ಕಾಳ್ಗಿಚ್ಚು ಆರಿಸಲು ಕಾಪ್ಟರ್ ಬಳಕೆ
Team Udayavani, Feb 26, 2019, 12:30 AM IST
ಗುಂಡ್ಲುಪೇಟೆ/ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಸೇರಿದಂತೆ ರಾಜ್ಯದ ವಿವಿಧ ಅರಣ್ಯಗಳಲ್ಲಿ ಕಾಣಿಸಿಕೊಂಡಿರುವ ಕಾಳ್ಗಿಚ್ಚಿನ ಪ್ರತಾಪ ಮುಂದುವರಿದಿದ್ದು, ಬಂಡೀಪುರದಲ್ಲಿ ಬೆಂಕಿ ನಂದಿಸಲು ಹೆಲಿಕಾಪ್ಟರ್ಗಳನ್ನು ಬಳಕೆ ಮಾಡಿಕೊಳ್ಳಲಾಗಿದೆ. ಇದರ ಜತೆಯಲ್ಲೇಹಿಮವದ್ ಗೋಪಾಲಸ್ವಾಮಿ ಬೆಟ್ಟದಿಂದ ಮದ್ದೂರು ಅರಣ್ಯ ವಲಯಕ್ಕೂ ಬೆಂಕಿ ಆವರಿಸಿದೆ.
ರಾಜ್ಯ ಸರ್ಕಾರದ ಮನವಿಯ ಅನ್ವಯ ವಾಯುಪಡೆಯ ಎಂಐ17-ವಿ5 ಎರಡು ಸಮರ ಹೆಲಿಕಾಪ್ಟರ್ಗಳು ಬಂಡೀಪುರಕ್ಕೆ ಆಗಮಿಸಿ, ಬೆಂಕಿ ಆರಿಸುವಲ್ಲಿ ನಿರತವಾದವು. ಸೋಮವಾರ ಮಧ್ಯಾಹ್ನವೇ 2 ಹೆಲಿಕಾಪ್ಟರ್ ಬಂದರೂ, ಇಳಿಯಲು ಸೂಕ್ತ ಸ್ಥಳಾವಕಾಶ ಇಲ್ಲದೇ ಮೈಸೂರಿಗೆ ವಾಪಸ್ ಹೋಗಿದ್ದವು. ಸಂಜೆ 4ರ ವೇಳೆಗೆ ಮತ್ತೆ ಬಂದು, ಕರಡುಕಲ್ ಬೆಟ್ಟದಲ್ಲಿ ಒಂದು, ಮತ್ತೂಂದು ಚಮ್ಮನಹಳ್ಳದಲ್ಲಿ ಕಾರ್ಯಾಚರಣೆ ನಡೆಸಿದವು. ಒಟ್ಟು 30 ಸಾವಿರ ಲೀ. ನೀರನ್ನು ಬೆಂಕಿ ಆರಿಸಲು ಸಿಂಪಡಿಸಲಾಗಿದೆ.
8 ಸಾವಿರ ಎಕರೆ ಆಹುತಿ
ಬಂಡೀಪುರ ಕಾಡಿನಲ್ಲೇ ಇದುವರೆಗೆ 8 ಸಾವಿರ ಎಕರೆ ಅರಣ್ಯ ಅಗ್ನಿಗೆ ಆಹುತಿಯಾಗಿದೆ. ಈ ಬಗ್ಗೆ ಸ್ವತಃ ಅರಣ್ಯ ಅಧಿಕಾರಿಗಳೇ ಮಾಹಿತಿ ನೀಡಿದ್ದಾರೆ.
ಸಚಿವರಿಂದ ಪರಿಶೀಲನೆ: ಬೆಂಕಿ ಬಿದ್ದ ಅರಣ್ಯ ಪ್ರದೇಶಗಳಲ್ಲಿ ಸೋಮವಾರ ವೀಕ್ಷಣೆ ನಡೆಸಿದ ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಬೆಂಕಿಯಿಂದ ತೀವ್ರವಾಗಿ ಹಾನಿಗೊಳಗಾಗಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು.
ಇನ್ನೂ ಹಲವೆಡೆ ಬೆಂಕಿ
– ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲು
– ಸಾಗರ ತಾಲೂಕಿನ ಆವಿನಹಳ್ಳಿ ಹೋಬಳಿ ಭಾಗದ ಅರಣ್ಯ
– ಬೆಂಗಳೂರು ಬಳಿಯ ನೆಲಮಂಗಲದ ನೀಲಗಿರಿ ತೋಪು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
MUST WATCH
ಹೊಸ ಸೇರ್ಪಡೆ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?