ಭಾರಿ ಪ್ರಮಾಣದ ಅಕ್ರಮ ಮಾಕಳಿ ಬೇರು ವಶ : ಮೂವರ ಬಂಧನ


Team Udayavani, Aug 21, 2021, 6:09 PM IST

incident held at chamarajanagara

ಯಳಂದೂರು : ತಾಲೂಕಿನ ಬಿಆರ್‌ಟಿ ಹುಲಿ ರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ಕೆ . ದೇವರಹಳ್ಳಿ ಗ್ರಾಮದ ಬಳಿ ಅಕ್ರಮವಾಗಿ ಮಾಕಳಿ ಬೇರು ಸಾಗಿಸುತ್ತಿದ್ದ ವೇಳೆ ಅರಣ್ಯ ಇಲಾಖೆಯ ಸಿಬ್ಬಂದಿ ದಾಳಿ ನಡೆಸಿ ಭಾರಿ ಪ್ರಮಾಣ ಮಾಕಳಿ ಬೇರು ವಶಪಡಿಸಿಕೊಂಡು ಮೂವರನ್ನು ಬಂಧಿಸಿರುವ ಘಟನೆ ಶನಿವಾರ ಮುಂಜಾನೆ ನಡೆದಿದೆ .

ಈ ಸಂಬಂಧ ಜಕ್ಕಳ್ಳಿ ಗ್ರಾಮದ ಪರಿಯನಾಯಗಂ , ಸೊಸೈರಾಜು , ಸಿರಾಜು ಎಂಬುವವರನ್ನು ಬಂಧಿಸಲಾಗಿದೆ . ಹೊಂಗನೂರು , ಬೆಲ್ಲವು ಗ್ರಾಮದ ರಸ್ತೆಯಲ್ಲಿ ಚಾಮರಾಜನಗರ ಪ್ರಾದೇಶಿಕ ವಲಯದ ಅರಣ್ಯ ಇಲಾಖೆಯ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದೆ . ಇಲ್ಲಿ ಅಕ್ರಮವಾಗಿ ಮಾಕಳಿ ಬೇರು ಸಾಗಾಟ ಮಾಡುತ್ತಿದ್ದಾರೆ ಎಂಬ ಖಚಿತ ಆಧಾರದ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆಯ ತಂಡ ಒಟ್ಟು 935 ಕಿಲೋ ತೂಕದ ಬೇರನ್ನು ವಶಪಡಿಸಿಕೊಂಡಿದೆ.

ಇದರ ಸಾಗಾಟಕ್ಕೆ ಬಳಸಲಾಗಿದ್ದ ಒಂದು ಟಾಟಾ ಏಸ್ ಹಾಗೂ ಹುಂಡೈ ಇಯಾನ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ . ಮತ್ತಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ .

ದಾಳಿ  ಮಾಡಲು ಸಿದ್ಧವಾಗಿದ್ದ ತಂಡ : ಅರಣ್ಯ ಇಲಾಖೆಯ ಸಿಬ್ಬಂದಿ ದಾಳಿ ನಡೆಸಿದ ಸಂದರ್ಭದಲ್ಲಿ ಪ್ರತಿದಾಳಿ ನಡೆಸಲು ಕಳ್ಳರ ತಂಡ ಪ್ರಯತ್ನ ನಡೆಸಿದೆ . ಕಾರಿನಲ್ಲಿದ್ದ ಇಬ್ಬರು ಚಾಮರಾಜನಗರ ಅರಣ್ಯ ವಲಯದ ಬೊಲೆರೋ ಜೀಪಿಗೆ ಇಯಾನ್ ಕಾರಿನಿಂದ ಗುದ್ದಿದ್ದಾರೆ . ಇದರ ರಭಸಕ್ಕೆ ಬೊಲೆರೋ ವಾಹನ ಜಖಂಗೊಂಡಿದೆ . ಇಯಾನ್ ವಾಹನದ ಮುಂಭಾಗವೂ ನಜ್ಜುಗೊಜ್ಜಾಗಿದ್ದು ಇದನ್ನು ಅಲ್ಲೇ ಬಿಟ್ಟು ಪರಾರಿಯಾಗಿರುವ ಖದೀಮರ ಶೋಧಕ್ಕೆ ಅರಣ್ಯ ಇಲಾಖೆ ಬಲೆ ಬೀಸಿದೆ .

ಈ ಕಾರ್ಯಾಚರಣೆಯಲ್ಲಿ ಎಸಿಎಫ್ ಬಿ.ಆರ್ . ರಮೇಶ್‌ , ಆರ್‌ಎಫ್‌ಒ ಲೋಕೇಶ್‌ಮೂರ್ತಿ ಡಿಎಫ್‌ಆರ್‌ಒ ಗೋವರ್ಧನ್ , ವರುಣ್‌ಕುಮಾರ್‌ , ರಮೇಶ್ . ಪುನೀತ್‌ಕುಮಾರ್‌ , ಅಮರ್‌ನಾಥ್ ಅರಣ್ಯ ರಕ್ಷರಾದ ಡಿ.ಕೆ. ಮಧು . ವಿಕ್ರಮ್ , ಬಸವರಾಜಅಬ್ಬಾಳ್ , ಭೀಮ್‌ಶಿ . ಕಾಡೇಶ್ , ಚಂದಪ್ಪಗೌಟ್ , ವೀಕ್ಷಕರಾದ ರಂಗಸ್ವಾಮಿ ಮಣಿಕಂಠ , ಫೈರೋಜ್ , ಕುಮಾರಸ್ವಾಮಿ ಶ್ರೀಕಂಠ ವಾಹನ ಚಾಲಕರಾದ ಪರಶಿವ , ಸುಜ್ಞಾನಮೂರ್ತಿ ಭಾಗವಹಿಸಿದ್ದರು .

ಟಾಪ್ ನ್ಯೂಸ್

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.