ಜಿಲ್ಲೆ ಮೊದಲ ಬಿಜೆಪಿ ಶಾಸಕ ಗುರುಸ್ವಾಮಿ
Team Udayavani, Sep 11, 2020, 12:48 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಪ್ರಥಮ ಬಿಜೆಪಿ ಶಾಸಕರಾಗಿ, ಕಮಲ ಅರಳಿಸಿದ ಕೀರ್ತಿ ಸಿ. ಗುರುಸ್ವಾಮಿ ಅವರಿಗೆ ಸಲ್ಲುತ್ತದೆ. ಹಿರಿಯರು ಹಾಗೂ ನಮ್ಮೆಲ್ಲರ ಮಾರ್ಗದರ್ಶಕರಾಗಿದ್ದ ಸಿ. ಗುರುಸ್ವಾಮಿನಿಧನ ಬಿಜೆಪಿಗೆ ಹಾಗೂ ವೈಯಕ್ತಿಕವಾಗಿ ನೋವುತಂದಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.
ಕೋವಿಡ್ನಿಂದ ಇತ್ತೀಚಿಗೆ ಮೃತರಾದ ಮಾಜಿ ಶಾಸಕ ಸಿ. ಗುರುಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿ,ಗುರುಸ್ವಾಮಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ.ಬಳಿಕ ಪುತ್ರಿ ನಾಗಶ್ರೀ ಪ್ರತಾಪ್ ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿದರು.
ನೇರ ನಡೆ, ನುಡಿಯ, ಸರಳ ಸಜ್ಜನಿಕೆ ವ್ಯಕ್ತಿತ್ವವುಳ್ಳ ಗುರುಸ್ವಾಮಿ ಅವರು ಸಂಸದ ಶ್ರೀನಿವಾಸಪ್ರಸಾದ್ ಅವರ ಗೆಲುವಿನಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದರು.ನಮ್ಮ ತಂದೆಯವರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು. ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದಛಾಪು ಮೂಡಿಸಿದ್ದರು. ಈ ಕ್ಷೇತ್ರವು ಓರ್ವ ಪ್ರಾಮಾಣಿಕ ರಾಜಕಾರಣಿಯನ್ನು ಕಳೆದುಕೊಂಡಿದೆ ಎಂದು ವಿಜಯೇಂದ್ರ ಸ್ಮರಿಸಿದರು.
ಈ ಸಂದರ್ಭದಲ್ಲಿ ಗುರುಸ್ವಾಮಿ ಅವರ ಅಳಿಯಪ್ರತಾಪ್, ಶಾಸಕ ಸಿ.ಎಸ್. ನಿರಂಜನ್ಕುಮಾರ್, ರಾಜ್ಯ ಉಪಾಧ್ಯಕ್ಷ ರಾಜೇಂದ್ರನ್, ರಾಜ್ಯ ಎಸ್ಟಿ ಮೋರ್ಚಾ ಉಪಾಧ್ಯಕ್ಷ ಎಂ. ರಾಮಚಂದ್ರ, ಡಾ. ಎ.ಆರ್. ಬಾಬು, ಎಚ್.ಎಸ್. ಬಸವರಾಜು, ತಾ.ಪಂ. ಉಪಾಧ್ಯಕ್ಷ ರವೀಶ್, ನೂರೊಂದುಶೆಟ್ಟಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು