ಈಜುವಾಗ ನೀರಿನಲ್ಲಿ ಮುಳುಗಿ ಕಾರ್ಮಿಕ ಸಾವು
Team Udayavani, Apr 5, 2021, 1:03 PM IST
ಸಾಂದರ್ಭಿಕ ಚಿತ್ರ
ಕೊಳ್ಳೇಗಾಲ: ತಾಲೂಕಿನ ಶಿವನಸಮುದ್ರದ ವೆಸ್ಲಿಸೇತುವೆಯ ಕಾವೇರಿ ನದಿಯ ನೀರಿನಲ್ಲಿ ಈಜಾಡುವಾಗ ಕಾರ್ಮಿಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ಶಕನೂರ್ ಗ್ರಾಮದ ನಿವಾಸಿ ದೇವಂದ್ರಪ್ಪ ಜತ್ತಿ ಪುತ್ರ ಶರಣಪ್ಪ (22) ಮೃತ ದುರ್ದೈವಿ.
ತಾಲೂಕಿನ ನರೀಪುರದಿಂದ ಹನೂರಿನವರೆಗೆ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಕೆಲಸಕ್ಕೆ ಆಗಮಿಸಿದ್ದ ಯುವಕರು ತಾಲೂಕಿನ ದೊಡ್ಡಿಂದುವಾಡಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದರು. ಭಾನುವಾರ ಏಳು ಯುವಕರು ಶಿವನಸಮುದ್ರದ ಕಾವೇರಿ ನದಿಯ ನೀರಿನಲ್ಲಿ ಈಜಾಡಲು ತೆರಳಿದ್ದರು. ಈ ವೇಳೆ ಶರಣಪ್ಪ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಸಿಪಿಐ ಶಿವರಾಜ್ ಆರ್.ಮು ಧೂಳ್ ಮತ್ತು ಗ್ರಾಮಾಂತರ ಪೊಲೀಸ್ ಠಾಣೆ ಎಸ್ಐ ಅಶೋಕ್ ಮತ್ತು ಸಿಬ್ಬಂದಿ ಧಾವಿಸಿ ಪರಿಶೀಲನೆ ನಡೆಸಿದರು. ಬಳಿಕ ಈಜುಗಾರರ ಸಹಾಯದಿಂದ ಕಾರ್ಮಿಕನ ಶವವನ್ನು ಮೇಲೆತ್ತಲಾಯಿತು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ