ರಾಜ್ಯದಲ್ಲಿ ಸಿಕ್ಕಿಂ ಮಾದರಿ ಸಾವಯವ ಬೇಸಾಯ ಅಳವಡಿಸಿ


Team Udayavani, Feb 19, 2020, 3:00 AM IST

rajyadalli

ಚಾಮರಾಜನಗರ: ಸಿಕ್ಕಿಂ ರಾಜ್ಯದ ಮಾದರಿಯಲ್ಲಿ ಕರ್ನಾಟಕ ರಾಜ್ಯದಲ್ಲೂ ಸಾವಯವ ಬೇಸಾಯವನ್ನು ಅಳವಡಿಸಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳದ ಉಪಾಧ್ಯಕ್ಷ ಕೋಡಿಮೋಳೆ ರಾಜಶೇಖರ್‌ ಒತ್ತಾಯಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾವಯವ ಬೇಸಾಯದಿಂದ ಉತ್ತಮ ಆಹಾರ ಪದಾರ್ಥಗಳು, ಹೆಚ್ಚಿನ ಲಾಭ ದೊರೆಯುತ್ತದೆ. ಆದರಿಂದ ರಾಜ್ಯದ ಯಾವುದಾದರೊಂದು ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಸಾವಯವ ಬೇಸಾಯ ಮಾಡಿ ಅದು ಯಶ್ವಸಿಯಾದರೆ ರಾಜ್ಯಾದ್ಯಂತ ವಿಸ್ತರಿಸುವಂತೆ ಮುಖ್ಯಮಂತ್ರಿಗಳಲ್ಲಿ ರಾಜಶೇಖರ್‌ ಆಗ್ರಹಿಸಿದರು.

ರಾಸಾಯನಿಕ ಗೊಬ್ಬರ ಬಳಸಲ್ಲ: ತೋಟಗಾರಿಕೆ ಇಲಾಖೆ ವತಿಯಿಂದ ಸಿಕ್ಕಿಂ ರಾಜ್ಯಕ್ಕೆ ಪ್ರವಾಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಸಿಕ್ಕಿಂ ರಾಜ್ಯವು ಸಂಪೂರ್ಣವಾಗಿ ಸಾವಯವ ಬೇಸಾಯವನ್ನು ಅಳವಡಿಸಿಕೊಂಡಿರುವುದನ್ನು ಗಮನಿಸಿದೆವು. ರಾಸಾಯನಿಕ ಗೊಬ್ಬರ, ಕೀಟನಾಶಕ, ಕಳೆ ನಾಶಕವನ್ನು ಅವರು ಬಳಸುವುದೇ ಇಲ್ಲ.

ಒಂದು ವೇಳೆ ರಾಸಾಯನಿಕ ಗೊಬ್ಬರ ಬಳಸಿರುವುದು ಕಂಡು ಬಂದರೆ ಒಂದು ಲಕ್ಷ ರೂ. ದಂಡ ಮತ್ತು 3 ವರ್ಷ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಸಿಕ್ಕಿಂ ರಾಜ್ಯದ ಜನರು ಆರೋಗ್ಯವಂತರಾಗಿದ್ದು, ಅಲ್ಲಿನ ಜನರ ವಯೋಮಾನ ಎಲ್ಲ ರಾಜ್ಯದ ಜನರಿಗಿಂತ 10 ವರ್ಷ ಹೆಚ್ಚಾಗಿರುತ್ತದೆ ಎಂದು ತಿಳಿದು ಬಂದಿದೆ ಎಂದರು.

ರಾಸಾಯನಿಕ ಬಳಕೆಯಿಂದ ಕೃಷಿ ವರಮಾನ ಕಡಿಮೆ: ಸಿಕ್ಕಿಂ ರಾಜ್ಯದ ಮಾದರಿಯಲ್ಲಿ ಕರ್ನಾಟಕದಲ್ಲೂ ಸರ್ಕಾರ ಸಂಪೂರ್ಣವಾಗಿ ಸಾವಯವ ಬೇಸಾಯ ಬೇಸಾಯ ಅಳವಡಿಸಿಕೊಳ್ಳಲು ಕ್ರಾಂತಿಕಾರಿ ತೀರ್ಮಾನ ತೆಗೆದುಕೊಳ್ಳಬೇಕು. ನಮ್ಮ ಜನರು ವಿಷಭರಿತ ಆಹಾರ ಸೇವಿಸಿ ನಿಧಾನವಾಗಿ ನಾಶವಾಗುತ್ತ ಇದ್ದಾರೆ. ನಮ್ಮ ಜಮೀನಿನಲ್ಲಿರುವ ಜೀವಂತ ಮಣ್ಣು ಸತ್ವ ಕಳೆದುಕೊಳ್ಳುತ್ತಿದೆ. ಕೃಷಿಯಲ್ಲಿ ರಾಸಾಯನಿಕಗಳ ಹೆಚ್ಚು ಬಳಕೆಯಿಂದ ವೆಚ್ಚ ಹೆಚ್ಚಾಗಿ ಕೃಷಿಯ ವರಮಾನ ಕಡಿಮೆಯಾಗುತ್ತಿದೆ ಎಂದರು.

ಕಲಬೆರಕೆ ನಿಯಂತ್ರಣಕ್ಕೆ ಕಾನೂನು ಜಾರಿ ಮಾಡಿ: ಒಂದು ಕಡೆ ವಾತಾವರಣದ ವೈಪರೀತ್ಯದಿಂದಾಗಿ ಮಳೆಯ ಕೊರತೆ ಮತ್ತು ನಾಶವಾಗುತ್ತಿರುವ ಮಣ್ಣು ಇವುಗಳಿಂದ ಕರ್ನಾಟಕ ಮರುಭೂಮಿಯಾಗುವತ್ತ ಸಾಗಿದೆ. ಕಲಬೆರಕೆ, ವಿಷಯುಕ್ತ ಆಹಾರ ಸೇವನೆಯಿಂದ ನಮ್ಮ ಜನರ ವೈದ್ಯಕೀಯ ವೆಚ್ಚ ಕೂಡ ದುಬಾರಿಯಾಗುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರ ಮೊದಲ ಹೆಜ್ಜೆಯಾಗಿ ರಾಜ್ಯದ ಒಂದು ಜಿಲ್ಲೆಯಲ್ಲಾದರೂ ಸಂಪೂರ್ಣವಾಗಿ ಸಾವಯವ ಕೃಷಿ ಮಾಡಬೇಕು.

ಅದರ ಸಾಧಕ-ಬಾಧಕ ಅಧ್ಯಯನ ಮಾಡಿ ಪರಿಶೀಲಿಸಿ, ಸೂಕ್ತ ಮಾರ್ಪಾಡುಗಳೊಂದಿಗೆ ರಾಜ್ಯಾದ್ಯಂತ ವಿಸ್ತರಣೆ ಮಾಡಬೇಕು. ಕಲಬೆರಕೆ ನಿಯಂತ್ರಣಕ್ಕೆ ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಹಾಪ್‌ಕಾಮ್ಸ್‌ ಮಾಜಿ ನಿರ್ದೇಶಕ ಪುರುಷೋತ್ತಮ್‌, ನಿವೃತ್ತ ಸಬ್‌ಇನ್ಸ್‌ಪೆಕ್ಟರ್‌ ಶಿವಣ್ಣ ಹಾಜರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.