ ಕಂದಸ್ವಾಮಿ, ದಿಲೀಪ್, ಎಚ್.ಪಿ.ಮಹೇಂದ್ರ, ಬಸವಣ್ಣ, ಅಶೋಕ, ಗುರು, ನಾಗಪ್ಪ ಮತ್ತು ರೈತ ಸಂಘಟನೆ ಪದಾಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ