ಭಾರೀ ಮಳೆ: ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ನುಗ್ಗಿದ ನೀರು


Team Udayavani, Oct 24, 2019, 3:00 AM IST

bhari-male

ಕೊಳ್ಳೇಗಾಲ: ಕಳೆದ ಮೂರು ದಿನಗಳಿಂದ ಧಾರಾಕಾರ ಮಹಾಮಳೆಯ ನೀರು ಕಬಿನಿ ನಾಲೆಯ ಮೂಲಕ ಹರಿದು ತಾಲೂಕಿನ ಮಧುವನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಲಮಿಶ್ರಿತ ನೀರು ನುಗ್ಗಿದ ಪರಿಣಾಮ ಗ್ರಾಮದ ರೋಗಿಗಳು ಮತ್ತು ವೈದ್ಯರು ಪರದಾಡುವಂತಾಗಿದೆ.

ನಾಲೆಯ ಮಲಮಿಶ್ರಿತ ನೀರು ನುಗ್ಗಿದ ಪರಿಣಾಮ ಆಸ್ಪತ್ರೆ ಆವರಣ ಸಂಪೂರ್ಣ ಗಬ್ಬು ನಾರುತ್ತಿದ್ದು, ಆಸ್ಪತ್ರೆಗೆ ಚಿಕಿತ್ಸೆಗೆಂದು ಬರುವ ರೋಗಿಗಳಿಗೆ ನೀರಿನ ವಾಸನೆಯಿಂದ ಮತ್ತಷ್ಟು ಅನಾರೋಗ್ಯಕ್ಕೆ ತುತ್ತಾಗುವ ಭೀತಿ ಎದುರಾಗಿದೆ.

ನೀರು ಹೊರ ಹಾಕಿದ ಸಿಬ್ಬಂದಿ: ರಾತ್ರಿಯ ವೇಳೆ ಆಸ್ಪತ್ರೆಗೆ ನುಗ್ಗಿದ ಮಲಮಿಶ್ರಿತ ನೀರು ತುಂಬಿಕೊಂಡಿರುವುದನ್ನು ಬೆಳಗ್ಗೆ ಆಸ್ಪತ್ರೆ ಸಿಬ್ಬಂದಿ ಬೀಗ ಬಿಚ್ಚುತ್ತಿದ್ದಂತೆ ನೀರನ್ನು ಕಂಡು ಅಸಹ್ಯಪಟ್ಟು ನಂತರ ಬರುವ ರೋಗಿಗಳಿಗೆ ಅವಕಾಶ ಕಲ್ಪಿಸುವ ಸಲುವಾಗಿ ಆಸ್ಪತ್ರೆಯ ಸಹಾಯಕಿ ನೀರನ್ನು ಹೊರ ಹಾಕುವ ಪ್ರಯತ್ನ ಮಾಡಿದರು.

ಮೂಗು ಹಿಡಿದು ನಿಲ್ಲುವ ಪರಿಸ್ಥಿತಿ: ಕೊಳಚೆ ನೀರನ್ನು ಹೊರ ಚೆಲ್ಲಿದಷ್ಟು ರ್ದುವಾಸನೆಯಿಂದ ಆಸ್ಪತ್ರೆಯ ವೈದ್ಯರು ಸೇರಿದಂತೆ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದ ರೋಗಿಗಳು ಗಬ್ಬುನಾರುವ ವಾಸನೆಯಿಂದ ಮೂಗು ಹಿಡಿದುಕೊಂಡು ಆಸ್ಪತ್ರೆಯ ಹೊರವಲಯದಲ್ಲೇ ನಿಲ್ಲುವ ಸ್ಥಿತಿ ನಿರ್ಮಾಣವಾಗಿತ್ತು.

ಮನವಿ ಮಾಡಿದರೂ ಕ್ರಮ ಕೈಗೊಂಡಿಲ್ಲ: ಸುದ್ದಿಗಾರರೊಂದಿಗೆ ಆಸ್ಪತ್ರೆಯ ಡಾ.ಡಿ.ಸಿದ್ದಪ್ಪಸ್ವಾಮಿ ಮಾತನಾಡಿ, ಪ್ರತಿವರ್ಷ ಮಳೆ ಬಂದ ಸಂದರ್ಭದಲ್ಲಿ ಈ ರೀತಿಯ ಅವ್ಯವಸ್ಥೆ ಕಟ್ಟಿಟ್ಟ ಬುತ್ತಿಯಾಗಿದೆ. ಇದರಿಂದ ಮುಕ್ತಿ ಹೊಂದುವ ಸಲುವಾಗಿ ಆಸ್ಪತ್ರೆಯ ಕೊಠಡಿಯನ್ನು ಬೇರೆಡೆಗೆ ಸ್ಥಳಾಂತರ ಮಾಡಿಸಿಕೊಡುವಂತೆ ತಾಲೂಕು ವೈಧ್ಯಾಧಿಕಾರಿ ಡಾ. ಗೋಪಾಲ್‌ಗೆ ಹಲವಾರು ಬಾರಿ ಮನವಿ ಮಾಡಲಾಗಿದೆ ಆದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದರು.

ಆರೋಗ್ಯಾಧಿಕಾರಿಗೆ ಮನವಿ: ಈ ರೀತಿ ಮಳೆಯ ನೀರಿನಿಂದ ರೋಗಿಗಳಿಗೆಂದು ಸರ್ಕಾರದಿಂದ ಬಂದಿರುವ ಔಷಧಿಗಳಿಗೆ ಆಡಚಣೆ ಉಂಟಾಗದಂತೆ ಸುಭದ್ರವಾಗಿ ಸೆಲ್ಪ್ಗಳ ಮೇಲೆ ಇಟ್ಟು ರಕ್ಷಣೆ ಮಾಡಲಾಗಿದೆ. ಆಸ್ಪತ್ರೆಯ ಆರೋಗ್ಯಾಧಿಕಾರಿ ಈಗಾಲಾದರೂ ಸೂಕ್ತ ಕೊಠಡಿಯೊಂದನ್ನು ನೀಡಿ ಗ್ರಾಮಸ್ಥರ ಆರೋಗ್ಯ ನಿವಾರಣೆ ಮಾಡಲು ಸಹಕಾರಿಯಾಗಬೇಕೆಂದು ಮನವಿ ಮಾಡಿದ್ದಾರೆ.

ಶೀಘ್ರ ಆಸ್ಪತ್ರೆ ಸ್ಥಳಾಂತರ: ಮಧುವನಹಳ್ಳಿ ಗ್ರಾಪಂ ಸದಸ್ಯ ಮಹದೇವ ಪ್ರಸಾದ್‌ ಮಾತನಾಡಿ, ಗ್ರಾಪಂ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೊಠಡಿ ನೀಡಲಾಗಿತ್ತು. ಆಸ್ಪತ್ರೆಗೆ ಕೊಳಚೆ ನೀರು ನುಗ್ಗುವುದನ್ನು ತಪ್ಪಿಸಿಕೊಳ್ಳಬೇಕಾದರೆ ಮತ್ತೂಂದು ಉರ್ದು ಶಾಲೆ ಖಾಲಿ ಇದ್ದು, ಅಲ್ಲಿಗೆ ಸ್ಥಳಾಂತರ ಮಾಡಿಕೊಳ್ಳುವ ಮೂಲಕ ಕೊಳಚೆ ನೀರಿನ ಆವಾಂತರದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತದೆಂದು ಸಲಹೆ ನೀಡಿದ್ಧಾರೆ.

ಆಸ್ಪತ್ರೆಯ ಅವ್ಯವಸ್ಥೆಯನ್ನು ಜನಪ್ರತಿನಿಧಿಗಳು ಮತ್ತು ಆಸ್ಪತ್ರೆಯ ಉನ್ನತ ಅಧಿಕಾರಿಗಳು ಕೊಠಡಿಯ ಅವ್ಯವಸ್ಥೆಯನ್ನು ವೀಕ್ಷಣೆ ಮಾಡಿ ಗ್ರಾಮಸ್ಥರಿಗೆ ಉತ್ತಮ ಆಸ್ಪತ್ರೆ ಮತ್ತು ಗುಣಮಟ್ಟದ ಚಿಕಿತ್ಸೆ ದೊರಕಿಸಿಕೊಡಬೇಕೆಂದು ಗ್ರಾಮಸ್ಥರ ಆಗ್ರಹವಾಗಿದೆ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.