ಆದರ್ಶ ಗ್ರಾಮ ಯೋಜನೆ ಹಣ ಬಳಕೆಗೆ ಗ್ರಾಮಸ್ಥರ ಒತ್ತಾಯ


Team Udayavani, Jul 6, 2019, 3:00 AM IST

adarsha

ಸಂತೆಮರಹಳ್ಳಿ: ಯಳಂದೂರು ತಾಲೂಕಿನ ಹೊನ್ನೂರು ಗ್ರಾಮವು ಪ್ರಧಾನ ಮಂತ್ರಿ ಆದರ್ಶ ಗ್ರಾಮಕ್ಕೆ ಆಯ್ಕೆಯಾಗಿದೆ. ಆದರೆ, ಇದಾಗಿ ವರ್ಷಗಳೇ ಉರುಳಿದರೂ ಕಾಮಗಾರಿ ಕುಂಟುತ್ತಾ ಸಾಗುತ್ತಿದೆ. ಈ ಹಣ ಎಲ್ಲಿದೆ ಎಷ್ಟು ಹಣ ಬಿಡುಗಡೆಯಾಗಿದೆ ಎಂಬುದರ ಬಗ್ಗೆ ನಿಖರ ಮಾಹಿತಿ ಇಲ್ಲ. ಹಾಗಾಗಿ ಇದರ ಬಳಕೆಗೆ ಶಾಸಕರು ಸಂಬಂಧಪಟ್ಟವರಿಗೆ ಸೂಚನೆ ನೀಡಬೇಕು ಎಂದು ಹೊನ್ನೂರು ಗ್ರಾಮಸ್ಥರು ಒತ್ತಾಯಿಸಿದರು.

ಹೊನ್ನೂರು ಗ್ರಾಪಂ ಆವರಣದಲ್ಲಿ ಶುಕ್ರವಾರ ಶಾಸಕ ಎನ್‌. ಮಹೇಶ್‌ ನೇತೃತ್ವದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಗ್ರಾಮಸ್ಥರು ಒತ್ತಾಯಸಿದರು. ಇದಕ್ಕೆ ಶಾಸಕರು, ಸಂಬಂಧಪಟ್ಟ ಇಲಾಖೆಯಿಂದ ಮಾಹಿತಿ ಕೇಳಿದರು.

ಯೋಜನೆಗೆ 44 ಲಕ್ಷ ರೂ. ನಿಗದಿ: ಇಒ ಬಿ.ಎಸ್‌. ರಾಜು ಮಾತನಾಡಿ, ಈ ಯೋಜನೆಯಲ್ಲಿ ಒಟ್ಟು 44 ಲಕ್ಷ ರೂ.ಗಳನ್ನು ನಿಗದಿಗೊಳಿಸಲಾಗಿದೆ. ಇದರಲ್ಲಿ 20 ಲಕ್ಷ ರೂ. ರಸ್ತೆ, ಚರಂಡಿ ಅಭಿವೃದ್ಧಿಗೆ, 4 ಲಕ್ಷ ರೂ. ಕುಡಿಯುವ ನೀರಿಗೆ, 10.20 ಲಕ್ಷ ರೂ. ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಇನ್ನುಳಿದ ಹಣವನ್ನು ಸೋಲಾರ್‌ ವಿದ್ಯುತ್‌, ವಿದ್ಯುತ್‌ ಕಂಬ,

ದೀಪಗಳ ದುರಸ್ತಿ ಹಾಗೂ 20 ಫ‌ಲಾನುಭವಿಗಳಿಗೆ ಹೊಲಿಗೆ ಯಂತ್ರ ನೀಡಲು ಬಳಸಲಾಗುವುದು. ರಸ್ತೆ, ಚರಂಡಿ ಹೊರತುಪಡಿಸಿ ಇತರೆ ಹಣ ಇನ್ನೂ ಬಾರದ ಕಾರಣ ಕಾಮಗಾರಿ ವಿಳಂಬವಾಗಿದ್ದು, ಆದಷ್ಟು ಬೇಗ ಇದನ್ನು ಪೂರ್ಣಗೊಳಿಸುವ ಭರವಸೆ ನೀಡಿದರು.

ಮಳೆ ನೀರಿನ ಕಾಲುವೆ ದುರಸ್ತಿಪಡಿಸಿ: ಗ್ರಾಮದಲ್ಲಿ ಮಳೆ ನೀರಿನ ಕಾಲುವೆಗಳು ಮುಚ್ಚಿ ಹೋಗಿವೆ. ಇದರಿಂದ ಇಲ್ಲಿನ ಕೆರೆಗಳಿಗೆ ನೀರು ತುಂಬುತ್ತಿತ್ತು. ಆದರೆ, ಇದೆಲ್ಲವನ್ನೂ ಕಬಿನಿ ಕಾಲುವೆಗೆ ಸಂಪರ್ಕ ಕೊಟ್ಟಿರುವುದರಿಂದ ಮಳೆಗಾಲದಲ್ಲಿ ನೀರು ಹರಿದು ಕಾವೇರಿ ನದಿಯಿಂದ ತಮಿಳುನಾಡಿಗೆ ಸೇರುತ್ತಿದೆ.

ಈ ಬಗ್ಗೆ ಇಲಾಖೆಯ ಅಧಿಕಾರಿಗಳು ಇದರ ದುರಸ್ತಿಗೆ ಕ್ರಮ ವಹಿಸಬೇಕು ಎಂದು ರೈತಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್‌ ದೂರಿದರು. ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಗೆ ತಕ್ಷಣ ಇದಕ್ಕೆ ಕ್ರಮ ವಹಿಸಿ, ಮಳೆ ನೀರು ಪೋಲಾಗದೆ ಕೆರೆಯಲ್ಲೇ ನಿಲ್ಲುವಂತೆ ಮಾಡಬೇಕು ಎಂದು ಶಾಸಕರು ಸೂಚನೆ ನೀಡಿದರು.

ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿ: ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಕೆಲಸಗಳನ್ನು ಮಾಡದಿದ್ದಲ್ಲಿ, ಸೌಲಭ್ಯ ಒದಗಿಸಲು ನಿರಾಕರಿಸಿದ್ದಲ್ಲಿ ಅವರ ವಿರುದ್ಧವೂ ದೂರು ಸಲ್ಲಿಸಲು ಅವಕಾಶವಿದೆ. ಸಾರ್ವಜನಿಕರಿಗೆ ಇಂತಹ ಸಭೆಗಳಲ್ಲಿ ಅರಿವು ಮೂಡಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಹೊನ್ನೂರು ಮಹಾದೇವಸ್ವಾಮಿ ಸಲಹೆ ನೀಡಿದರು.

ಇಂತಹ ಸಭೆಗಳಲ್ಲಿ ಪ್ರತಿ ಇಲಾಖೆ ಅಧಿಕಾರಿಗಳ ಹಾಜರಾತಿ, ಜನಪ್ರತಿನಿಧಿಗಳ ಹಾಜರಾತಿ ಪಡೆದುಕೊಳ್ಳಬೇಕು. ಆ ಮೂಲಕ ಸಾರ್ವಜನಿಕ ಕೆಲಸಗಳನ್ನು ಮಾಡಬೇಕು ಎಂದು ಸೂಚನೆ ನೀಡಿದರು. ಇದಕ್ಕೆ ಸ್ಪಂಧಿಸಿದ ಶಾಸಕರು ಈ ಬಗ್ಗೆ ಕ್ರಮ ವಹಿಸುವುದಾಗಿ ತಿಳಿಸಿದರು.

ತಾಪಂ ಅಧ್ಯಕ್ಷ ನಿರಂಜನ್‌, ಗ್ರಾಪಂ ಅಧ್ಯಕ್ಷ ರಾಜೇಂದ್ರ, ಉಪಾಧ್ಯಕ್ಷೆ ಯಶೋಧ, ಸದಸ್ಯರಾದ ಆರ್‌. ಪುಟ್ಟಬಸವಯ್ಯ, ಗೀತಾ, ಶಿಲ್ಪಾ, ರಾಘವೇಂದ್ರ ಪ್ರಸಾದ್‌, ಮಹಾದೇವಸ್ವಾಮಿ, ಸಿದ್ದಶೆಟ್ಟಿ, ಶೋಭಾ, ಸರೋಜಮ್ಮ, ಗಾಯತ್ರಿ, ತಹಶೀಲ್ದಾರ್‌ ವರ್ಷಾ, ಇಒ ಬಿ.ಎಸ್‌. ರಾಜು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.