Hanur; ಕಾವೇರಿ ವನ್ಯಜೀವಿ ವಲಯದ ಅರಣ್ಯದಲ್ಲಿ ಅಪರೂಪದ ಬಿಳಿ ಕಡವೆ ಪತ್ತೆ
ವನ್ಯಜೀವಿ ತಜ್ಞರ ಸಂತಸಕ್ಕೆ ಕಾರಣ
Team Udayavani, Sep 6, 2023, 9:07 PM IST
ಹನೂರು: ತಾಲೂಕಿನ ಕಾವೇರಿ ವನ್ಯಜೀವಿ ವಲಯದ ಅರಣ್ಯ ಪ್ರದೇಶದಲ್ಲಿ ಅಪರೂಪದ ಬಿಳಿ ಕಡವೆ ಪತ್ತೆಯಾಗಿರುವುದು ವನ್ಯಜೀವಿ ತಜ್ಞರು ಅಳವಡಿಸಿರುವ ಕೆಮರಾದಲ್ಲಿ ಟ್ರ್ಯಾಪ್ ಆಗಿದೆ.
ಹನೂರು ತಾಲೂಕಿನ ಕಾವೇರಿ ವನ್ಯಜೀವಿ ವಲಯದ ಅರಣ್ಯ ಪ್ರದೇಶದಲ್ಲಿ ಚಿರತೆಯ ಬಗ್ಗೆ ಅಧ್ಯಯನ ಮಾಡಲು ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಮತ್ತು ತಂಡದವರು ಕೆಮರಾಗಳನ್ನು ಅಳವಡಿಸಿದ್ದರು. ಈ ಕೆಮರಾಗಳಲ್ಲಿ ಬಿಳಿ ಕಡವೆಯ ಚಲನ-ವಲನ ಟ್ರ್ಯಾಪ್ ಆಗಿದೆ.
ಈ ಹಿಂದೆಯೂ ಕಾವೇರಿ ವನ್ಯಜೀವಿ ವಲಯದ ಅರಣ್ಯ ಪ್ರದೇಶದಲ್ಲಿ ಹಲವಾರು ವಿಶೇಷ ಪ್ರಾಣಿಗಳು ಕಂಡುಬಂದಿದ್ದವು. ಈ ಹಿಂದೆ 2014ರಲ್ಲಿ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಬಿಳಿ ಕಡವೆ ಪತ್ತೆಯಾಗಿತ್ತು. ಅದಾದ ಬಳಿಕ ಇದೀಗ ಕಾವೇರಿ ವನ್ಯಜೀವಿ ವಲಯದಲ್ಲಿ ಕಂಡುಬಂದಿದೆ. ಈ ಅರಣ್ಯ ಪ್ರದೇಶದಲ್ಲಿ ಹಿಂದೆ ಕೆನ್ನಾಯಿ ಕೂಡ ಕಂಡುಬಂದಿತ್ತು. ಅಲ್ಲದೆ ಇದೇ ಅರಣ್ಯದಲ್ಲಿ ಬಿಳಿನವಿಲು ಕೂಡ ಇರುವುದನ್ನು ಅರಣ್ಯ ಇಲಾಖಾ ಅಧಿಕಾರಿಗಳು ಪತ್ತೆ ಹಚ್ಚಿದ್ದರು. ಒಟ್ಟಾರೆ ಹಲವಾರು ವಿಶೇಷ ಪ್ರಾಣಿಗಳು ಕಂಡುಬರುತ್ತಿರುವುದು ವನ್ಯಜೀವಿ ತಜ್ಞರ ಸಂತಸಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ