ರಜಾದಿನಗಳಲ್ಲಿ ಇಂದಿರಾ ಕ್ಯಾಂಟೀನ್‌ ಬಂದ್‌


Team Udayavani, Aug 22, 2022, 2:55 PM IST

ರಜಾದಿನಗಳಲ್ಲಿ ಇಂದಿರಾ ಕ್ಯಾಂಟೀನ್‌ ಬಂದ್‌

ಯಳಂದೂರು: ಬಡವರು, ನಿರ್ಗತಿಕರು, ಕೂಲಿ ಕಾರ್ಮಿಕರು ಊಟ, ತಿಂಡಿ ಮಾಡದೆ ಇರಬಾರದು, ಹಸಿದು ಮಲಗಬಾರದು, ಅವರಿಗೆ ಕಡಿಮೆ ಹಣದಲ್ಲಿ ಗುಣಮಟ್ಟದ ಆಹಾರ ದೊರಕಬೇಕು ಎಂಬ ಮಹತ್ತರ ಉದ್ದೇಶದಿಂದ ಆರಂಭಗೊಂಡ ಇಂದಿರಾ ಕ್ಯಾಂಟೀನ್‌ ಯಳಂದೂರು ಪಟ್ಟಣದಲ್ಲಿ ರಜಾದಿನಗಳಲ್ಲಿ ಬಂದ್‌ ಆಗುವುದರಿಂದ ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗುತ್ತದೆ.

ಪಟ್ಟಣದ 1ನೇ ವಾರ್ಡಿನ ಆಶ್ರಯ ಬಡಾವಣೆಯಲ್ಲಿ, 2019ರ ಮಾರ್ಚ್‌ನಲ್ಲಿ ಇಂದಿರಾ ಕ್ಯಾಂಟೀನ್‌ ಆರಂಭಿಸಲಾಗಿತ್ತು, ಪೊಲೀಸ್‌ ಠಾಣೆ, ಕಾಲೇಜು, ಸರ್ಕಾರಿ ಆಸ್ಪತ್ರೆ, ತಾಲೂಕು ಕಚೇರಿ, ಪಟ್ಟಣ ಪಂಚಾಯಿತಿ ಕಚೇರಿ ಸೇರಿದಂತೆ ಇತರೆ ಸಾರ್ವಜನಿಕರು ಹೆಚ್ಚಾಗಿ ಆಸ್ಪತ್ರೆಯ ರೋಗಿಗಳು ಮತ್ತು ಅವರ ಸಂಬಂಧಿಗಳು, ಆಟೋ ಚಾಲಕರು, ವ್ಯಾಪಾರಿಗಳು, ಕೂಲಿ ಕಾರ್ಮಿಕರು ಸೇರಿದ ಬಡ ಮಧ್ಯಮ ವರ್ಗದ ಜನರು ಇಂದಿರಾ ಕ್ಯಾಂಟೀನ್‌ ನಲ್ಲಿ ಅತಿ ಕಡಿಮೆ ದರದಲ್ಲಿ ಊಟ, ತಿಂಡಿ ಮಾಡಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದರು. ಆದರೆ ಪ್ರಸುತ್ತ ದಿನಗಳಲ್ಲಿ ಗುಣಮಟ್ಟದ ಊಟ, ತಿಂಡಿಯನ್ನು ನೀಡುತ್ತಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ.

ದಿನದಿಂದ ದಿನಕ್ಕೆ ಕ್ಯಾಂಟೀನ್‌ಗೆ ಆಗಮಿಸುವವೆ ಸಂಖ್ಯೆಯು ಗಣನೀಯವಾಗಿ ಕಡಿಮೆಯಾಗುತ್ತಿದೆ. ಕೋವಿಡ್‌ ಸಮಯದಲ್ಲಿ ಕ್ಯಾಂಟೀನ್‌ನಲ್ಲಿ ಊಟ ಕೊಡುತ್ತಿದ್ದೆವು. ಬಡವರು ಕೈ ಮುಗಿದು ಊಟ ಮಾಡಿ ಹೋಗು ತ್ತಿದ್ದರು. ಆದರೆ ಗುತ್ತಿಗೆದಾರರು ಬರುಬರುತ್ತಾ ಕ್ಯಾಂಟೀನ್‌ ನಡೆಸಲು ನಿರ್ಲಕ್ಷ್ಯ ವಹಿಸಿದರು. ಇದರಿಂದ ಕ್ಯಾಂಟೀನ್‌ಗೆ ಬೀಗ ಹಾಕಿ ಇಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಹೋಗುತ್ತಿದ್ದಾರೆ ಈ ಬಗ್ಗೆ ಸಂಬಂಧಪಟ್ಟ ಮೇಲಧಿಕಾರಿಗಳು ಕ್ರಮವಹಿಸುತ್ತಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ.

ಗುಣಮಟ್ಟದ ಊಟ ನೀಡುತ್ತಿಲ್ಲ: ಇಂದಿರಾ ಕ್ಯಾಂಟೀನ್‌ನ್ನು ಗುತ್ತಿಗೆ ಆಧಾರದಲ್ಲಿ ನಡೆಸುತ್ತಿತ್ತು. ಸರ್ಕಾರ ಆದೇಶದಂತೆ ಉಪಾಹಾರಕ್ಕೆ 5 ರೂ., ಮಧ್ಯಾಹ್ನ ಮತ್ತು ರಾತ್ರಿ ಊಟಕ್ಕೆ 10 ರೂ. ದರ ನಿಗದಿಪಡಿಸಲಾಗಿದೆ. ಒಬ್ಬ ವ್ಯಕ್ತಿಗೆ ಒಂದು ದಿನಕ್ಕೆ ತಿಂಡಿ, ಎರಡು ಬಾರಿ ಊಟ ಸೇರಿದಂತೆ 52.49 ರೂ. ಆಹಾರ ವಿತರಣೆ ಟೆಂಡರ್‌ ಮಂಜೂರು ಮಾಡಲಾಗಿದೆ. ಗ್ರಾಹಕರಿಂದ 25 ಮತ್ತು ಉಳಿದ 27.49 ರೂ. ಅನ್ನು ರಾಜ್ಯ ಸರ್ಕಾರ ಪಾವತಿಸುತ್ತಿದೆ. ಪ್ರತಿ ತಿಂಗಳು ಉಪಾಹಾರ ಮತ್ತು ಊಟ ಸೇವಿಸಿದ ಗ್ರಾಹಕರ ಸಂಖ್ಯೆಯ ಆಧಾರದ ಮೇಲೆ ಬಿಲ್‌ ಪಾವತಿಸಲಾಗುತ್ತಿದೆ. ಅಧಿಕಾರಿಗಳ ಬೇಜವಾಬ್ದಾರಿ ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಇಂದಿರಾ ಕ್ಯಾಂಟೀನ್‌ನಲ್ಲಿ ನಿಗದಿತ ಮಟ್ಟದಲ್ಲಿ ಗುಣಮಟ್ಟದ ಸಾಮಗ್ರಿ ಹಾಗೂ ತರಕಾರಿಗಳನ್ನು ಬಳಸದೆ ಊಟ ನೀಡಲಾಗುತ್ತಿದೆ ಎಂಬ ಆರೋಪ ಗಳು ಕೇಳಿ ಬರುತ್ತಿವೆ. ಜತೆಗೆ ಸರ್ಕಾರಿ ರಜೆ ಹಾಗೂ ಭಾನುವಾರ ದಿನಗಳಲ್ಲಿ ಕ್ಯಾಂಟೀನ್‌ ಬಂದ್‌ ಮಾಡುವುದರಿಂದ ಬಡ ಜನರು ಊಟಕ್ಕೆ ಪರದಾಡು ವಂತಾಗಿದೆ ಎಂದು ಯರಿಯೂರು ಗ್ರಾಮದ ವ್ಯಾಪಾರಿ ಮಲ್ಲು ದೂರಿದರು.

ಈ ಹಿಂದೆ ಬಾಗಿಲು ಮುಚ್ಚಿ ಹೋಗಿರುವ ಬಗ್ಗೆ ನೋಟಿಸ್‌ ನೀಡಿ ಎಚ್ಚರಿಸಲಾಗಿದೆ ಆದರೂ ಕೂಡ ಪದೇ ಪದೆ ಈ ರೀತಿ ತಪ್ಪು ಮಾಡುತ್ತಿರುವುದು ಸೂಕ್ತವಾಗಿಲ್ಲ. ಈ ಬಗ್ಗೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಕ್ರಮ ವಹಿಸಲಾಗುವುದು. – ಮಲ್ಲೇಶ್‌, ಮುಖ್ಯಾಧಿಕಾರಿ ಪಪಂ, ಯಳಂದೂರು

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.