ಪಟ್ಟಣ ಪಂಚಾಯಿತಿ ಸದಸ್ಯರಿಂದಲೇ ಅಕ್ರಮ ಮದ್ಯ ಸಾಗಾಣಿಕೆ: ಮೂವರ ವಿರುದ್ಧ ಪ್ರಕರಣ ದಾಖಲು


Team Udayavani, Jul 28, 2020, 2:42 PM IST

ಪ್ರಕರಣದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಿಂದಲೇ ಅಕ್ರಮ ಮದ್ಯ ಸಾಗಾಣಿಕೆ

ಹನೂರು(ಚಾಮರಾಜನಗರ): ಅಕ್ರಮ ಮದ್ಯ ಸಾಗಾಣಿಕೆ ಪ್ರಕರಣದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ಸೇರಿದಂತೆ 3 ಜನರ ಮೇಲೆ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏನಿದು ಪ್ರಕರಣ?: ಹನೂರು ಪಟ್ಟಣ ಪಂಚಾಯಿತಿಯ 10ನೇ ವಾರ್ಡಿನ ಸದಸ್ಯ ಸೋಮಣ್ಣ ಎಂಬುವವರಿಗೆ ಸೇರಿದ ಪಟ್ಟಣದ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್‌ನಿಂದ ಸೋಮವಾರ ತಡರಾತ್ರಿ ಅಕ್ರಮವಾಗಿ ಮದ್ಯ ಸಾಗಾಣಿಕೆ ಮಾಡಲಾಗುತಿತ್ತು ಎನ್ನಲಾಗಿದೆ. ಚಾಮರಾಜನರ ಜಿಲ್ಲಾ ಡಿಸಿಐಬಿ ವಿಭಾಗದ ಪೊಲೀಸರು ಗಸ್ತಿನಲ್ಲಿದ್ದ ವೇಳೆ ಉದ್ದನೂರು – ಬೆಳತ್ತೂರು ರಸ್ತೆಯಲ್ಲಿ ಗಿರೀಶ್‌ರವರ ಜಮೀನಿನ ಸಮೀಪ ನೋಂದಣಿಯಿಲ್ಲದ ಟಿವಿಎಸ್ ಮೊಪೆಡ್ ಒಂದರಲ್ಲಿ ವ್ಯಕ್ತಿಯೋರ್ವ ಬಣ್ಣದ ಚೀಲಗಳಲ್ಲಿ ಏನನ್ನೋ ತುಂಬಿಕೊಂಡು ತೆರಳುತ್ತಿದ್ದನು ಎನ್ನಲಾಗಿದೆ.

ಈ ವೇಳೆ ಅನುಮಾನಗೊಂಡ ಡಿಸಿಐಬಿ ಪೊಲೀಸರು ವಾಹನ ಮತ್ತು ಚಾಲಕನನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ 90ಮಿ.ಲೀನ 864 ಪೌಚುಗಳನ್ನು 9 ಬಾಕ್ಸ್ ಗ ಳಲ್ಲಿ ಯಾವುದೇ ರಹದಾರಿ ಪರವಾನಗಿ ಇಲ್ಲದೆ ಸಾಗಿಸುತ್ತಿದ್ದುದು ಕಂಡು ಬಂದಿದೆ. ಈ ವೇಳೆ ಟಿವಿಎಸ್ ಮೊಪೆಡ್ ಚಾಲನೆ ಮಾಡುತ್ತಿದ್ದ ವ್ಯಕ್ತಿಯನ್ನು ವಿಚಾರಿಸಿದಾಗ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್‌ನ ಮಾಲೀಕ ಸೋಮಣ್ಣ ಮತ್ತು ಕ್ಯಾಷಿಯರ್ ಪುಟ್ಟಸ್ವಾಮಿಯ ಸೂಚನೆಯ ಮೇರೆಗೆ ಚೆನ್ನಾಲಿಂಗನಹಳ್ಳಿ, ಚಿಕ್ಕಮಾಲಾಪುರ ಸೇರಿದಂತೆ ಇತರೆ ಗ್ರಾಮಗಳಿಗೆ ಹೆಚ್ಚನ ಬೆಲೆಗೆ ಮಾರಾಟ ಮಾಡಲು ಕೊಂಡೊಯ್ಯುತ್ತಿರುವುದಾಗಿ ಮಾಹಿತಿ ನೀಡಿದ್ದಾನೆ.

ಕೂಡಲೇ ಡಿಸಿಐಬಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಸುಮಾರು 30,352 ರೂ. ಮೌಲ್ಯದ ಮದ್ಯವನ್ನು ಜಪ್ತಿ ಮಾಡಿ ಹನೂರು ಪೊಲೀಸ್ ಠಾಣೆಗೆ ಕರೆತಂದು ಯಾವುದೇ ಪರವಾನಗಿ ಇಲ್ಲದೆ ಸಾಗಾಣಿಕೆ ಮಾಡುತ್ತಿದ್ದ ಆರೋಪಿ ಮಾದಪ್ಪ, ಬಾರ್‌ನ ಮಾಲೀಕ ಸೋಮಣ್ಣ ಮತ್ತು ಕ್ಯಾಷಿಯರ್ ಪುಟ್ಟಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳುವಂತೆ ವರದಿ ನೀಡಿ ಆರೋಪಿ ಮಾದಪ್ಪ ಮತ್ತು ಮದ್ಯವನ್ನು ಹನೂರು ಪೊಲೀಸರ ವಶಕ್ಕೆ ನೀಡಿದ್ದಾರೆ.

ಈ ದಾಳಿಯಲ್ಲಿ ಡಿಸಿಐಬಿ ವಿಭಾಗದ ಇನ್ಸ್ಪೆಕ್ಟರ್ ಮಹದೇವಶೆಟ್ಟಿ, ಎಎಸ್‌ಐ ಜಯಶೇಖರ್, ಪೇದೆ ಕುಮಾರ ಮತ್ತು ಜೀಪ್‌ ಚಾಲಕ ಮಹೇಶ್ ಭಾಗವಹಿಸಿದ್ದರು.

ಸಾರ್ವಜನಿಕರಿಂದ ವ್ಯಾಪಕ ಟೀಕೆ: ಜನಪರ ಕೆಲಸ ಕಾರ‍್ಯಗಳನ್ನು ಕೈಗೊಂಡು ಪಟ್ಟಣದ ಅಭಿವೃದ್ಧಿಗಾಗಿ ಶ್ರಮಿಸುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದ ಜನಪ್ರತಿನಿಧಿಗಳು ಹನೂರು ಪಟ್ಟಣ ಸುತ್ತಮುತ್ತಲ ಗ್ರಾಮಗಳಿಗೆ ಅಕ್ರಮವಾಗಿ ಮದ್ಯಸಾಗಾಟ ಮಾಡುತ್ತಿದ್ದು ಸಾರ್ವಜನಿಕರನ್ನು ಮದ್ಯದ ದಾಸರನ್ನಾಗಿಸುತ್ತಿದ್ದಾರೆ. ಹನೂರು ಪಟ್ಟಣದ ಕೆಲ ಬಾರ್ ಮಾಲೀಕರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದವರೆಗೂ ಯಾವುದೇ ಕಾನೂನಿನ ಅಳುಕಿಲ್ಲದೆ ನಿರ್ಭಯವಾಗಿ ಅಕ್ರಮ ಮದ್ಯ ಸಾಗಾಟದಲ್ಲಿ ತೊಡಗಿದ್ದಾರೆ. ಈ ಪ್ರಕರಣದಲ್ಲಿ ಡಿಸಿಐಬಿ ಪೊಲೀಸರ ಕಾರ್ಯವೈಖರಿಯನ್ನು ಮುಕ್ತ ಕಂಠದಿಂದ ಶ್ಲಾಘಿಸಿರುವ ಸಾರ್ವಜನಿಕರು ಮುಂದಿನ ದಿನಗಳಲ್ಲಿ ಈ ದಂಧೆಗೆ ಕಡಿವಾಣ ಹಾಕುವಲ್ಲಿ ಮತ್ತಷ್ಟು ಕಾರ್ಯಪ್ರವೃತ್ತರಾಗಬೇಕು ಎಂಬ ಹಂಬಲ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.