ಹನೂರು ಕ್ಷೇತ್ರದಲ್ಲಿ ಕಗ್ಗಂಟಾದ ಬಿಜೆಪಿ ಅಭ್ಯರ್ಥಿಯ ಆಯ್ಕೆ


Team Udayavani, Mar 30, 2023, 12:43 PM IST

tdy-11

ಹನೂರು: ಮನೆಯೊಂದು 5 ಬಾಗಿಲಿನಂತೆ ಒಡೆದ ಮನೆಯಂತಾಗಿರುವ ಬಿಜೆಪಿಯಿಂದ ಹನೂರು ಕ್ಷೇತ್ರದ ಅಭ್ಯರ್ಥಿಯಾಗಿ ಯಾರ ಹೆಸರು ಅಂತಿಮವಾಗಲಿದೆ. ಟಿಕೆ‌ಟ್‌ ವಂಚಿತರು ಯಾವ ಪಕ್ಷದಿಂದ ಸ್ಫರ್ಧಿಸಲಿದ್ದಾರೆ ಎಂಬುದು ಕ್ಷೇತ್ರಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ಅತ್ಯಲ್ಪ ಮತದಿಂದ ಸೋತಿದ್ದ ಪ್ರೀತನ್‌: ಕಳೆದ 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಸಚಿವ ಸೋ ಮಣ್ಣ ಹಾಗೂ ಇನ್ನಿತರ ಆಕಾಂಕ್ಷಿಗಳಿಗೆ ಸೆಡ್ಡುಹೊಡೆದು ಅಂತಿಮ ಕ್ಷಣದಲ್ಲಿ ಟಿಕೆಟ್‌ ಪಡೆದು ಸ್ಫರ್ಧೆಗೆ ಇಳಿದಿದ್ದ ಪ್ರೀತನ್‌ ನಾಗಪ್ಪ ಕೇವಲ 3500 ಮತಗಳ ಅಂತರದಿಂದ ಪರಾಭವಗೊಂಡರು. ಇನ್ನು ಜೆಡಿಎಸ್‌ ಅಭ್ಯರ್ಥಿಯಾಗಿದ್ದ ಮಂಜುನಾಥ 44 ಸಾವಿರ ಮತ ಪಡೆದಿದ್ದರಿಂದ ಮತಗಳ ವಿಭಜನೆಯ ಸಂಪೂರ್ಣ ಲಾಭ ನರೇಂದ್ರ ಅವರಿಗೆ ದೊರೆತಿತ್ತು.

ಪ್ರೀತನ್‌ ಸೋಲಿಗೆ ಸೋಮಣ್ಣ ಕಾರಣ?: 2018ರ ಚುನಾವಣೆಯಲ್ಲಿ ಕ್ಷೇತ್ರದಿಂದ ಸ್ಫರ್ಧೆ ಬಯಸಿದ್ದ ಸಚಿವ ಸೋಮಣ್ಣರಿಗೆ ನಾಗಪ್ಪ ಕುಟುಂಬ ಸ್ಥರು ಟಿಕೆಟ್‌ ಬಿಟ್ಟುಕೊಡಲಿಲ್ಲ ಎಂಬ ಕಾರಣಕ್ಕೆ ಅವರ ಹಿಂಬಾಲಕ ರಾಗಿದ್ದ ಎಂ.ಆರ್‌.ಮಂಜುನಾಥ್‌ರಿಗೆ ಜೆಡಿಎಸ್‌ ಟಿಕೆಟ್‌ ಕೊಡಿಸಿ ಸ್ಫರ್ಧೆಗಿಳಿಸಿ ಮತ ವಿಭಜನೆ ಮಾಡಿಸಿ ನಾಗಪ್ಪ ಪುತ್ರ ಡಾ.ಪ್ರೀತನ್‌ ನಾಗಪ್ಪರನ್ನು ಸೋಲಿಸಿದರು ಎಂಬುದು ಜಗಜ್ಜಾಹೀರಾಗಿದೆ. ಈ ಹಿನ್ನೆಲೆ ಕ್ಷೇತ್ರದಲ್ಲಿನ 50 ಸಾವಿರಕ್ಕೂ ಹೆಚ್ಚು ವೀರಶೈವ ಮತದಾರರು ಸೋ ಮಣ್ಣರ ವಿರುದ್ಧವಿದ್ದಾರೆ ಎಂದು ತಿಳಿದು ಬಂದಿದೆ.

ಅಲ್ಲದೆ, ಕಳೆದ ಒಂದೂವರೆ ವರ್ಷದಿಂದ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲೆಗಾಗಲಿ, ಹನೂರು ಕ್ಷೇತ್ರಕ್ಕಾಗಲಿ ಯಾವುದೇ ಕೊಡುಗೆ ನೀಡಿಲ್ಲ. ಅವರು ಕ್ಷೇತ್ರಕ್ಕೆ ಕಾಲಿಟ್ಟಾಗಲೆಲ್ಲ ಶಾಸಕ ನರೇಂದ್ರ ಅವರನ್ನು ಹೊಗಳುತ್ತಿದ್ದರಿಂದ ಅವರ ನಡೆಯ ವಿರುದ್ಧ ಬಿಜೆಪಿ ಮಂಡಲದ ಅಧ್ಯಕ್ಷರು, ವಿವಿಧ ಮೋರ್ಚಾಗಳ ಪದಾಧಿ ಕಾರಿಗಳು ಸೇರಿ ಬಹತೇಕ ವೀರಶೈವ ಮುಖಂ ಡರು ಅವರ ವಿರುದ್ಧ ಕಿಡಿಕಾರುತ್ತಿದ್ದಾರೆ. ಈ ನಿಟ್ಟಿನಲ್ಲಿ ಹನೂ ರು ಕ್ಷೇತ್ರದಿಂದ ಸೋಮಣ್ಣ ಸ್ಫರ್ಧೆ ಮಾಡಿದ್ದಲ್ಲಿ ಗೆಲುವು ಕಷ್ಟವಾಗಲಿದೆ ಎಂಬುದು ಜನತೆ ಅಭಿಪ್ರಾಯವಾಗಿದೆ.

ದತ್ತೇಶ್‌ ಕುಮಾರ್‌ಗೆ ಟಿಕೆಟ್‌ ಡೌಟ್‌: ಇನ್ನು ಮತ್ತೋರ್ವ ಆಕಾಂಕ್ಷಿ ದತ್ತೇಶ್‌ ಕುಮಾರ್‌ ಅವರು ಕೊಳ್ಳೇಗಾಲದಲ್ಲಿ ಮಾನಸ ಶಿಕ್ಷಣ ಸಂಸ್ಥೆ ಕಟ್ಟಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದ್ದಾರೆ. ಇದಲ್ಲದೆ ಹಲವಾರು ಜನಪರ ಕಾರ್ಯಕ್ರಮ ಮಾಡಿದ್ದಾರೆ. ಆದರೆ ಕ್ಷೇತ್ರದಲ್ಲಿ ಸಮುದಾಯದ ಬಲ ಕಡಿಮೆಯಿದ್ದು ಯಾವುದೇ ಸಾಂಪ್ರದಾಯಿಕ ಮತ ಬರುವುದಿಲ್ಲ. ಈ ಹಿನ್ನೆಲೆ ಇವರು ಸ್ಫರ್ಧಿಸಿದರೂ ಗೆಲುವು ಲಭಿಸುವುದಿಲ್ಲ ಎಂಬುದು ಬಿಜೆಪಿ ವರಿಷ್ಠರಿಗೆ ತಿಳಿದಿದ್ದು ಇವರಿಗೆ ಬಿ-ಫಾರಂ ನೀಡುವ ಯಾವುದೇ ಸಾಧ್ಯತೆಗಳಿಲ್ಲ.

ವಲಸಿಗರಿಗೂ ಟಿಕೆಟ್‌ ಡೌಟ್‌: ಇನ್ನು ಹನೂರು ಕ್ಷೇತ್ರಕ್ಕೆ ವಲಸಿಗರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು ಈ ಪಟ್ಟಿಯಲ್ಲಿ ಇದೇ ಕ್ಷೇತ್ರ ಮೂಲದವರು ಎಂದು ಘೋಷಿಸಿಕೊಂಡು ಬೆಂಗಳೂರಿನಿಂದ ಬಂದಿರುವ ಜನಧ್ವನಿ ವೆಂಕಟೇಶ್‌ ಮತ್ತು ಇನ್ನೂ ಕ್ಷೇತ್ರದವರಿಗೆ ಮೂಲದ ಬಗ್ಗೆ ಮಾಹಿತಿಯೇ ಇಲ್ಲದೆ ಕಳೆದ 1 ವರ್ಷದಿಂದ ಓಡಾಡುತ್ತಿರುವ ನಿಶಾಂತ್‌ ಅವರೂ ಸ್ಫರ್ಧೆ ಬಯಸಿದ್ದಾರೆ. ಇವರಿಗೆ ಬಿಜೆಪಿಯಿಂದ ಟಿಕೆಟ್‌ ಲಭಿಸುವ ಸಾಧ್ಯತೆಗಳಿಲ್ಲ. ಕೆಲ ಮೂಲಗಳ ಪ್ರಕಾರ ನಿಶಾಂತ್‌ ಸಚಿವ ಸೋಮಣ್ಣ ಅವರ ಕಟ್ಟಾ ಬೆಂಬಲಿಗರಾಗಿದ್ದು ಅವರನ್ನು ಕಣಕ್ಕಿಳಿಸಿದ್ದಲ್ಲಿ ಅವರನ್ನು ಬೆಂಬಲಿಸುತ್ತಾರೆ. ಇಲ್ಲವಾದಲ್ಲಿ ಪಕ್ಷೇತರರಾಗಿ ಕಣಕ್ಕಿಯಲಿದ್ದಾರೆ ಎನ್ನಲಾಗುತ್ತಿದ್ದು ಇವರು ಸ್ಫರ್ಧಿಸಿದಲ್ಲಿ ವೀರಶೈವ ಮತ ವಿಭಜನೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ಇನ್ನೋರ್ವ ಮುಖಂಡ ಜನಧ್ವನಿ ವೆಂಕಟೇಶ್‌ ಕಳೆದ 5 ವರ್ಷಗಳಿಂದ ಜನರಿಗೆ ಕೈಲಾದಷ್ಟು ನೆರವು ನೀಡುತ್ತಿದ್ದಾರೆ. ಕೊರೊನಾ ವೇಳೆ ಆ್ಯಂಬುಲೆನ್ಸ್‌ ವ್ಯವಸ್ಥೆ, ಔಷಧಿಗಳ ವಿತರಣೆ ಮಾಡಿ, ಆಹಾರ ಕಿಟ್‌ ವಿತರಿಸಿ ನೆರವಾಗಿದ್ದರು. ಆದರೆ ಕಳೆದ 1 ವರ್ಷದಿಂದೀಚೆಗೆ ಇವರು ಕ್ಷೇತ್ರದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರಲಿಲ್ಲ. ಇವರ ಅನುಮತಿ ಇಲ್ಲದೆ ವೆಂಕಟೇಶ್‌ ಅವರನ್ನು ಭೇಟಿ ಮಾಡುವುದು, ಮಾತನಾಡುವುದೇ ಕಷ್ಟ ಎಂಬುದನ್ನು ಅರಿತು ಇವರ ಬಳಿಯಿದ್ದ ಕೆಲ ಸ್ಥಳೀಯ ಮುಖಂಡರು ಇವರಿಂದ ದೂರ ಉಳಿದಿದ್ದಾರೆ. ಇವರಿಗೆ ಟಿಕೆಟ್‌ ಲಭಿಸುವ ಮಾತು ದೂರ ಎನ್ನಲಾಗುತ್ತಿದೆ.

ಟಿಕೆಟ್‌ಗಾಗಿ ಹಲವು ನಾಯಕರ ಪೈಪೋಟಿ : ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಫರ್ಧೆಗಾಗಿ ಕಳೆದ 2018ರ ಚುನಾವಣೆ ಪರಾಜಿತ ಅಭ್ಯರ್ಥಿ ಮಾಜಿ ಸಚಿವ ದಿ.ನಾಗಪ್ಪ ಹಾಗೂ ಮಾಜಿ ಶಾಸಕಿ ಪರಿಮಳಾ ನಾಗಪ್ಪ ಅವರ ಪುತ್ರ ಡಾ.ಪ್ರೀತನ್‌ ನಾಗಪ್ಪ, ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ದತ್ತೇಶ್‌ ಕುಮಾರ್‌, ಬೆಂಗಳೂರು ಮೂಲದ ಉದ್ಯಮಿಗಳಾದ ಜನಧ್ವನಿ ವೆಂಕಟೇಶ್‌ ಮತ್ತು ನಿಶಾಂತ್‌ ಶಿವಮೂರ್ತಿ ಅವರ ನಡುವೆ ಪೈಪೋಟಿ ಏರ್ಪಟ್ಟಿದೆ. ಇನ್ನು ಹನೂರು ಕ್ಷೇತ್ರದಿಂದ ಸ್ಫರ್ಧೆಗಾಗಿ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ವಸತಿ ಸಚಿವ ಸೋಮಣ್ಣ ಕೂಡ ಕಸರತ್ತು ನಡೆಸುತ್ತಿದ್ದಾರೆ.

– ವಿನೋದ್‌ ಎನ್‌.ಗೌಡ

ಟಾಪ್ ನ್ಯೂಸ್

ತೆರೆಗೆ ಬಂತು ನೈಜ ಘಟನೆಯ ಸುತ್ತ ‘ಪಿಂಕಿ ಎಲ್ಲಿ’?

ತೆರೆಗೆ ಬಂತು ನೈಜ ಘಟನೆಯ ಸುತ್ತ ‘ಪಿಂಕಿ ಎಲ್ಲಿ’?

Kadaba: ಮನೆಯ ಮೇಲ್ಛಾವಣಿ ಕುಸಿತ; ಓರ್ವ ಕಾರ್ಮಿಕ ಮೃತ್ಯು

Kadaba: ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಮೃತ್ಯು

Kannada film yada yada hi relased

ತೆರೆಗೆ ಬಂತು ಥ್ರಿಲ್ಲರ್‌ ‘ಯದಾ ಯದಾ ಹೀ’

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು!

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

ತಂಬಾಕು ವಿರುದ್ಧ ಆದಿವಾಸಿ ಮಕ್ಕಳ ಜಾಗೃತಿ ಕೂಗು

ತಂಬಾಕು ವಿರುದ್ಧ ಆದಿವಾಸಿ ಮಕ್ಕಳ ಜಾಗೃತಿ ಕೂಗು

ಚಾಮರಾಜನಗರ ತಾಲೂಕಿನಲ್ಲಿ ಸಣ್ಣ ವಿಮಾನ ಪತನ; ತಪ್ಪಿದ ಅನಾಹುತ; ಪೈಲಟ್ ಗಳು ಪಾರು

ಚಾಮರಾಜನಗರ ತಾಲೂಕಿನಲ್ಲಿ ಸಣ್ಣ ವಿಮಾನ ಪತನ; ತಪ್ಪಿದ ಅನಾಹುತ; ಪೈಲಟ್ ಗಳು ಪಾರು

Lokayukta: ಆದಾಯಕ್ಕೂ ಮೀರಿ ಆಸ್ತಿ; ಶಿವಮೊಗ್ಗ, ಹನೂರು ಸೇರಿ ವಿವಿಧೆಡೆ ಲೋಕಾಯುಕ್ತ ದಾಳಿ

Lokayukta: ಆದಾಯಕ್ಕೂ ಮೀರಿ ಆಸ್ತಿ; ಶಿವಮೊಗ್ಗ, ಹನೂರು ಸೇರಿ ವಿವಿಧೆಡೆ ಲೋಕಾಯುಕ್ತ ದಾಳಿ

chChamarajanagar; ಜೋಡಿ ರಸ್ತೆ ದುರವಸ್ಥೆ; ದ್ವಿಚಕ್ರ ವಾಹನ ಸವಾರರ ಪರದಾಟ

Chamarajanagar; ಜೋಡಿ ರಸ್ತೆ ದುರವಸ್ಥೆ; ದ್ವಿಚಕ್ರ ವಾಹನ ಸವಾರರ ಪರದಾಟ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

Kannada movie radha searching ramana missing released

‘ರಾಧಾ ಸರ್ಚಿಂಗ್‌ ರಮಣ ಮಿಸ್ಸಿಂಗ್‌’: ರಮಣನಿಗಾಗಿ ರಾಧಾ ಹುಡುಕಾಟ ಶುರು

ತೆರೆಗೆ ಬಂತು ನೈಜ ಘಟನೆಯ ಸುತ್ತ ‘ಪಿಂಕಿ ಎಲ್ಲಿ’?

ತೆರೆಗೆ ಬಂತು ನೈಜ ಘಟನೆಯ ಸುತ್ತ ‘ಪಿಂಕಿ ಎಲ್ಲಿ’?

Kadaba: ಮನೆಯ ಮೇಲ್ಛಾವಣಿ ಕುಸಿತ; ಓರ್ವ ಕಾರ್ಮಿಕ ಮೃತ್ಯು

Kadaba: ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಮೃತ್ಯು

Kannada film yada yada hi relased

ತೆರೆಗೆ ಬಂತು ಥ್ರಿಲ್ಲರ್‌ ‘ಯದಾ ಯದಾ ಹೀ’

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ