ಕ್ಷುಲ್ಲಕ ಕಾರಣಕ್ಕೆ ಜಗಳ ಕೊಲೆಯಲ್ಲಿ ಅಂತ್ಯ
Team Udayavani, Jan 9, 2021, 8:53 PM IST
ಚಾಮರಾಜನಗರ: ಕ್ಷುಲ್ಲಕ ಕಾರಣಕ್ಕಾಗಿ ಜಗಳ ನಡೆದು ಓರ್ವನ ಕೊಲೆಯಲ್ಲಿ ಕೊನೆಗೊಂಡ ಘಟನೆ ತಾಲೂಕಿನ ಭುಜಗನಪುರದಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಗ್ರಾಮದ ನಿವಾಸಿ ಗುರುಸಿದ್ದಯ್ಯ (65) ಕೊಲೆಯಾದವರು. ಅವರ ನೆರೆಮನೆಯವರಾದ ನಾರಾಯಣಸ್ವಾಮಿ, ಚಂದ್ರಕಾಂತ್ ಮತ್ತು ಭೀಮ ಎಂಬುವವರ ವಿರುದ್ಧ ದೂರು ದಾಖಲಾಗಿದ್ದು, ಮೂವರು ತಲೆ ಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ಗುರುಸಿದ್ದಯ್ಯ ಹಾಗೂ ನೆರೆಮನೆಯವರ ನಡುವೆ ಶುಕ್ರವಾರ ಸಂಜೆ ಜಗಳವಾಗಿತ್ತು. ನೂಕಾಟ, ತಳ್ಳಾಟದಲ್ಲಿ ಗುರುಸಿದ್ದಯ್ಯ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ : ಚಾಮರಾಜನಗರ: ಸಾಲ ಬಾಧೆ ತಾಳದೆ ರೈತ ಆತ್ಮಹತ್ಯೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ