ಚಾ.ನಗರ: ಸತತ ಮಳೆಯಿಂದ ಮನೆ ಕುಸಿತ; ಕೆಲ ಗ್ರಾಮಗಳು ಜಲಾವೃತ


Team Udayavani, Aug 29, 2022, 11:33 AM IST

tdy-2 dfhj

ಚಾಮರಾಜನಗರ: ಜಿಲ್ಲೆಯಾದ್ಯಂತ ಸತತವಾಗಿ ಮಳೆ ಸುರಿಯುತ್ತಿದ್ದು ಕೆಲವು ಗ್ರಾಮಗಳು ಜಲಾವೃತವಾಗಿವೆ. ಮನೆಗಳಿಗೆ ನೀರು ನುಗ್ಗಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ನಗರದ ನಾಯಕರ ಬೀದಿಯಲ್ಲಿ ಇಂದು ಮನೆಯೊಂದು ಕುಸಿದಿದ್ದು, ಅದೃಷ್ಟವಶಾತ್ ಮನೆಯವರೆಲ್ಲರೂ ಭಾರಿ ಅನಾಹುತದಿಂದ ಪಾರಾಗಿದ್ದಾರೆ.

ಇಂದು (ಆ. 29) ಬೆಳಿಗ್ಗೆ ಸುಮಾರು 9 ಗಂಟೆ ಸಮಯದಲ್ಲಿ ನಗರದ ಡೀವಿಯೇಷನ್ ರಸ್ತೆ ಬದಿಯ ನಾಯಕರ ಬೀದಿಯಲ್ಲಿ ಕುಮಾರ್ ಎಂಬುವರ ಮನೆ‌ ಕುಸಿದಿದೆ. ಇದು ಹಳೆಯ ನಾಡ ಹೆಂಚಿನ ಮನೆಯಾಗಿದ್ದು, ಗೋಡೆ ಬೀಳುವ ಸಂಭವ ಕಂಡು ಬರುತ್ತಿದ್ದಂತೆ ಮನೆಯವರೆಲ್ಲ ಹೊರಗೆ ಓಡಿ ಬಂದಿದ್ದಾರೆ. ಹಾಗಾಗಿ ಅಪಾಯದಿಂದ ಪಾರಾಗಿದ್ದಾರೆ. ಈ ಘಟನೆ ರಾತ್ರಿ ಸಂಭವಿಸಿದ್ದರೆ ಭಾರಿ ಅನಾಹುತ ಸಂಭವಿಸುತ್ತಿತ್ತು.

ಟಿವಿ, ಫ್ರಿಜ್, ಬಟ್ಟೆ, ದವಸ ಧಾನ್ಯ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಸಂಭವಿಸಿದ್ದು ಸುಮಾರು 2 ಲಕ್ಷ ರೂ ನಷ್ಟವಾಗಿದೆ‌. ಫುಟ್‌ಪಾತ್ ನಲ್ಲಿ ಫಾಸ್ಟ್ ಫುಡ್ ಗಾಡಿ ಇಟ್ಡುಕೊಂಡಿರುವ ಕುಮಾರ್ ಅವರು ನಷ್ಟ ಭರಿಸಿಕೊಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸಂಜೆ ವೇಳೆ ಮಳೆ ಬರುತ್ತಿತ್ತು. ಆದರೆ ಭಾನುವಾರ ರಾತ್ರಿ ಆರಂಭವಾದ ಮಳೆ, ಸೋಮವಾರವೂ ಮುಂದುವರೆದಿದೆ.

ಸತತ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ತುಂಬಿದೆ‌. ಸುವರ್ಣಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು ನದಿ ಪಾತ್ರದ ಕೆಲವು ಗ್ರಾಮಗಳಿಗೆ ತೊಂದರೆಯಾಗಿದೆ. ಅಂಬಳೆ  ಸೇತುವೆ ಮೇಲೆ ನೀರು ಹರಿಯುತ್ತಿದೆ.

ಮಹಾ ಮಳೆಯಿಂದಾಗಿ ಅನೇಕ ಕಡೆ, ಜಮೀನುಗಳಿಗೆ ಕರೆಯೋಪಾದಿಯಲ್ಲಿ ನೀರು ನುಗ್ಗಿದೆ. ದೊಡ್ಡರಾಯಪೇಟೆ, ಕುದೇರು ಉಮ್ಮತ್ತೂರು ಅಂಬಳೆ ಮಹಾಂತಾಳಪುರ ಮತ್ತಿತರ ಗ್ರಾಮಗಳಲ್ಲಿ ಜಮೀನಿಗಳಿಗೆ ನೀರು ನುಗ್ಗಿದೆ. ಇದರಿಂದಾಗಿ ಜೋಳದ ಬಿತ್ತನೆ ಹಾಳಾಗಿದೆ. ಹುಲ್ಲೇಪುರ ಗ್ರಾಮ ಜಲಾವೃತವಾಗಿದೆ. ಮನೆಗಳಿಗೆ ನೀರು ನುಗ್ಗಿದೆ.

24 ಮನೆಗಳ ಕುಸಿತ: ಮಳೆಯಿಂದಾಗಿ ಕಳೆದ ಮೂರು ದಿನಗಳಲ್ಲಿ ಜಿಲ್ಲೆಯಾದ್ಯಂತ 24 ಮನೆಗಳು ಕುಸಿತವಾಗಿವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿ ಉದಯವಾಣಿಗೆ ತಿಳಿಸಿದರು.  ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಇದಲ್ಲದೇ   ಬೆಳೆಗಳು ಹಾನಿಗೊಳಗಾಗಿದ್ದು ಒಟ್ಟು ಹಾನಿಯ ವಿವರ ಪಡೆಯಲಾಗುತ್ತಿದೆ ಎಂದು ಅವರು ತಿಳಿಸಿದರು.

ಮಹಾ ಮಳೆಯಿಂದಾಗಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿ ಸೋಮವಾರ  ರಜೆ ಘೋಷಿಸಿದ್ದಾರೆ.

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.