ಕಬಿನಿ ಒಡಲಲ್ಲಿ ಆಸ್ಪತ್ರೆ ತ್ಯಾಜ್ಯ ವಿಲೇವಾರಿ


Team Udayavani, Dec 20, 2019, 1:07 PM IST

cn-tdy-1

ಯಳಂದೂರು: ಯಳಂದೂರು ಪಟ್ಟಣದ ಹೊರ ವಲಯದಲ್ಲಿ ಹರಿಯುವ ಕಬಿನಿ ಕಾಲುವೆಯ ಬದಿಯಲ್ಲೇ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಅಪಾಯಕಾರಿ ತ್ಯಾಜ್ಯ ಸುರಿಯಲಾಗುತ್ತಿದ್ದು, ಇದು ಕಾಲುವೆ ಸೇರುತ್ತಿದೆ. ಜಾನುವಾರುಗಳು, ಜಲಚರಗಳಿಗೆ ಹಾಗೂ ರೈತರಿಗೆ ಅಪಾಯ ತಂದೊಡ್ಡುವ ಸಾಧ್ಯತೆಗಳು ಹೆಚ್ಚಿವೆ. ಪಟ್ಟಣದಲ್ಲಿ ಪ್ಲಾಸ್ಟಿಕ್‌ ಬ್ಯಾಗ್‌ಗಳಲ್ಲಿ ಕಸವನ್ನು ತಂದು ಕಾಲುವೆಯ ಬಳಿಯಲ್ಲೇ ಬೀಸಾಡಲಾಗಿದೆ. ಇದರೊಳಗೆ ಅಪಾಯಕಾರಿ ಸಿರಿಂಜ್‌ಗಳು, ಅವಧಿ ಮುಗಿದ ಮಾತ್ರೆಗಳು, ಔಷಧಿ ಬಾಟಲಿಗಳು, ಗಾಯವನ್ನು ಶುಚಿಗೊಳಿಸಿ ಬೀಸಾಡುವ ಹತ್ತಿಯ ತುಂಡುಗಳು ಬಿದ್ದಿವೆ.

ಮೇವನ್ನು ಅರಸಿ ಬರುವ ದನಕರುಗಳು, ಎಮ್ಮೆ, ಕೋತಿಗಳು ಸೇರಿದಂತೆ ಇತರೆ ಜಾನುವಾರುಗಳು ಇದಕ್ಕೆ ಬಾಯಿ ಹಾಕಿ. ಪ್ಲಾಸ್ಟಿಕ್‌ ಕವರ್‌ಗಳನ್ನು ಚೆಲ್ಲಾಪಿಲ್ಲಿ ಮಾಡುತ್ತವೆ. ಹೀಗಾಗಿ ಇದರ ಬಳಿಯಲ್ಲೇ ಕಬಿನಿ ಕಾಲುವೆ ಇದೆ. ಈಗ ಕಾಲುವೆಯಲ್ಲಿ ನೀರು ಹರಿಯುತ್ತಿದ್ದು, ಅಪಾಯಕಾರಿ ತ್ಯಾಜ್ಯ ನೀರಲ್ಲಿ ಸೇರಿ, ಕಬ್ಬಿನ ಗದ್ದೆ ಹಾಗೂ ಹರಿಯುವ ನೀರನ್ನು ಕಲುಷಿತಗೊಳಿಸುವ ಸಾಧ್ಯತೆ ಇದೆ. ಇದರ ಜೊತೆಗೆ ಜಲಚರಗಳಿಗೂ ಇದು ಮಾರಕವಾಗುವ ಸಾಧ್ಯತೆಗಳಿವೆ.

ಆಸ್ಪತ್ರೆ ತ್ಯಾಜ್ಯ ಎಲ್ಲೆಂದರಲ್ಲಿ ಬೀಸಾಡುವಂತಿಲ್ಲ: ಆಸ್ಪತ್ರೆಗಳಲ್ಲಿ ಉತ್ಪತ್ತಿಯಾಗುವ ಪ್ರತಿಯೊಂದು ತ್ಯಾಜ್ಯವನ್ನು ಶೇಖರಿಸಿ, ಇದನ್ನು ಸಂಸ್ಕರಿಸುವ ಘಟಕಕ್ಕೆ ಕಳುಹಿಸಬೇಕು. ಇದನ್ನು ಎಲ್ಲೆಂದರಲ್ಲಿ ಬೀಸಾಡಬಾರದು ಎಂಬ ಕಟ್ಟುನಿಟ್ಟಿನ ನಿಮಯವಿದೆ. ಚಾಮರಾಜನಗರದಲ್ಲಿ ಇದರ ಸಂಸ್ಕರಣ ಘಟಕ ಇಲ್ಲದ ಕಾರಣ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಇರುವ ಘಟಕ್ಕೆ ಇದನ್ನು ರವಾನಿಸಬೇಕು. ಆದರೆ, ಇದರ ನಿರ್ವಹಣೆ ಮಾಡಬೇಕಾದ ಆಸ್ಪತ್ರೆಯ ಸಿಬ್ಬಂದಿ ಈ ಬಗ್ಗೆ ನಿರ್ಲಕ್ಷ್ಯ ತೋರಿದೆ.

ಆಸ್ಪತ್ರೆಗಳಲ್ಲಿ ನಿರ್ಲಕ್ಷ್ಯ ಬೇಡ: ಬಾಟಲಿಗಳು, ಸಿರಿಂಜ್‌ಗಳು ಜಾನುವಾರುಗಳಿಗೆ ಮಾರಕವಾಗಿ ಪರಿಣಮಿಸಬಹುದು. ಅಲ್ಲದೆ, ಅಕ್ಕಪಕ್ಕದ ಜಮೀನುಗಳ ರೈತರ ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಬಗ್ಗೆ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ನಿರ್ಲಕ್ಷ್ಯ ಸಲ್ಲದು. ಇಂತಹ ಘಟನೆಗಳು ಹಲವು ತಿಂಗಳುಗಳಿಂದ ನಡೆಯುತ್ತಿದೆ. ಈ ಬಗ್ಗೆ ದೂರುಗಳನ್ನೂ ನೀಡಲಾಗಿದೆ. ಆದರೆ, ಸಂಬಂಧಪಟ್ಟವರು ಈ ಬಗ್ಗೆ ಸೂಕ್ತ ಕ್ರಮವಹಿಸುತ್ತಿಲ್ಲ ಎಂಬುದು ಸ್ಥಳೀಯರಾದ ಮನು, ರವಿ ಅವರ ಆರೋಪ.

 

-ಫೈರೋಜ್‌ ಖಾನ್

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.