ಹುಲಿಯಮ್ಮ ದೇಗುಲ ಪ್ರವೇಶ ನಿರ್ಬಂಧ


Team Udayavani, Sep 22, 2019, 3:00 AM IST

huliyamma

ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿನ ಮಂಗಲ ಗ್ರಾಮದ ಸಮೀಪದಲ್ಲಿರುವ ಹುಲಿಯಮ್ಮನ ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶವನ್ನು ಅರಣ್ಯ ಇಲಾಖೆ ನಿಷೇಧಿಸಿದೆ. ಹುಲಿ ಸಂರಕ್ಷಿತ ಪ್ರದೇಶವಾದ ಬಂಡೀಪುರದ ಮಂಗಲ ಗ್ರಾಮದ ಸಮೀಪದಲ್ಲಿರುವ ಹುಲಿಯಮ್ಮ ದೇವಸ್ಥಾನ ಹಲವು ಭಕ್ತರನ್ನು ಹೊಂದಿರುವ ದೇಗುಲ.

ಬಂಡೀಪುರ ಹುಲಿಯೋಜನಾ ನಿರ್ದೇಶಕರ ಕಚೇರಿಯ ಪಕ್ಕದ ರಸ್ತೆಯಿಂದ ಮಂಗಲ ಗ್ರಾಮಕ್ಕೆ ಹೋಗುವಾಗ ಸಿಗುವ ಈ ದೇವಾಲಯಕ್ಕೆ ನಿಜವಾದ ಭಕ್ತರು ಬಂದು ದೇವಿಯ ದರ್ಶನ ಮಾಡಿಕೊಂಡು ಹೋಗುತ್ತಾರೆ. ಅದಕ್ಕಿಂತ ಹೆಚ್ಚಾಗಿ ಕಾಡಿನಲ್ಲಿರುವ ಈ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿ ದೇವಾಲಯದ ಆವರಣದಲ್ಲೇ ಬಾಡೂಟ ತಯಾರಿಸಿ, ಮದ್ಯ ಸೇವನೆ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿದೆ.

ಗುರುತಿನ ಚೀಟಿ ಕಡ್ಡಾಯ: ನಿಜವಾದ ಭಕ್ತರು ದೇವಿಯ ದರ್ಶನ ಪಡೆಯಲು ಬರುವವರಿಗೆ ಅರಣ್ಯ ಇಲಾಖೆ ಭಕ್ತರ ಯಾವುದಾದರೊಂದು ಗುರುತಿನ ಚೀಟಿ ತೋರಿಸುವುದು ಕಡ್ಡಾಯ. ಗುರುತಿನ ಚೀಟಿ ತೋರಿಸಿದರೆ ವ್ಯಕ್ತಿಯ ಬಗ್ಗೆ ವಿವರ ಸಿಗುತ್ತದೆ. ದೇವಾಲಯದ ಸಮೀಪದಲ್ಲಿಯೇ ಇರುವ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಈ ಗುರುತಿನ ಚೀಟಿಯನ್ನು ತೋರಿಸಿ ಭಕ್ತರ ತಂಡದೊಂದಿಗೆ ಅರಣ್ಯ ಸಿಬ್ಬಂದಿಯೊಬ್ಬರ ಭದ್ರತೆಯಲ್ಲಿ ಹೋಗಿ ದೇವಿನ ದರ್ಶನ ಪಡೆದು ವಾಪಸ್‌ ಬರಬೇಕಾಗುತ್ತದೆ.

ಹುಲಿ ಸಂಖ್ಯೆ ಹೆಚ್ಚಳ: ಇತ್ತೀಚಿಗೆ ಬಂಡೀಪುರ ಉದ್ಯಾನದಲ್ಲಿ ಹುಲಿಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದೇವಾಲಯದ ಆವರಣದಲ್ಲಿ ಭಕ್ತರು ಅಡುಗೆ ಮಾಡಲು ಮಾಂಸವನ್ನು ತರುವುದು. ಅದರ ವಾಸನೆಯನ್ನು ಗ್ರಹಿಸಿ ವನ್ಯ ಜೀವಿಗಳು ದಾಳಿ ಮಾಡುವುದು ಹೆಚ್ಚಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಸಾರ್ವಜನಿಕರ ಜೀವ ರಕ್ಷಣೆಗೋಸ್ಕರ ಅರಣ್ಯ ಇಲಾಖೆ ಈ ಕ್ರಮ ತೆಗೆದುಕೊಂಡಿದೆ.

ಮದ್ಯ ಪ್ರಿಯರ ಹಾವಳಿಗೆ ತಡೆ: ಮೊದಲೇ ಪ್ಲಾಸ್ಟಿಕ್‌ ನಿಷೇಧಿತ ಪ್ರದೇಶವಾದ ಬಂಡೀಪುರ ಉದ್ಯಾನದಲ್ಲಿನ ಹುಲಿಯಮ್ಮ ದೇವಸ್ಥಾನಕ್ಕೆ ಭಕ್ತರಂತೆ ಬರುವ ಅನೇಕರು ದೇವಾಲಯದ ಪಕ್ಕದಲ್ಲೇ ಮದ್ಯಸೇವನೆ ಮಾಡಿ, ಮಾಂಸದೂಟವನ್ನು ಸಿದ್ಧಪಡಿಸಿ ತಿಂದು ಚೂರುಗಳನ್ನು ಅಲ್ಲಿಯೇ ಬಿಟ್ಟು ಪರಿಸರವನ್ನು ಹಾಳು ಮಾಡುತ್ತಿದ್ದರು. ಇಂತಹ ಮಾಂಸದ ವಾಸನೆಯನ್ನು ಗ್ರಹಿಸುವ ಕಾಡುಪ್ರಾಣಿಗಳು ದಾಳಿ ನಡೆಸಿರುವ ಉದಾಹರಣೆಗಳು ಹೆಚ್ಚಿವೆ. ಆದ್ದರಿಂದ ಈ ದೇವಾಲಯದ ದರ್ಶನಕ್ಕೆ ಗುರುತಿನ ಚೀಟಿ ಕಡ್ಡಾಯಗೊಳಿಸಿ ಅರಣ್ಯ ಇಲಾಖೆ ಉತ್ತಮ ಕ್ರಮ ತೆಗೆದುಕೊಂಡಿದೆ.

ಹುಲಿಗಳ ಹಾವಳಿ: ಹುಲಿಯಮ್ಮ ದೇವಸ್ಥಾನ ಸುತ್ತಮುತ್ತಲ ಪ್ರದೇಶದಲ್ಲಿ ಹಗಲು ಹೊತ್ತಿನಲ್ಲಿಯೇ ಹುಲಿಗಳ ಓಡಾಟ ಹೆಚ್ಚಾಗಿದೆ. ಹುಲಿಗಳ ಆವಾಸ ಸ್ಥಾನವಾಗಿರುವ ಇಲ್ಲಿ ಇತ್ತೀಚಿಗೆ ಶಿವಮಾದಯ್ಯ ಎಂಬ ರೈತ ತಮ್ಮ ಎತ್ತುಗಳನ್ನು ತೆಗೆದುಕೊಂಡು ಹೋಗುತ್ತಿದ್ದಾಗ ಹುಲಿ ದಾಳಿಗೆ ಸಿಲುಕಿ ಬಲಿಯಾಗಿದ್ದರು. ಒಟ್ಟಾರೆ ಹಲವು ದಿನಗಳಿಂದ ದೇವಾಲಯದ ಉತ್ತಮ ಪರಿಸರವನ್ನು ಹಾಳು ಮಾಡುತ್ತಿದ್ದವರಿಗೆ ಅರಣ್ಯ ಇಲಾಖೆ ಸರಿಯಾಗಿ ಚುರುಕು ಮುಟ್ಟಿಸಿದೆ.

ಕಾನೂನು ರೀತಿ ಕ್ರಮ: ಬಂಡೀಪುರ ಉದ್ಯಾನವನದ ವ್ಯಾಪ್ತಿಯ ಮಂಗಲ ಸಮೀಪದಲ್ಲಿರುವ ಹುಲಿಯಮ್ಮ ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿದ್ದೇವೆ. ದೇವಿಯ ದರ್ಶನ ಮಾಡಲೇ ಬೇಕು ಎಂಬ ಭಕ್ತರು ತಮ್ಮ ಯಾವುದಾದರೊಂದು ಅಧಿಕೃತ ಗುರುತಿನ ಚೀಟಿಯನ್ನು ತೋರಿಸಿ ನಮ್ಮ ಸಿಬ್ಬಂದಿಯ ಭದ್ರತೆಯೊಂದಿಗೆ ದೇವಿ ದರ್ಶನ ಮಾಡಿ ವಾಪಸ್‌ ಬರಬೇಕು. ದೇವಾಲಯದ ಆವರಣದಲ್ಲಿ ಯಾವುದೇ ರೀತಿಯ ಚಟುವಟಿಕೆಯನ್ನು ಮಾಡುವಂತಿಲ್ಲ. ಮಾಡಿದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹುಲಿ ಯೋಜನಾ ನಿರ್ದೇಶಕ ಟಿ.ಬಾಲಚಂದ್ರ ತಿಳಿಸಿದ್ದಾರೆ.

ಬಂಡೀಪುರದ ಸೂಕ್ಷ್ಮ ಪರಿಸರ ವಲಯದಲ್ಲಿರುವ ದೇವಾಲಯದಲ್ಲಿ ಕುಡುಕರ ಮತ್ತು ಮಾಂಸ ಪ್ರಿಯರ ಹಾವಳಿ ಹೆಚ್ಚಾಗಿತ್ತು. ಮಾಂಸದ ತುಣುಕಿನ ವಾಸನೆಯಿಂದ ಈ ಸ್ಥಳದಲ್ಲಿ ಅನೇಕ ಕಾಡು ಪ್ರಾಣಿಗಳು ದಾಳಿ ನಡೆಸಿವೆ. ಅರಣ್ಯ ಇಲಾಖೆಯ ಕ್ರಮ ಅಭಿನಂದನಾರ್ಹ.
-ಆರ್‌.ಕೆ.ಮಧು, ವನ್ಯಜೀವಿ ಛಾಯಾಗ್ರಾಹಕ

* ಸೋಮಶೇಖರ್‌

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.