ಸಣ್ಣ ಪಂಚಾಯಿತಿಯಲ್ಲಿ, ದೊಡ್ಡ ಚುನಾವಣಾ ಕಾವು


Team Udayavani, May 5, 2019, 3:00 AM IST

sanna-panch

ಸಂತೆಮರಹಳ್ಳಿ: ಯಳಂದೂರು ಪಟ್ಟಣ ಹಾಗೂ ತಾಲೂಕು ಇಡೀ ರಾಜ್ಯದಲ್ಲೇ ಅತ್ಯಂತ ಪುಟ್ಟದ್ದು. ಈ ಚಿಕ್ಕ ಪಟ್ಟಣ ಪಂಚಾಯಿತಿಗೆ ಚುನಾವಣಾ ದಿನಾಂಕ ನಿಗದಿಯಾಗಿದೆ. ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಚುನಾವಣೆಯ ಕಾವು ದೊಡ್ಡ ಮಟ್ಟದಲ್ಲಿ ಏರಿಕೆಯಾಗಿ, ರಾಜಕೀಯ ಲೆಕ್ಕಾಚಾರಗಳು ಶುರುವಾಗಿದೆ.

ಚುನಾವಣೆಯಲ್ಲಿ ಸ್ಪರ್ಧಿಸಲು ವಿವಿಧ ಪಕ್ಷಗಳಿಂದ ಆಕಾಂಕ್ಷಿಗಳ ಪಟ್ಟಿ, ಸಿದ್ಧತೆಗಳನ್ನು ಕೈಗೊಳ್ಳುವ ಕಾರ್ಯವು ಭರದಿಂದ ಸಾಗುತ್ತಿದೆ. ಈ ಬಾರಿಯ ಸ್ಥಳೀಯ ಸಂಸ್ಥೆಯ ಚುನಾವಣೆ ಬಹಳ ಮಹತ್ವದ್ದಾಗಿದೆ. ಪಟ್ಟಣದಲ್ಲಿ 11 ವಾರ್ಡ್‌ಗಳಿದ್ದು, 3,548 ಮಹಿಳಾ ಮತದಾರರು, 3,392 ಪುರುಷ ಮತದಾರರು ಸೇರಿದಂತೆ ಒಟ್ಟು 6,940 ಮತದಾರರು ಇದ್ದಾರೆ.

ಕೊಳ್ಳೇಗಾಲ ಮೀಸಲು ವಿಧಾನ ಸಭೆಗೆ ಒಳಪಟ್ಟಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌, ಬಿಜೆಪಿ, ಬಿಎಸ್‌ಪಿ ಹಾಗೂ ಜೆಡಿಎಸ್‌ ಸೇರಿದಂತೆ 4 ಪಕ್ಷಗಳಿಂದಲೂ ಟಿಕೆಟ್‌ ನೀಡುವಂತೆ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಬೆಳೆಯುತ್ತಿದೆ. ಟಿಕೆಟ್‌ ಹಂಚಿಕೆ ಪಕ್ಷಗಳ ವರಿಷ್ಠರಿಗೆ ತಲೆನೋವು ತಂದಿಡುವ ಸಂದರ್ಭಗಳೇ ಹೆಚ್ಚಾಗಿವೆ.

ಕಳೆದ ಬಾರಿಯ ಚುನಾವಣೆಯಲ್ಲಿ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್‌ – 5, ಬಿಜೆಪಿ – 4, ಜೆಡಿಎಸ್‌- 1, ಒಬ್ಬ ಪಕ್ಷೇತರ ಸದಸ್ಯರು ಆಯ್ಕೆಯಾಗಿದ್ದರು.

ಈ ಬಾರಿಯ ಮೀಸಲಾತಿ: ಈ ಬಾರಿಯ ಚುನಾವಣೆಯಲ್ಲಿ ಮೀಸಲಾತಿ ಪಟ್ಟಿ ಪ್ರಕಟವಾಗಿದೆ. 1ನೇ ವಾರ್ಡ್‌ ಸಾಮಾನ್ಯ, 2ನೇ ವಾರ್ಡ್‌ ಸಾಮಾನ್ಯ, 3ನೇ ವಾರ್ಡ್‌ ಪರಿಶಿಷ್ಟ ಪಂಗಡ, 4ನೆ ವಾರ್ಡ್‌ ಸಾಮಾನ್ಯ (ಮಹಿಳೆ), 5ನೇ ವಾರ್ಡ್‌ ಪರಿಶಿಷ್ಟ ಜಾತಿ, 6ನೇ ವಾರ್ಡ್‌ ಪರಿಶಿಷ್ಟ ಪಂಗಡ, 7 ನೇ ವಾರ್ಡ್‌ ಪರಿಶಿಷ್ಟ ಪಂಗಡ (ಮಹಿಳೆ),

8ನೇ ವಾರ್ಡ್‌ ಸಾಮಾನ್ಯ, 9 ನೇ ವಾರ್ಡ್‌ ಪರಿಶಿಷ್ಟ ಜಾತಿ (ಮಹಿಳೆ), 10 ನೇ ವಾರ್ಡ್‌ ಸಾಮಾನ್ಯ (ಮಹಿಳೆ), 11 ನೇ ವಾರ್ಡ್‌ ಸಾಮಾನ್ಯ (ಮಹಿಳೆ) ವರ್ಗಕ್ಕೆ ಮೀಸಲಾಗಿದೆ. ಹಾಗಾಗಿ ಸ್ಪರ್ಧಿಸುವ ಆಕಾಂಕ್ಷಿಗಳು ತಮ್ಮ ತಮ್ಮ ಪಕ್ಷದಿಂದ ಟಿಕೆಟ್‌ ಕೊಡಿಸುವಂತೆ ಪಕ್ಷದ ನಾಯಕರನ್ನು ಓಲೈಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಈ ಬಾರಿ ಬಿಎಸ್‌ಪಿ ಖಾತೆ ತೆರೆಯುವುದೇ?: ಕೊಳ್ಳೇಗಾಲ ಮೀಸಲು ವಿಧಾನ ಸಭೆಯಲ್ಲಿ ಈ ಬಾರಿ ಬಿಎಸ್‌ಪಿ ಪಕ್ಷದಿಂದ ಪ್ರಥಮ ಶಾಸಕರಾಗಿ ಎನ್‌.ಮಹೇಶ್‌ ಆಯ್ಕೆಯಾಗಿದ್ದಾರೆ. ಈ ಪಕ್ಷ ಪಟ್ಟಣ ಪಂಚಾಯಿತಿಯಲ್ಲಿ ಇದುವರೆಗೂ ಗೆದ್ದಿಲ್ಲ.

ಎನ್‌. ಮಹೇಶ್‌ ಅವರು ಈ ಬಾರಿಯ ಸ್ಥಳೀಯ ಚುನಾವಣೆಯಲ್ಲಿ ಬಿಎಸ್‌ಪಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಖಾತೆಯನ್ನು ತೆರೆಯುತ್ತಾರೋ ಇಲ್ಲವೋ, ಎಷ್ಟು ಸ್ಥಾನಗಳನ್ನು ಪಡೆದುಕೊಳ್ಳುತ್ತಾರೆ ಎನ್ನುವ ಕುತೂಹಲ ಮೂಡಿದೆ. ಜೊತೆಗೆ ಶಾಸಕರು ತಮ್ಮ ವರ್ಚಸ್ಸನ್ನು ಉಳಿಸಿಕೊಳ್ಳಬೇಕಾದರೆ ಪಕ್ಷದ ಕಾರ್ಯಕರ್ತರನ್ನು ಈ ಬಾರಿ ಹೇಗೆ ಗೆಲ್ಲಿಸಿಕೊಳ್ಳುತ್ತಾರೆ ಎಂಬುದರ ಮೇಲೆ ಅವಲಂಬಿತವಾಗಿದೆ.

ಕಾಂಗ್ರೆಸ್‌ಗೆ ಪ್ರತಿಷ್ಠೆಯ ಪ್ರಶ್ನೆ: ಕಾಂಗ್ರೆಸ್‌ನ ಭದ್ರಕೋಟೆಯಾಗಿರುವ ಪಟ್ಟಣ ಪಂಚಾಯಿತಿಯು ಕಳೆದ ಬಾರಿ ಅಧಿಕಾರವನ್ನು ಹಿಡಿದಿತ್ತು. ಆದರೂ ಉಪಾಧ್ಯಕ್ಷ ಸ್ಥಾನವನ್ನು ಬಿಜೆಪಿಗೆೆ ಬಿಟ್ಟುಕೊಟ್ಟಿತ್ತು. ಈ ಬಾರಿ ಮತ್ತೆ ಅಧಿಕಾರವನ್ನು ಉಳಿಸಿಕೊಳ್ಳಲು ಪಕ್ಷದ ವರಿಷ್ಠರು ಈ ಹಿಂದೆಯೇ ಹಲವು ಬಾರಿ ಸಭೆಯನ್ನು ನಡೆಸಿದ್ದಾರೆ. ಅಲ್ಲದೆ ಯಾವ ಅಭ್ಯರ್ಥಿಗೆ ಟಿಕೆಟ್‌ ನೀಡಿದರೆ ಗೆಲುವು ಸುಲಭವಾಗುತ್ತದೆ ಎಂಬುದರ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.

ಅಸ್ತಿತ್ವ ಉಳಿಸಿಕೊಳ್ಳುವುದೇ ಬಿಜೆಪಿ: ಕಳೆದ ಬಾರಿ ಬಿಜೆಪಿ ಪಕ್ಷದ 4 ಸದಸ್ಯರು ಆಯ್ಕೆಯಾಗಿದ್ದರು. ಆದ್ದರಿಂದ ಈ ಬಾರಿಯು ತಮ್ಮ ಸ್ಥಾನವನ್ನು ಮತ್ತಷ್ಟು ಭದ್ರ ಮಾಡಿಕೊಂಡು ಇನ್ನೂ ಹೆಚ್ಚಿನ ಸದಸ್ಯರನ್ನು ಗೆಲ್ಲುಸುವ ಮೂಲಕ ಈ ಪಕ್ಷ ತನ್ನ ಅಸ್ತಿತ್ವ ಉಳಿಸಿಕೊಳ್ಳುವುದೇ ಕಾದು ನೋಡಬೇಕಿದೆ. ಜೊತೆಗೆ ಜೆಡಿಎಸ್‌ ಯಾವ ರೀತಿ ರಣತಂತ್ರ ರೂಪಿಸುವುದೋ ಕಾದು ನೋಡಬೇಕಿದೆ.

* ಫೈರೋಜ್‌ ಖಾನ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.