Hanur ಹೆದ್ದಾರಿಯಲ್ಲಿ ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಬೈಕ್ ಸವಾರರು ಪಾರು
ಸೊಂಡಿಲಿನಿಂದ ಬೈಕನ್ನು ತಳ್ಳಿ-ತಳ್ಳಿ ಜಖಂಗೊಳಿಸಿದ ಆನೆ
Team Udayavani, Jun 9, 2023, 4:01 PM IST
ಹನೂರು: ಕಾಡಾನೆ ದಾಳಿ ನಡೆಸಿದ್ದು ಬೈಕ್ ಸವಾರರು ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಕನಾಟಕ –ತಮಿಳುನಾಡು ಗಡಿಭಾಗದ ಗರಿಕೆಕಂಡಿ ಚೆಕ್ಪೋಸ್ಟ್ ಬಳಿ ಶುಕ್ರವಾರ ಬೆಳಗ್ಗೆ 9 ಗಂಟೆ ಸಮಯದಲ್ಲಿ ಜರುಗಿದೆ.
ಹೆದ್ದಾರಿಯ ಗರಿಕೆಕಂಡಿ ಚೆಕ್ಪೋಸ್ಟ್ ಬಳಿ ಇಬ್ಬರು ಸವಾರರು ಆಗಮಿಸುತ್ತಿದ್ದಂತೆ ರಸ್ತೆಬದಿಯಲಿದ್ದ ಆನೆಯು ದಾಳಿಗೆ ಮುಂದಾಗಿದೆ. ಕೂಡಲೇ ಎಚ್ಚೆತ್ತ ಸವಾರರು ಬೈಕನ್ನು ಬಿಟ್ಟು ಓಡಿ ಹೋಗಿದ್ದಾರೆ. ಇದರಿಂದ ಮತ್ತಷ್ಟು ಕುಪಿತವಾದ ಆನೆಯು ತನ್ನ ಸೊಂಡಿಲಿನಿಂದ ಬೈಕನ್ನು ತಳ್ಳಿ-ತಳ್ಳಿ ಜಖಂಗೊಳಿಸಿದೆ. ಅದೃಷ್ಟವಶಾತ್ ಸವಾರರಿಬ್ಬರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ.
ಈ ವೇಳೆ ಸಮೀಪದಲ್ಲಿದ್ದ ಕೆಲ ವಾಹನ ಸವಾರರು, ಸ್ಥಳೀಯ ಅರಣ್ಯ ಇಲಾಖೆ ಸಿಬಂದಿ ಜೋರಾಗಿ ಕೂಗಾಡಿ ಆನೆಯನ್ನು ಅರಣ್ಯದೊಳಕ್ಕೆ ಅಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ಆನೆಯು ಸೊಂಡಿಲಿನಿಂದ ಬೈಕನ್ನು ಜಖಂಗೊಳಿಸುತ್ತಿರುವುದನ್ನು ಕೆಲ ಪ್ರತ್ಯಕ್ಷದರ್ಶಿಗಳು ಮೊಬೈಲ್ಗಳಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದು ವೈರಲ್ ಆಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ