ಗುಂಡ್ಲುಪೇಟೆಯ ಜೋಡಿ ರಸ್ತೆ ಕಾಮಗಾರಿ ವಿಳಂಬ


Team Udayavani, Oct 6, 2019, 3:00 AM IST

gumdlupete

ಗುಂಡ್ಲುಪೇಟೆ: ಪಟ್ಟಣದ ಪ್ರಮುಖ ಜೋಡಿ ರಸ್ತೆ ಕಾಮಗಾರಿಯ ವಿಳಂಬವಾಗುತ್ತಿದೆ. ಇದರಿಂದ ಕಳೆದ ಒಂದೂವರೆ ವರ್ಷದಿಂದ ವಾಹನ ಸವಾರರು ಹಾಗೂ ಅಂಗಡಿ-ಮುಂಗಟ್ಟುಗಳನ್ನು ಹೊಂದಿರುವ ವ್ಯಾಪಾರಿಗಳು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ವರ್ಷದ ಹಿಂದೆ ಪಟ್ಟಣದ ಪ್ರವಾಸಿ ಮಂದಿರದಿಂದ ಶಿವಾನಂದ ವೃತ್ತದವರೆಗೆ ಜೋಡಿ ರಸ್ತೆಯನ್ನು ಎರಡು ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅಗಲೀಕರಣ ಕಾಮಗಾರಿ ಪ್ರಾರಂಭಿಸಲಾಯಿತು.

ಅಂದಿನ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಮೋಹನ ಕುಮಾರಿ ಭೂಮಿ ಪೂಜೆ ನೆರವೇರಿಸಿ, ಮೂರು ತಿಂಗಳಲ್ಲಿ ಕಾಮಗಾರಿ ಮುಗಿಸುವಂತೆ ಸೂಚನೆ ನೀಡಿದ್ದರು. ಆದರೂ ಸಹ ಇನ್ನೂ ಪೂರ್ಣಗೊಂಡಿಲ್ಲ. ಇದರಿಂದ ಈ ರಸ್ತೆಯಲ್ಲಿ ಸಂಚಾರ ಮಾಡಲು ವಾಹನ ಸವಾರರು ಹಾಗೂ ಈ ರಸ್ತೆಯಲ್ಲಿ ಅಂಗಡಿ ಮುಂಗಟ್ಟು ನಡೆಸುವ ವ್ಯಾಪಾರಿಗಳು ತೀವ್ರ ತೊಂದರೆ ಎದುರಿಸುತ್ತಿದ್ದಾರೆ.

ಏಕಮುಖ ರಸ್ತೆಯಲ್ಲಿಯೇ ಸಂಚಾರ: ಡಾಂಬರು ಹಾಕದ ರಸ್ತೆಯಲ್ಲಿ ಲಾರಿ, ಆಟೋ ಮುಂತಾದ ವಾಹನಗಳು ನಿಲ್ಲುತ್ತಿದ್ದು, ಇನ್ನೊಂದು ಬದಿಯಲ್ಲಿ ಮಾತ್ರ ವಾಹನಗಳ ಸಂಚಾರ ಮಾಡಬೇಕಾಗಿದೆ. ಎದುರು ಬರುವ ವಾಹನಕ್ಕೆ ದಾರಿ ಕೊಡಲೂ ಸಾಧ್ಯವಾಗದೇ ಏಕಮುಖ ರಸ್ತೆಯಲ್ಲಿಯೇ ಸಂಚರಿಸಬೇಕಾಗಿದೆ. ಶಿವಾನಂದ ವೃತ್ತದ ಬಳಿ ಡಾಂಬರು ಕಿತ್ತು ಭಾರೀ ಹಳ್ಳವುಂಟಾಗಿದ್ದು, ಇದನ್ನು ದಾಟಲು ವಾಹನ ಸವಾರರು ಹರಸಾಹಸ ಮಾಡಬೇಕಾಗಿದೆ.

ನಿತ್ಯ ಸಾವಿರಾರು ವಾಹನ ಸಂಚಾರ: ಇನ್ನೊಂದು ಬದಿಯಲ್ಲಿ ಅಳವಡಿಸಿದ್ದ ಯುಜಿಡಿ ಸಂಪೂರ್ಣವಾಗದೇ ಕಾಮಗಾರಿಯು ತೀವ್ರ ವಿಳಂಬವಾಗಿದೆ. ಈಗಾಗಲೇ ಒಂದು ಬದಿಯಲ್ಲಿ ಮಾತ್ರ ಒಳಚರಂಡಿ, ಪಾದಚಾರಿ ಮಾರ್ಗ ಹಾಗೂ ರಸ್ತೆಗೆ ಡಾಂಬರೀಕರಣ ಮಾಡಿ ಕಾಮಗಾರಿ ನಿಲ್ಲಿಸಿದ್ದಾರೆ. ಆದರೆ, ನೂತನ ರಸ್ತೆಯು ಹೆಚ್ಚಿನ ವಾಹನಗಳ ಒತ್ತಡವನ್ನು ತಾಳದೇ ಈಗಾಗಲೇ ಡಾಂಬರು ಕಿತ್ತುಬರುತ್ತಿದೆ. ಕಾಮಗಾರಿ ಪ್ರಾರಂಭಿಸಿದ ನಂತರವೂ ಪುರಸಭೆಯು ಒತ್ತುವರಿಯನ್ನು ತೆರವುಗೊಳಿಸದ ಪರಿಣಾಮ ಕುಂಟುತ್ತಾ ಸಾಗಿದೆ. ಪ್ರಮುಖ ವಾಣಿಜ್ಯ ಮಳಿಗೆಗಳನ್ನು ಹೊಂದಿದ ಹಾಗೂ ಜಿಲ್ಲಾ ಕೇಂದ್ರವನ್ನು ಸಂಪರ್ಕಿಸುವ ಈ ರಸ್ತೆಯಲ್ಲಿ ಪ್ರತಿದಿನವೂ ಸಾವಿರಾರು ವಾಹನಗಳು ಸಂಚಾರ ಮಾಡುತ್ತಿವೆ.

ರಸ್ತೆ ಕಾಮಗಾರಿ ಪ್ರಾರಂಭವಾಗಿಲ್ಲ: ಇತ್ತೀಚೆಗೆ ಪುರಸಭೆಯು 40 ಲಕ್ಷ ರೂಪಾಯಿ ವೆಚ್ಚದಲ್ಲಿ ಒಳಚರಂಡಿ ಕಾಮಗಾರಿಯನ್ನು ಪೂರ್ಣಗೊಳಿಸಿದೆ. ಆದರೆ, ರಸ್ತೆ ಕಾಮಗಾರಿಯನ್ನು ರಾಷ್ಟ್ರೀಯ ಹೆದ್ದಾರಿ ನಿಗಮ ಇನ್ನೂ ಪ್ರಾರಂಭವಾಗಿಲ್ಲ. ಇದರಿಂದ ಎಲ್ಲಾ ವಾಹನಗಳೂ ಒಂದೇ ಬದಿಯಲ್ಲಿ ಸಾಗಬೇಕಾಗಿದೆ. ಸುಗಮ ಸಂಚಾರ ಎಂಬುದು ಕನಸಾಗಿದೆ. ಒಂದು ಬದಿಯಲ್ಲಿ ಇನ್ನೂ ಸಮರ್ಪಕವಾಗಿ ಚರಂಡಿ ನಿರ್ಮಿಸದೇ ಕೊಳಚೆ ಮತ್ತು ಮಳೆ ನೀರು ನಿಲ್ಲುತ್ತಿದ್ದು, ಬಹುತೇಕ ಅಂಗಡಿಗಳ ಒಳಗೆ ಪ್ರವೇಶಿಸಲು ಸಾಧ್ಯವಾಗದೆ ಹಿಡಿಶಾಪ ಹಾಕುತ್ತಿದ್ದಾರೆ.

ಗುಣಮಟ್ಟದ ಡಾಂಬರು ಹಾಕಿಲ್ಲ: ಕಾಮಗಾರಿ ಮುಗಿಯುವ ವೇಳೆಗೆ ಒಂದು ಬದಿಯಲ್ಲಿ ಹಾಕಿರುವ ಡಾಂಬರು ಕಿತ್ತು ಮತ್ತೆ ಹಾಳಾಗಲಿದೆ. ಮೊದಲೇ ಚೆನ್ನಾಗಿದ್ದ ರಸ್ತೆಗೆ ಡಾಂಬರು ಹಾಕಿದ್ದರೆ ಇನ್ನೂ ಹೆಚ್ಚಿನ ಬಾಳಿಕೆ ಬರುತ್ತಿದ್ದರೂ ಸರ್ಕಾರದ ಹಣವನ್ನು ವ್ಯರ್ಥವಾಗಿ ಖರ್ಚು ಮಾಡಿ ಸಾರ್ವಜನಿಕರಿಕೆ ತೊಂದರೆ ನೀಡಲಾಗುತ್ತಿದೆ ಎಂದು ನಾಗರಿಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣವಾಗಲಿ: ಈ ಹಿಂದೆ ಜೋಡಿ ರಸ್ತೆ ನಿರ್ಮಾಣ ಸಂದರ್ಭದಲ್ಲಿ ಗುಣಮಟ್ಟ ನಿರ್ವಹಣೆ ಮಾಡದೆ ಹಾಳಾಗಿದ್ದರೂ ಡಾಂಬರು ಹಾಕಿದ್ದರೆ ಸಾಕಾಗಿತ್ತು. ಆದರೆ, ಅಗಲೀಕರಣ ಮಾಡಲು ಕೋಟ್ಯಂತರ ರೂಪಾಯಿ ವೆಚ್ಚ ಮಾಡಿದ್ದರೂ ಇನ್ನೂ ಪೂರ್ಣಗೊಂಡಿಲ್ಲ. ವಾಹನ ಸವಾರರು ಹಾಗೂ ಅಂಗಡಿ ಮುಂಗಟ್ಟು ಹೊಂದಿರುವವರಿಗೆ ತೊಂದರೆಯಾಗಿದೆ. ಸಣ್ಣಪುಟ್ಟ ಒತ್ತುವರಿಗಳನ್ನು ಕೂಡಲೇ ತೆರವುಗೊಳಿಸಿ, ಕಾಮಗಾರಿ ಮುಗಿಸಬೇಕು. ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣವಾಗಬೇಕು ಎಂದು ಗುಂಡ್ಲುಪೇಟೆ ನಿವಾಸಿ ಜಿ.ಎನ್‌.ಮಂಜುನಾಥ್‌ ಆಗ್ರಹಿಸಿದ್ದಾರೆ.

ಪುರಸಭೆಯಿಂದ ಒಳ ಚರಂಡಿ ಸ್ಥಳಾಂತರಕ್ಕೆ 40 ಲಕ್ಷ ರೂಪಾಯಿ ನೀಡಲಾಗಿದೆ. ಕಾಮಗಾರಿ ಪೂರ್ಣಗೊಂಡಿದೆ. ಸದ್ಯದಲ್ಲೇ ರಸ್ತೆ ಕಾಮಗಾರಿಯ ಬಗ್ಗೆ ತುರ್ತು ಗಮನ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು.
-ಸಿ.ಎಸ್‌.ನಿರಂಜನ ಕುಮಾರ್‌, ಶಾಸಕ

* ಸೋಮಶೇಖರ್‌

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.