ರಸ್ತೆ ಸುರಕ್ಷತೆ ಬಗ್ಗೆ ಹೊಸ ಕಾರ್ಯಕ್ರಮ ಹಮ್ಮಿಕೊಳ್ಳಿ


Team Udayavani, Sep 21, 2019, 3:00 AM IST

raste-surak

ಚಾಮರಾಜನಗರ: ವಾಹನ ಸವಾರರಿಗೆ ರಸ್ತೆ ಸುರಕ್ಷತೆ ನಿಯಮಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಒತ್ತಾಯಿಸಿ ಬಹುಜನ ಸಮಾಜ ಪಕ್ಷದ ಮುಖಂಡರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ. ಆನಂದ್‌ಕುಮಾರ್‌ಗೆ ಮನವಿ ಸಲ್ಲಿಸಿದರು. ಕೇಂದ್ರ ಸರ್ಕಾರ ಹೊಸದಾಗಿ ಜಾರಿಗೆ ತಂದಿರುವ ವಾಹನ ಸಾರಿಗೆ ನಿಯಮಗಳಡಿ ದೇಶಾದ್ಯಂತ ನಿಯಮ, ಉಲ್ಲಂಘನೆಯಡಿ ವಿವಿಧ ರೀತಿಯ ದಂಡಗಳನ್ನು ವಿಧಿಸುತ್ತಿದ್ದು, ಸಾಮಾನ್ಯ ನಾಗರಿಕರಿಗೆ ಹೊಸ ನಿಯಮಗಳ ಕುರಿತು ಅರಿವು ಇಲ್ಲದ ಕಾರಣದಿಂದಾಗಿ ತೊಂದರೆಯಾಗಿದೆ.

ವಾಹನ ಸವಾರರ ಹಿತದೃಷ್ಟಿಯಿಂದ ಹೊಸ ನಿಯಮ ಮೇಲ್ನೋಟಕ್ಕೆ ಸರಿ ಎಂದು ಕಂಡು ಬಂದರೂ ಕೂಡ ಭಾರತ ದೇಶದ ತಲಾದಾಯ, ಸಾಮಾಜಿಕ ಅರಿವಿನ ಮಟ್ಟ, ಸಾಕ್ಷರತಾ ಪ್ರಮಾಣ ಮತ್ತು ಶಾಲಾ ಕಾಲೇಜುಗಳಲ್ಲಿ ಸಿಗುತ್ತಿರುವ ಶಿಕ್ಷಣದ ಗುಣಮಟ್ಟ, ರಸ್ತೆಗಳ ಗುಣಮಟ್ಟ ಇವೆಲ್ಲವನ್ನು ನೋಡಿದಾಗ ನಮ್ಮ ದೇಶಕ್ಕೆ ತಕ್ಕಂತೆ ಈ ನಿಯಮ ಅಪ್ರಸ್ತುತ. ವಾಹನ ಸವಾರರಿಗೆ ಹಾಕುತ್ತಿರುವ ದಂಡ ತುಂಬಾ ದುಬಾರಿಯಾಗಿದೆ ಎಂದು ಬಿಎಸ್‌ಪಿ ಮುಖಂಡರು ತಿಳಿಸಿದರು.

ಜಾಗೃತಿ ಮೊದಲ ಆದ್ಯತೆಯಾಗಿರಬೇಕು: ಜನರ ಪರವಾಗಿರಬೇಕಾದ ಸರ್ಕಾರವೇ ಜನರಿಗೆ ದುಬಾರಿ ದಂಡ ವಿಧಿಸುವ ಮೂಲಕ ಶೋಷಣೆ ಮಾಡುತ್ತಿದೆ. ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಮತ್ತು ಆರ್‌ಟಿಒ ಇಲಾಖೆ ವತಿಯಿಂದ ಜಾಗೃತಿ ಮೊದಲ ಆದ್ಯತೆಯಾಗಿರಬೇಕು. ಆದರೆ ಇತ್ತೀಚಿಗೆ ಜಿಲ್ಲೆಯಾದ್ಯಂತ ಸವಾರರಿಗೆ ಜಾಗೃತಿ ಮೂಡಿಸುವ ಪ್ರಯತ್ನವನ್ನು ಮಾಡದೆ ಉಲ್ಲಂಘನೆ ಎಂಬ ನೆಪದಲ್ಲಿ ದಂಡ ವಸೂಲಿ ತುಂಬಾ ಜೋರಾಗಿದೆ. ಆದರಿಂದ ಹೆಚ್ಚಾಗಿ ಸಾರ್ವಜನಿಕರು ಭಯದಿಂದ ಓಡಾಡುತ್ತಿದ್ದಾರೆ. ದಂಡದಿಂದ ತಪ್ಪಿಸಿಕೊಳ್ಳಲು ಕದ್ದು ಮುಚ್ಚಿ ಓಡಾಡುತ್ತಿದ್ದಾರೆ. ಹಲವಾರು ಸಂದರ್ಭದಲ್ಲಿ ಹಲವಾರು ಅವಘಡಗಳಿಗೆ ಕಾರಣಗಳಾಗಿವೆ ಎಂದರು.

ಸ್ನೇಹದ ವಾತಾವರಣ ನಿರ್ಮಾಣ ಮಾಡಬೇಕು: ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಮತ್ತು ಆರ್‌ಟಿಓ ಇಲಾಖೆ ವತಿಯಿಂದ ಪಟ್ಟಣ ಪ್ರದೇಶ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಒಂದೊಂದು ಪಂಚಾಯಿತಿ ವ್ಯಾಪ್ತಿಯ ವಾಹನ ಸವಾರರಿಗೆ ಮತ್ತು ಸಾರ್ವಜನಿಕರಿಗೆ ನೂತನ ಸಾರಿಗೆ ನಿಯಮ ಮತ್ತು ರಸ್ತೆ ಸುರಕ್ಷತಾ ನಿಯಮಗಳ ಕುರಿತು ಜಂಟಿಯಾಗಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾರ್ವಜನಿಕರಲ್ಲಿ ಭಯದ ಬದಲಿಗೆ ಸ್ನೇಹದ ವಾತಾವರಣ ನಿರ್ಮಾಣ ಮಾಡಬೇಕು ಎಂದು ಬಹುಜನ ಸಮಾಜ ಪಕ್ಷದ ಪ್ರಧಾನ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ ಅವರು ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಬಹುಜನ ಸಮಾಜ ಪಕ್ಷದ ಮುಖಂಡರಾದ ಕೃಷ್ಣಯ್ಯ, ನಾಗಯ್ಯ, ಬ.ಮ.ಕೃಷ್ಣಮೂರ್ತಿ, ಬ್ಯಾಡಮೂಡ್ಲುಬಸವಣ್ಣ, ಎಸ್‌.ಪಿ.ಮಹೇಶ್‌, ಹರಳೀಪುರ ಮಹದೇವಸ್ವಾಮಿ, ಚಂದಕವಾಡಿ ಕುಮಾರಸ್ವಾಮಿ, ರವಿ, ಸಿದ್ದರಾಜು, ಆಶ್ರಿತ್‌, ಶಿವಣ್ಣ, ರಂಗಸ್ವಾಮಿ ಇತರರು ಹಾಜರಿದ್ದರು.

20 ಎಸ್‌ಪಿ ಮನವಿ: ವಾಹನ ಸವಾರರಿಗೆ ರಸ್ತೆ ಸುರಕ್ಷತಾ ಹಾಗೂ ನಿಯಮಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಒತ್ತಾಯಿಸಿ ಬಹುಜನ ಸಮಾಜ ಪಕ್ಷದ ಮುಖಂಡರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ. ಆನಂದ್‌ಕುಮಾರ್‌‌ ಅವರಿಗೆ ಮನವಿ ಸಲ್ಲಿಸಿದರು. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ ಇದ್ದರು.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.