ಅಧ್ಯಾತ್ಮಿಕ ಸೇವಾ ಕೇಂದ್ರ ಉದ್ಘಾಟನೆ
Team Udayavani, Nov 3, 2020, 3:33 PM IST
ಗುಂಡ್ಲುಪೇಟೆ: ಅಧ್ಯಾತ್ಮಿಕ ಮಾರ್ಗದಲ್ಲಿ ಸಾಗಿದರೆ ಮಾತ್ರ ಮನುಷ್ಯ ಅಂತಿಮ ಗುರಿ ತಲುಪಲು ಸಾಧ್ಯ ಎಂದು ರಾಜಯೋಗಿನಿ ಬಿ.ಕೆ.ಲಕ್ಷ್ಮೀ ಹೇಳಿದರು.
ಪಟ್ಟಣದ ಶ್ವೇತಾದ್ರಿಗಿರಿ ಬಡಾವಣೆಯಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ನಿರ್ಮಿಸಿದ ಅಧ್ಯಾತ್ಮಿಕ ಸೇವಾ ಕೇಂದ್ರ ಉದ್ಘಾಟಿಸಿ ಮಾತನಾಡಿದರು. ಮನುಷ್ಯರಾಗಿ ಹುಟ್ಟಿದ ಮೇಲೆ ಉತ್ತಮ ಸೇವಾ ಕಾರ್ಯಗಳನ್ನು ಮಾಡುವ ಮೂಲಕ ಸಾರ್ಥಕ ಜೀವನ ನಡೆಸಬೇಕು. ಸ್ನೇಹ, ವಿಶ್ವಾಸ, ಸತ್ಯ,ನಂಬಿಕೆ ಹಾಗೂ ಪ್ರಾಮಾಣಿಕತೆಯಂತಹ ಸರ್ವಕಾಲಿಕ ಮೌಲ್ಯಗಳನ್ನು ಅನುಸರಿಸ ಬೇಕು ಎಂದರು.
ಕಾರ್ಯಕ್ರಮದಲ್ಲಿ ಗೋಪಾಲಪುರ ಕಬ್ಬಿಣಕೋಲೇಶ್ವರ ಮಠಾಧ್ಯಕ್ಷರಾದ ಇಮ್ಮಡಿ ಗುರುಮಲ್ಲಸ್ವಾಮೀಜಿ, ತಹಶೀ ಲ್ದಾರ್ ಎಂ.ನಂಜುಂಡಯ್ಯ, ಪುರಸಭೆ ಮಾಜಿ ಅಧ್ಯಕ್ಷ ಎಂ.ಪುಟ್ಟರಂಗನಾಯ್ಕ, ಅಧ್ಯಾತ್ಮಿಕ ಸೇವಾ ಕೇಂದ್ರದ ಮುಖ್ಯ ಸಂಚಾಲಕಿ ಜಿ.ಕೆ.ವೀಣಾ, ಮಂಡ್ಯ ಜಿಲ್ಲೆಸಂಚಾಲಕಿ ಶಾರದಾ, ಪ್ರಭಾಮಣಿ, ದಾನೇಶ್ವರಿ, ವೀಣಾ, ಸರೋಜಾ, ಬಿ.ಕೆ. ಆರಾಧ್ಯ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಅತ್ಯಂತ ಪ್ರಾಚೀನ ಭಾಷೆ: ನಾಗೇಂದ್ರ :
ಹನೂರು: ಕನ್ನಡ ಅತ್ಯಂತ ಪ್ರಾಚೀನ ಭಾಷೆಯಾಗಿದ್ದು, ಮಹತ್ತರ ಸ್ಥಾನ ಪಡೆದಿದೆ. ಪ್ರತಿಯೊಬ್ಬರೂ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸಬೇಕು ಎಂದು ಉಪ ತಹಶೀಲ್ದಾರ್ ನಾಗೇಂದ್ರ ತಿಳಿಸಿದರು.
ತಹಶೀಲ್ದಾರ್ ಕಚೇರಿಯಲ್ಲಿ ತಾಲೂಕು ಆಡಳಿತದ ವತಿಯಿಂದ ನಡೆದ ಕರ್ನಾಟಕ ರಾಜ್ಯೋತ್ಸವದಲ್ಲಿ ಮಾತನಾಡಿದ ಅವರು, ಕನ್ನಡ ಅತ್ಯಂತ ಶ್ರೇಷ್ಠ ಭಾಷೆಯಾಗಿದೆ. ಸಾಹಿತ್ಯ, ಸಂಪ್ರದಾಯ, ಸಂಸ್ಕೃತಿಯಲ್ಲಿ ತನ್ನದೇ ಆದ ಹಿರಿಮೆ ಹೊಂದಿದೆ. ಭಾಷೆ, ನಾಡು ನುಡಿ ಮತ್ತು ಸಂಸ್ಕೃತಿಯ ಉಳಿವು ಮತ್ತು ಬೆಳವಣಿಗೆಗೆ ಒತ್ತು ನೀಡಬೇಕು ಎಂದರು. ಈ ವೇಳೆ ಶಿರಸ್ತೇದಾರ್ ಸುರೇಶ್, ರಾಜಸ್ವ ನಿರೀಕ್ಷಕ ಬಿ.ಪಿ. ಮಾದೇಶ್, ಗ್ರಾಮ ಲೆಕ್ಕಿಗ ಶೇಷಣ್ಣ, ಸಿದ್ದರಾಜು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ