‘ಪ್ರೋಗ್ರೆಸ್‌’ ಯೋಜನೆಗೆ ಚಾಲನೆ

ಸುಸ್ಥಿರ ಜೀವನೋಪಾಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಪರಿಸರ ವ್ಯವಸ್ಥೆಯನ್ನು ರಚಿಸುವುದು ಮುಖ್ಯ

Team Udayavani, Jun 21, 2022, 6:14 PM IST

‘ಪ್ರೋಗ್ರೆಸ್‌’ ಯೋಜನೆಗೆ ಚಾಲನೆ

ಚಾಮರಾಜನಗರ: ಜಿಲ್ಲೆಯ ಮಾರ್ಟಳ್ಳಿ ಹಾಗೂ ರಾಮಾಪುರ ಗ್ರಾಮದ 400 ಮಂದಿ ಫ‌ಲಾನುಭವಿಗಳಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಇಂದುಶ್ರೀ ಫೌಂಡೇಶನ್‌ ಹಾಗೂ ಬಿಎನ್‌ಪಿ ಪರಿಬಾಸ್‌ ಸಹಭಾಗಿತ್ವದಲ್ಲಿ ಗ್ರಾಮೀಣ ಬುಡಕಟ್ಟು ಜನರಿಗೆ ಉದ್ಯಮಶೀಲತೆ ಕಲ್ಪಿಸುವ ಪ್ರೋಗ್ರೆಸ್‌ ಯೋಜನೆಗೆ ಮಾರ್ಟಳ್ಳಿಯಲ್ಲಿ ಚಾಲನೆ ನೀಡಲಾಯಿತು.

ಬಿದಿರು ಉತ್ಪನ್ನಗಳನ್ನು ತಯಾರಿಸುವ ಜಿಲ್ಲೆಯ ಮಾರ್ಟಳ್ಳಿ ಮತ್ತು ರಾಮಾಪುರ ಗ್ರಾಮದ 400 ಫ‌ಲಾನುಭವಿಗಳಿಗೆ ಪ್ರಯೋಜನವಾಗಲಿದ್ದು, ಒಟ್ಟಾರೆ 3200 ಜನರಿಗೆ ಪರೋಕ್ಷವಾಗಿ ಅನುಕೂಲವಾಗಲಿದೆ.

ಈ ಯೋಜನೆಯು ರಾಜ್ಯದ ಗ್ರಾಮೀಣ ಮಹಿಳೆಯರಿಗೆ ಹಸಿರು ಮತ್ತು ಸುಸ್ಥಿರವಾದ ಜೀವನೋಪಾಯವನ್ನು ಸೃಷ್ಟಿಸುವ ಮೂಲಕ ಮೈಲಿಗಲ್ಲು ಸಾಧಿಸಲು ಮತ್ತು ಗ್ರಾಮೀಣ ಬುಡಕಟ್ಟು ಸಮುದಾಯಗಳಲ್ಲಿ ಸಾಮಾಜಿಕ ವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಮಹಿಳೆಯರು, ಯುವಜನರಿಗೆ ಆರ್ಥಿಕ ಸ್ವಾವಲಂಬಿಯಾಗುವ ಅವಕಾಶವನ್ನು ಒದಗಿಸಿಕೊಡುತ್ತದೆ.

ಕಳೆದ ಹಲವಾರು ವರ್ಷಗಳಿಂದ ಜಿಲ್ಲೆಯಲ್ಲಿ ದೊರೆಯುವ ಬಿದಿರು ಮೌಲ್ಯ ಜಾಲದಲ್ಲಿ ಲಭ್ಯವಾಗುವ ನೈಸರ್ಗಿಕ ಸಂಪನ್ಮೂಲಗಳನ್ನು ಸುಸ್ಥಿರವಾಗಿ ಬಳಸಿಕೊಂಡು ಮಹಿಳೆಯರ ಆರ್ಥಿಕ ಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಇಂದುಶ್ರೀ ಸಂಸ್ಥೆ ಕಾರ್ಯನಿರತವಾಗಿದೆ. ಸುಸ್ಥಿರತೆಯನ್ನು ಸಾಧಿಸುವ ನಿಟ್ಟಿನಲ್ಲಿ ಬಿಎನ್‌ಪಿ ಪರಿಬಾಸ್‌ ತನ್ನದೇ ಆದ ತಣ್ತೀಗಳನ್ನು ಅನುಷ್ಠಾನಕ್ಕೆ ತರುತ್ತಿದೆ.ಬಿಎನ್‌ಪಿ ಪರಿಬಾಸ್‌ನ ಸಿಎಸ್‌ಆರ್‌ ಮಿಷನ್‌ನ ಎರಡು ಪ್ರಮುಖ ಕ್ಷೇತ್ರಗಳಲ್ಲಿ ಇಂದುಶ್ರೀ ಕಾರ್ಯನಿರತವಾಗಿದೆ.

ಮೊದಲನೆಯದು ಸಾಮಾಜಿಕ ಮತ್ತು ವೃತ್ತಿಪರ ಒಳಗೊಳ್ಳುವಿಕೆಯನ್ನು ಉತ್ತೇಜಿಸುವುದು ಮತ್ತು ಎರಡನೆಯದು ಮಹಿಳೆಯರಿಗೆ ಆರ್ಥಿಕ ಸಾಕ್ಷರತೆ ಮತ್ತು ಕೌಶಲ್ಯ ಕಾರ್ಯಕ್ರಮಗಳನ್ನು ನೀಡುವುದು. ಎರಡನೇ ಕಾರ್ಯಕ್ರಮವು ಹವಾಮಾನ ಬದಲಾವಣೆಯ ಸವಾಲು ಮತ್ತು ಅದಕ್ಕೆ ಸಂಬಂಧಿತ ಪರಿಸರ ಸಮಸ್ಯೆಗಳತ್ತ ಗಮನಹರಿಸುತ್ತದೆ.

ಈ ಬಗ್ಗೆ ಮಾತನಾಡಿದ ಬಿಎನ್‌ಪಿ ಪರಿಬಾಸ್‌ ಇಂಡಿಯಾದ ಪ್ರಾದೇಶಿಕ ಮುಖ್ಯಸ್ಥೆ ಅಯ್ಮಾರ್‌ ಡೆಯಿ ಲಿಯೆಡೆಕೆರ್ಕೆ ಬ್ಯೂಫೋರ್ಟ್‌, ನಮ್ಮ ಸಿಎಸ್‌ಆರ್‌ ನೀತಿಯು ಆರ್ಥಿಕ ಪ್ರಗತಿ ಆದ್ಯತೆಗಳು, ದುರ್ಬಲ ವರ್ಗದವರ ಸೇರ್ಪಡೆ ಮತ್ತು ಸಂಪನ್ಮೂಲಗಳನ್ನು ರಕ್ಷಿಸುವುದಕ್ಕೆ ಆದ್ಯತೆ ನೀಡುತ್ತದೆ. ನಾವು ಎನ್‌ಜಿಒ ಆಗಿರುವ ಇಂದುಶ್ರೀ ಸಂಸ್ಥೆ ಜೊತೆ ಸೇರಿ ಸಮುದಾಯದಲ್ಲಿ ಸುಸ್ಥಿರ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುತ್ತಿದ್ದೇವೆ ಎಂದರು.

ಪರಿಸರ ವ್ಯವಸ್ಥೆ ರಚಿಸುವುದು ಮುಖ್ಯ: ಬಿಎನ್‌ಪಿ ಪರಿಬಾಸ್‌ ಇಂಡಿಯಾದ ಸಿಎಸ್‌ ಆರ್‌ ಸಂವಹನ ಮುಖ್ಯಸ್ಥೆ ಮನಿಶಾ ಖೋಸ್ಲಾ ಸಿನ್ಹಾ ಯೋಜನೆಗೆ ಚಾಲನೆ ನೀಡಿ ಮಾತನಾಡಿ, ಹಿಂದುಳಿದಿರುವ ಮಹಿಳೆಯರಿಗೆ ಸುಸ್ಥಿರ ಜೀವನೋಪಾಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಪರಿಸರ ವ್ಯವಸ್ಥೆಯನ್ನು ರಚಿಸುವುದು ಮುಖ್ಯವಾಗಿದೆ. ಇಂದುಶ್ರೀಯಂತಹ ಎನ್‌ ಜಿಒಗಳು ಹೆಚ್ಚಿನ ಜವಾಬ್ದಾರಿಯನ್ನು ವಹಿಸುವ ಮೂಲಕ ಇಂತಹ ಮಹಿಳೆಯರಿಗೆ ಸಮಗ್ರ ಬೆಂಬಲವನ್ನು ನೀಡುತ್ತವೆ. ಇದು ಮಹಿಳೆ ಯರಿಗೆ ವೈಯಕ್ತಿಕವಾಗಿ, ಕುಟುಂಬಗಳು ಮತ್ತು ಸಮುದಾಯಗಳಿಗೆ ಸಾಮೂಹಿಕವಾಗಿ ಪ್ರಯೋಜನಕಾರಿಯಾಗಿದೆ ಎಂದು ಹೇಳಿದರು.

400 ಮಹಿಳಾ ಉತ್ಪಾದಕರಿಗೆ ಅನುಕೂಲ: ಇಂದುಶ್ರೀ ಫೌಂಡೇಶನ್‌ನ ಸಂವಹನ ನಿರ್ದೇಶಕಿ ಅಕಿಲಾ ಲಿಯಾನ್‌ ಮಾತನಾಡಿ, ಬಿಎನ್‌ಪಿ ಪರಿಬಾಸ್‌ ಜೊತೆಗಿನ ಇಂದುಶ್ರೀ ಫೌಂಡೇಶನ್‌ನ ಪಾಲುದಾರಿಕೆಯು ಹಸಿರು ಮತ್ತು ಸುಸ್ಥಿರ ಜೀವನೋಪಾಯದ ಅವಕಾಶಗಳನ್ನು ಸೃಷ್ಟಿಸಲು ಪ್ರಮುಖವಾಗಿದೆ. ಇದು ಮಾರ್ಟಳ್ಳಿ ಮತ್ತು ರಾಮಾಪುರ ಪ್ರದೇಶದ ಬಿದಿರು ಮೌಲ್ಯ ಸರಪಳಿಯಲ್ಲಿ ನೇರವಾಗಿ 400 ಮಹಿಳಾ ಉತ್ಪಾದಕರಿಗೆ ಅನುಕೂಲಗಳನ್ನು ಮಾಡಿಕೊಡುತ್ತದೆ. ಈ ಯೋಜನೆಯು ನಮ್ಮ ಮಹಿಳಾ ಉತ್ಪಾದಕರಿಗೆ ಅವರ ಉತ್ಪನ್ನ ತಯಾರಿಕೆ ಕೌಶಲ್ಯಗಳನ್ನು ಬೆಂಬಲಿಸುವ ಮೂಲಕ ಗಮನಾರ್ಹವಾದ ಬದಲಾವಣೆ ಮತ್ತು ಅವರನ್ನು ಸಬಲರನ್ನಾಗಿ ಮಾಡುವ ನಿಟ್ಟಿನಲ್ಲಿ ಸಹಾಯ ಮಾಡುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.