ಕೋವಿಡ್ಗೆ ಪತಿ-ಪತ್ನಿ ಬಲಿ: ಅನಾಥವಾಯ್ತು ಐದು ವರ್ಷದ ಹೆಣ್ಣುಮಗು
Team Udayavani, May 10, 2021, 1:28 PM IST
ಚಾಮರಾಜನಗರ: ಕೋವಿಡ್ ಸೋಂಕಿಗೆ ಪತಿ- ಪತ್ನಿ ಇಬ್ಬರೂ ಮೃತಪಟ್ಟಿರುವ ಘಟನೆ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ನಡೆದಿದ್ದು, ಅವರ 5 ವರ್ಷದ ಮಗು ಅನಾಥವಾಗಿದೆ.
ಗ್ರಾಮದಲ್ಲಿ ಗೂಡ್ಸ್ ಆಟೋ ಚಾಲಕರಾಗಿದ್ದ ಗುರುಪ್ರಸಾದ್ (35 ವ) ಹಾಗೂ ಅವರ ಪತ್ನಿ ರಶ್ಮಿ (30 ವ) ಮೃತಪಟ್ಟವರು. ಗುರುಪ್ರಸಾದ್ಗೆ 10 ದಿನಗಳ ಹಿಂದೆ ಸೋಂಕು ತಗುಲಿತ್ತು. ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ನಾಲ್ಕೂ ದಿನಗಳ ಹಿಂದೆ ಮೃತಪಟ್ಟವರು. ಅವರ ಪತ್ನಿ ರಶ್ಮಿಗೂ ಸೋಂಕು ತಗುಲಿ ಹೋಂ ಐಸೋಲೇಷನ್ ಆಗಿದ್ದರು. ಭಾನುವಾರ ಉಸಿರಾಟದ ಸಮಸ್ಯೆಯಾಗಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಪುತ್ತೂರು: ಅವಳಿ ಮಕ್ಕಳಿಗೆ ಜನ್ಮ ನೀಡಿ ತಾಯಿ ತೀವ್ರ ರಕ್ತಸ್ರಾವದಿಂದ ಸಾವು
ಇಬ್ಬರಿಗೂ ಕೋವಿಡ್ ಆಗಿದ್ದರಿಂದ ಮಗುವನ್ನು ರಶ್ಮಿ ತಂಗಿಯ ಮನೆಯಲ್ಲಿ ಇರಿಸಿದ್ದರು. ರಶ್ಮಿಯ ತವರು ಮನೆ ಕಾಗೆ ಮರಳ್ಳಿ ಗ್ರಾಮ. ರಶ್ಮಿ ಹೋಂ ಐಸೋಲೇಷನ್ನಲ್ಲಿದ್ದರಿಂದ ಅವರ ತಂದೆ ತಾಯಿ ಕೊತ್ತಲವಾಡಿಯ ಮಗಳ ಮನೆಗೆ ಬಂದು ಆರೈಕೆ ಮಾಡುತ್ತಿದ್ದರು. ಈಗ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದ್ದು, ಹೋಂ ಐಸೋಲೇಷನ್ ಆಗಿದ್ದಾರೆ.
ದಂಪತಿಗೆ ಮದುವೆಯಾಗಿ 8 ವರ್ಷವಾಗಿತ್ತು. 5 ವರ್ಷದ ಮಗಳು ಸುಧಾಮಣಿ ಈಗ ಚಿಕ್ಕಮ್ಮನ ಮನೆಯಲ್ಲಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ