ಹನೂರು ಕ್ಷೇತ್ರದಲ್ಲಿ ಕಗ್ಗಂಟಾದ ಬಿಜೆಪಿ ಅಭ್ಯರ್ಥಿಯ ಆಯ್ಕೆ


Team Udayavani, Mar 30, 2023, 12:43 PM IST

tdy-11

ಹನೂರು: ಮನೆಯೊಂದು 5 ಬಾಗಿಲಿನಂತೆ ಒಡೆದ ಮನೆಯಂತಾಗಿರುವ ಬಿಜೆಪಿಯಿಂದ ಹನೂರು ಕ್ಷೇತ್ರದ ಅಭ್ಯರ್ಥಿಯಾಗಿ ಯಾರ ಹೆಸರು ಅಂತಿಮವಾಗಲಿದೆ. ಟಿಕೆ‌ಟ್‌ ವಂಚಿತರು ಯಾವ ಪಕ್ಷದಿಂದ ಸ್ಫರ್ಧಿಸಲಿದ್ದಾರೆ ಎಂಬುದು ಕ್ಷೇತ್ರಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ಅತ್ಯಲ್ಪ ಮತದಿಂದ ಸೋತಿದ್ದ ಪ್ರೀತನ್‌: ಕಳೆದ 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಸಚಿವ ಸೋ ಮಣ್ಣ ಹಾಗೂ ಇನ್ನಿತರ ಆಕಾಂಕ್ಷಿಗಳಿಗೆ ಸೆಡ್ಡುಹೊಡೆದು ಅಂತಿಮ ಕ್ಷಣದಲ್ಲಿ ಟಿಕೆಟ್‌ ಪಡೆದು ಸ್ಫರ್ಧೆಗೆ ಇಳಿದಿದ್ದ ಪ್ರೀತನ್‌ ನಾಗಪ್ಪ ಕೇವಲ 3500 ಮತಗಳ ಅಂತರದಿಂದ ಪರಾಭವಗೊಂಡರು. ಇನ್ನು ಜೆಡಿಎಸ್‌ ಅಭ್ಯರ್ಥಿಯಾಗಿದ್ದ ಮಂಜುನಾಥ 44 ಸಾವಿರ ಮತ ಪಡೆದಿದ್ದರಿಂದ ಮತಗಳ ವಿಭಜನೆಯ ಸಂಪೂರ್ಣ ಲಾಭ ನರೇಂದ್ರ ಅವರಿಗೆ ದೊರೆತಿತ್ತು.

ಪ್ರೀತನ್‌ ಸೋಲಿಗೆ ಸೋಮಣ್ಣ ಕಾರಣ?: 2018ರ ಚುನಾವಣೆಯಲ್ಲಿ ಕ್ಷೇತ್ರದಿಂದ ಸ್ಫರ್ಧೆ ಬಯಸಿದ್ದ ಸಚಿವ ಸೋಮಣ್ಣರಿಗೆ ನಾಗಪ್ಪ ಕುಟುಂಬ ಸ್ಥರು ಟಿಕೆಟ್‌ ಬಿಟ್ಟುಕೊಡಲಿಲ್ಲ ಎಂಬ ಕಾರಣಕ್ಕೆ ಅವರ ಹಿಂಬಾಲಕ ರಾಗಿದ್ದ ಎಂ.ಆರ್‌.ಮಂಜುನಾಥ್‌ರಿಗೆ ಜೆಡಿಎಸ್‌ ಟಿಕೆಟ್‌ ಕೊಡಿಸಿ ಸ್ಫರ್ಧೆಗಿಳಿಸಿ ಮತ ವಿಭಜನೆ ಮಾಡಿಸಿ ನಾಗಪ್ಪ ಪುತ್ರ ಡಾ.ಪ್ರೀತನ್‌ ನಾಗಪ್ಪರನ್ನು ಸೋಲಿಸಿದರು ಎಂಬುದು ಜಗಜ್ಜಾಹೀರಾಗಿದೆ. ಈ ಹಿನ್ನೆಲೆ ಕ್ಷೇತ್ರದಲ್ಲಿನ 50 ಸಾವಿರಕ್ಕೂ ಹೆಚ್ಚು ವೀರಶೈವ ಮತದಾರರು ಸೋ ಮಣ್ಣರ ವಿರುದ್ಧವಿದ್ದಾರೆ ಎಂದು ತಿಳಿದು ಬಂದಿದೆ.

ಅಲ್ಲದೆ, ಕಳೆದ ಒಂದೂವರೆ ವರ್ಷದಿಂದ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲೆಗಾಗಲಿ, ಹನೂರು ಕ್ಷೇತ್ರಕ್ಕಾಗಲಿ ಯಾವುದೇ ಕೊಡುಗೆ ನೀಡಿಲ್ಲ. ಅವರು ಕ್ಷೇತ್ರಕ್ಕೆ ಕಾಲಿಟ್ಟಾಗಲೆಲ್ಲ ಶಾಸಕ ನರೇಂದ್ರ ಅವರನ್ನು ಹೊಗಳುತ್ತಿದ್ದರಿಂದ ಅವರ ನಡೆಯ ವಿರುದ್ಧ ಬಿಜೆಪಿ ಮಂಡಲದ ಅಧ್ಯಕ್ಷರು, ವಿವಿಧ ಮೋರ್ಚಾಗಳ ಪದಾಧಿ ಕಾರಿಗಳು ಸೇರಿ ಬಹತೇಕ ವೀರಶೈವ ಮುಖಂ ಡರು ಅವರ ವಿರುದ್ಧ ಕಿಡಿಕಾರುತ್ತಿದ್ದಾರೆ. ಈ ನಿಟ್ಟಿನಲ್ಲಿ ಹನೂ ರು ಕ್ಷೇತ್ರದಿಂದ ಸೋಮಣ್ಣ ಸ್ಫರ್ಧೆ ಮಾಡಿದ್ದಲ್ಲಿ ಗೆಲುವು ಕಷ್ಟವಾಗಲಿದೆ ಎಂಬುದು ಜನತೆ ಅಭಿಪ್ರಾಯವಾಗಿದೆ.

ದತ್ತೇಶ್‌ ಕುಮಾರ್‌ಗೆ ಟಿಕೆಟ್‌ ಡೌಟ್‌: ಇನ್ನು ಮತ್ತೋರ್ವ ಆಕಾಂಕ್ಷಿ ದತ್ತೇಶ್‌ ಕುಮಾರ್‌ ಅವರು ಕೊಳ್ಳೇಗಾಲದಲ್ಲಿ ಮಾನಸ ಶಿಕ್ಷಣ ಸಂಸ್ಥೆ ಕಟ್ಟಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದ್ದಾರೆ. ಇದಲ್ಲದೆ ಹಲವಾರು ಜನಪರ ಕಾರ್ಯಕ್ರಮ ಮಾಡಿದ್ದಾರೆ. ಆದರೆ ಕ್ಷೇತ್ರದಲ್ಲಿ ಸಮುದಾಯದ ಬಲ ಕಡಿಮೆಯಿದ್ದು ಯಾವುದೇ ಸಾಂಪ್ರದಾಯಿಕ ಮತ ಬರುವುದಿಲ್ಲ. ಈ ಹಿನ್ನೆಲೆ ಇವರು ಸ್ಫರ್ಧಿಸಿದರೂ ಗೆಲುವು ಲಭಿಸುವುದಿಲ್ಲ ಎಂಬುದು ಬಿಜೆಪಿ ವರಿಷ್ಠರಿಗೆ ತಿಳಿದಿದ್ದು ಇವರಿಗೆ ಬಿ-ಫಾರಂ ನೀಡುವ ಯಾವುದೇ ಸಾಧ್ಯತೆಗಳಿಲ್ಲ.

ವಲಸಿಗರಿಗೂ ಟಿಕೆಟ್‌ ಡೌಟ್‌: ಇನ್ನು ಹನೂರು ಕ್ಷೇತ್ರಕ್ಕೆ ವಲಸಿಗರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು ಈ ಪಟ್ಟಿಯಲ್ಲಿ ಇದೇ ಕ್ಷೇತ್ರ ಮೂಲದವರು ಎಂದು ಘೋಷಿಸಿಕೊಂಡು ಬೆಂಗಳೂರಿನಿಂದ ಬಂದಿರುವ ಜನಧ್ವನಿ ವೆಂಕಟೇಶ್‌ ಮತ್ತು ಇನ್ನೂ ಕ್ಷೇತ್ರದವರಿಗೆ ಮೂಲದ ಬಗ್ಗೆ ಮಾಹಿತಿಯೇ ಇಲ್ಲದೆ ಕಳೆದ 1 ವರ್ಷದಿಂದ ಓಡಾಡುತ್ತಿರುವ ನಿಶಾಂತ್‌ ಅವರೂ ಸ್ಫರ್ಧೆ ಬಯಸಿದ್ದಾರೆ. ಇವರಿಗೆ ಬಿಜೆಪಿಯಿಂದ ಟಿಕೆಟ್‌ ಲಭಿಸುವ ಸಾಧ್ಯತೆಗಳಿಲ್ಲ. ಕೆಲ ಮೂಲಗಳ ಪ್ರಕಾರ ನಿಶಾಂತ್‌ ಸಚಿವ ಸೋಮಣ್ಣ ಅವರ ಕಟ್ಟಾ ಬೆಂಬಲಿಗರಾಗಿದ್ದು ಅವರನ್ನು ಕಣಕ್ಕಿಳಿಸಿದ್ದಲ್ಲಿ ಅವರನ್ನು ಬೆಂಬಲಿಸುತ್ತಾರೆ. ಇಲ್ಲವಾದಲ್ಲಿ ಪಕ್ಷೇತರರಾಗಿ ಕಣಕ್ಕಿಯಲಿದ್ದಾರೆ ಎನ್ನಲಾಗುತ್ತಿದ್ದು ಇವರು ಸ್ಫರ್ಧಿಸಿದಲ್ಲಿ ವೀರಶೈವ ಮತ ವಿಭಜನೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ಇನ್ನೋರ್ವ ಮುಖಂಡ ಜನಧ್ವನಿ ವೆಂಕಟೇಶ್‌ ಕಳೆದ 5 ವರ್ಷಗಳಿಂದ ಜನರಿಗೆ ಕೈಲಾದಷ್ಟು ನೆರವು ನೀಡುತ್ತಿದ್ದಾರೆ. ಕೊರೊನಾ ವೇಳೆ ಆ್ಯಂಬುಲೆನ್ಸ್‌ ವ್ಯವಸ್ಥೆ, ಔಷಧಿಗಳ ವಿತರಣೆ ಮಾಡಿ, ಆಹಾರ ಕಿಟ್‌ ವಿತರಿಸಿ ನೆರವಾಗಿದ್ದರು. ಆದರೆ ಕಳೆದ 1 ವರ್ಷದಿಂದೀಚೆಗೆ ಇವರು ಕ್ಷೇತ್ರದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರಲಿಲ್ಲ. ಇವರ ಅನುಮತಿ ಇಲ್ಲದೆ ವೆಂಕಟೇಶ್‌ ಅವರನ್ನು ಭೇಟಿ ಮಾಡುವುದು, ಮಾತನಾಡುವುದೇ ಕಷ್ಟ ಎಂಬುದನ್ನು ಅರಿತು ಇವರ ಬಳಿಯಿದ್ದ ಕೆಲ ಸ್ಥಳೀಯ ಮುಖಂಡರು ಇವರಿಂದ ದೂರ ಉಳಿದಿದ್ದಾರೆ. ಇವರಿಗೆ ಟಿಕೆಟ್‌ ಲಭಿಸುವ ಮಾತು ದೂರ ಎನ್ನಲಾಗುತ್ತಿದೆ.

ಟಿಕೆಟ್‌ಗಾಗಿ ಹಲವು ನಾಯಕರ ಪೈಪೋಟಿ : ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಫರ್ಧೆಗಾಗಿ ಕಳೆದ 2018ರ ಚುನಾವಣೆ ಪರಾಜಿತ ಅಭ್ಯರ್ಥಿ ಮಾಜಿ ಸಚಿವ ದಿ.ನಾಗಪ್ಪ ಹಾಗೂ ಮಾಜಿ ಶಾಸಕಿ ಪರಿಮಳಾ ನಾಗಪ್ಪ ಅವರ ಪುತ್ರ ಡಾ.ಪ್ರೀತನ್‌ ನಾಗಪ್ಪ, ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ದತ್ತೇಶ್‌ ಕುಮಾರ್‌, ಬೆಂಗಳೂರು ಮೂಲದ ಉದ್ಯಮಿಗಳಾದ ಜನಧ್ವನಿ ವೆಂಕಟೇಶ್‌ ಮತ್ತು ನಿಶಾಂತ್‌ ಶಿವಮೂರ್ತಿ ಅವರ ನಡುವೆ ಪೈಪೋಟಿ ಏರ್ಪಟ್ಟಿದೆ. ಇನ್ನು ಹನೂರು ಕ್ಷೇತ್ರದಿಂದ ಸ್ಫರ್ಧೆಗಾಗಿ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ವಸತಿ ಸಚಿವ ಸೋಮಣ್ಣ ಕೂಡ ಕಸರತ್ತು ನಡೆಸುತ್ತಿದ್ದಾರೆ.

– ವಿನೋದ್‌ ಎನ್‌.ಗೌಡ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.