ಪ್ರೇಮ ಪ್ರಕರಣ: ಪೊಲೀಸ್‌ ಜೀಪ್‌ನಿಂದ ಹಾರಿ ವ್ಯಕ್ತಿ ಸಾವು


Team Udayavani, Nov 30, 2022, 3:03 PM IST

tdy-13

ಯಳಂದೂರು: ತಾಲೂಕಿನ ಯರಿಯೂರು ಗ್ರಾಮದ ಬಳಿ ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಜೀಪ್‌ ನಲ್ಲಿ ಕರೆದೊಯ್ಯುತ್ತಿದ್ದಾಗ ಹಾರಿ ಸಾವನಪ್ಪಿರುವ ಘಟನೆ ಮಂಗಳವಾರ ಮಧ್ಯಾಹ್ನ ಜರುಗಿದ್ದು, ಇದು ಸಾವಲ್ಲ ಕೊಲೆ ಎಂದು ಈತನ ಪೋಷಕರು ದೂರಿದ್ದಾರೆ.

ಸಮೀಪದ ಕುಂತೂರು ಮೋಳೆ ಗ್ರಾಮದ ನಿಂಗರಾಜು(24) ಎಂಬ ವ್ಯಕ್ತಿಯೇ ಮೃತಪಟ್ಟ ದುರ್ದೈವಿ.

ಏನಿದು ಪ್ರಕರಣ: ಸಮೀಪದ ಕುಂತೂರು ಮೋಳೆ ಗ್ರಾಮದ ಉಪ್ಪಾರ ಬಡಾವಣೆಯ ನಂಜುಂಡಶೆಟ್ಟಿ ಎಂಬುವವರ ಮಗ ನಿಂಗರಾಜು ಇದೇ ಗ್ರಾಮದ ಇದೇ ಸಮುದಾಯದ 16.8 (ತಿಂಗಳು) ವರ್ಷದ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ನ.23 ರಿಂದ ಇವರು ಗ್ರಾಮದಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ಯುವತಿಯ ತಂದೆ ಮಾದೇಶ್‌ ಎಂಬುವವರು ತಾಲೂಕಿನ ಮಾಂಬಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ನನ್ನ ಮಗಳು ಬಹಿರ್ದೆಸೆಗೆ ತೆರಳಿ ಮನೆಗೆ ವಾಪಸ್‌ ಬಂದಿಲ್ಲ.

ಈ ಹಿಂದೆ ನನ್ನ ಮಗಳನ್ನು ನಿಂಗರಾಜು ಎಂಬುವವರ ತಂದೆ ಮದುವೆ ಮಾಡಿಕೊಡಿ ಎಂದು ಕೇಳಿದ್ದರು. ಆದರೆ, ಈಕೆಗೆ 18 ವರ್ಷ ತುಂಬಿಲ್ಲ ಎಂದು ನಾನು ನಿರಾಕರಿಸಿದ್ದೆ. ಹಾಗಾಗಿ ನಿಂಗರಾಜು ಎಂಬುವವನೇ ನನ್ನ ಮಗಳನ್ನು ಕರೆದೊಯ್ದಿದ್ದಾನೆ ಎಂದು ಅನುಮಾನವಿದೆ ಎಂದು ದೂರು ನೀಡಿದ್ದರು. ಈ ಬಗ್ಗೆ ತನಿಖೆ ಆರಂಭಿಸಿದ ಪೊಲೀಸರು ನಿಂಗರಾಜು ನ.29 ರಂದು ಪತ್ತೆ ಹಚ್ಚಿದ್ದಾರೆ.

ನಂತರ ಇವರ ಜೀಪ್‌ನಲ್ಲಿ ಯಳಂದೂರು ಪೊಲೀಸ್‌ ಠಾಣೆಗೆ ಕರೆತಂದಿದ್ದಾರೆ. ಇಲ್ಲಿ ವಿಚಾರಣೆ ನಡೆಸಿ ಮಾಂಬಳ್ಳಿ ಪೊಲೀಸ್‌ ಠಾಣೆಗೆ ಜೀಪ್‌ನಲ್ಲಿ ಕರೆದೊತ್ತುತ್ತಿದ್ದ ವೇಳೆ ಈತ ಯರಿಯೂರು ಗ್ರಾಮದ ಬಳಿ ಜೀಪ್‌ನಿಂದ ನೆಗೆದಿದ್ದು, ಈತನ ತಲೆ ಸೇರಿ ದೇಹದ ಇತರ ಭಾಗಗಳಿಗೆ ಪೆಟ್ಟಾಗಿದೆ. ಕೂಡಲೇ ಪೊಲೀಸರು ಜೀಪ್‌ನಲ್ಲಿ ಯಳಂದೂರಿನ ಸಾರ್ವ ಜನಿಕ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ, ಇಷ್ಟೊತ್ತಿಗಾಗಲೇ ನಿಂಗರಾಜು ಮೃತಪಟ್ಟಿರುವುದು ದೃಢಪಟ್ಟಿದೆ.

ಇದು ಆತ್ಮಹತ್ಯೆಯಲ್ಲಿ ಕೊಲೆ: ನಿಂಗರಾಜು ಜೀಪ್‌ ನಿಂದ ಹಾರಿ ಮೃತಪಟ್ಟಿಲ್ಲ. ಈತನಿಗೆ ಯಳಂದೂರು ಪೊಲೀಸ್‌ ಠಾಣೆಯಲ್ಲಿ ವಿಚಾರಣೆಗೆ ಕರೆತಂದು ಹಿಗ್ಗಾಮಗ್ಗ ಥಳಿಸಲಾಗಿದೆ. ಅಲ್ಲೇ ಈತನ ಪ್ರಾಣ ಹೋಗಿದೆ. ನಂತರ ಮಾಂಬಳ್ಳಿ ಠಾಣೆಗೆ ಈತನನ್ನು ಜೀಪ್‌ನಲ್ಲಿ ಕುಳ್ಳಿರಿಸಿ, ಇವರೇ ಬೇಕೆಂತಲೇ ಜೀಪ್‌ ನಿಂದ ತಳ್ಳಿದ್ದಾರೆ ಎಂದು ಗ್ರಾಮಸ್ಥರು, ಉಪ್ಪಾರ ಮುಖಂಡರು ಆರೋಪಿಸಿ ಠಾಣೆ ಮುಂದೆ ಪ್ರತಿಭಟಿಸಿದರು.

ತನಿಖೆ ನಡೆಯಲಿ: ಅಲ್ಲದೆ, ವಿಚಾರಣೆ ವೇಳೆಯಲ್ಲಿ ಒಬ್ಬ ವ್ಯಕ್ತಿಯ ಪ್ರಾಣ ಹೋಗಿರುವುದು ಹಲವು ಅನುಮಾನಗಳಿಗೆ ಆಸ್ಪದ ನೀಡುವಂತಿದೆ. ಇದರ ಬಗ್ಗೆ ತನಿಖೆಯಾಗಬೇಕು. ಈ ಸಾವು ಹಲವು ಅನುಮಾನಗಳಿಗೆ ಆಸ್ಪದ ನೀಡುವಂತಿದೆ. ಹಾಗಾಗಿ ಮೃತನ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು, ಪರಿಹಾರ ನಿಡಬೇಕು ಎಂದು ಆಗ್ರಹಿಸಿ ಪ್ರತಿಭಟಿಸಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್‌ ಈ ಬಗ್ಗೆ ತನಿಖೆ ನಡೆಸಿ, ಪೊಲೀಸರಿಂದ ತಪ್ಪಾಗಿದ್ದಲ್ಲಿ ಕಾನೂನು ಕ್ರಮ ವಹಿಸುವ ಭರವಸೆ ನೀಡಿದರು.

 

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.