ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಒತ್ತಾಯ


Team Udayavani, Jun 22, 2019, 3:00 AM IST

jill-vata

ಚಾಮರಾಜನಗರ: ಜಿಲ್ಲೆಯ ಸಮಗ್ರ ಅಭಿವೃ ದ್ಧಿಗಾಗಿ ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ನಗರದ ಜಿಲ್ಲಾಡಳಿತ ಭವನಕ್ಕೆ ತೆರಳಿ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿ ಮಾತನಾಡಿ, ಚಾಮರಾಜನಗರ ಜಿಲ್ಲೆ ಹಿಂದುಳಿದ ಗಡಿಪ್ರದೇಶವಾಗಿದ್ದು, ಬಹಳಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಬೇಕಿದೆ. ಈ ಜಿಲ್ಲೆಗೆ ವಿಶೇಷವಾದ ಅನುದಾನ ಮತ್ತು ಜಿಲ್ಲೆಯ ಅಭಿವೃದ್ಧಿಗೆ ಒಂದು ಪ್ಯಾಕೇಜ್‌ ನೀಡಬೇಕು ಎಂದು ಒತ್ತಾಯಿಸಿದರು.

ಕೆರೆಗಳಿಗೆ ನೀರು ತುಂಬಿಸುವಲ್ಲಿ ಸರ್ಕಾರ ವಿಫ‌ಲ: ಚಾಮರಾಜನಗರ ತೀವ್ರ ಭೀಕರ ಬರಗಾಲವಿದ್ದು, ಜನ-ಜಾನುವಾರುಗಳಿಗೆ ಕುಡಿಯುವ ನೀರನ್ನು ಮೇವು ತ್ವರಿತವಾಗಿ ವ್ಯವಸ್ಥೆ ಮಾಡಬೇಕಾದ ಪರಿಸ್ಥಿತಿ ಇದೆ. ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿಗೆ ಹಾಹಾಕಾರವಾಗಿದೆ. ನಗರದಲ್ಲಿ ಪ್ರತಿನಿತ್ಯ ಕಾವೇರಿ ನೀರು ಬಿಡಬೇಕು. ಕೆರೆಗ‌ಳಿಗೆ ನೀರು ತುಂಬಿಸುವಲ್ಲಿ ಸರ್ಕಾರಗಳು ವಿಫ‌ಲವಾಗಿದೆ. ಪ್ರತಿ ಹಳ್ಳಿ ಹಳ್ಳಿಯಲ್ಲೂ ತಕ್ಷಣ ಕೊಳವೆಬಾವಿ ಕೊರೆಸಿ ಸಂಪೂರ್ಣ ನೀರು ಕೊಡಬೇಕು. ನಗರದಲ್ಲಿ ಒಳಚರಂಡಿ ಕಾಮಗಾರಿ ಅವೈಜ್ಞಾನಿವಾಗಿದ್ದು ಪರಿಣಾಮಕಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಆಪರೇಷನ್‌ ಕಮಲ ಅಪಾಯಕಾರಿ: ಮಾಜಿ ಪ್ರಧಾನಿ ದೇವೇಗೌಡರು ಸೋಲಬಾರದಿತ್ತು. ದೇವೇಗೌಡರೇ ಮಧ್ಯಂತರ ಚುನಾವಣೆಗೆ ಕುರಿತು ಮಾತನಾಡಿದ್ದಾರೆ. ರಾಜ್ಯ ಮೈತ್ರಿ ಸರ್ಕಾರದಲ್ಲಿ ಜೆಡಿಎಸ್‌, ಕಾಂಗ್ರೆಸ್‌ ನಡುವೆ ಒಳಜಗಳವಿದೆ. ಆಪರೇಷನ್‌ ಕಮಲ ಅಪಾಯಕಾರಿ. ಅಧಿಕಾರದ ಆಸೆಗಾಗಿ ಅಪರೇಷನ್‌ಗೆ ಒಳಗಾಗುವ ಪಕ್ಷಾಂತರಿಗಳಿಗೆ ಜೀವನ ಪರ್ಯಂತ ಚುನಾವಣೆಗೆ ನಿಲ್ಲದಂತೆ ಆದೇಶ ನೀಡಬೇಕು. ಸಿದ್ದರಾಮಯ್ಯ ಅವರು ರಾಜ್ಯದಲ್ಲಿ 5 ವರ್ಷಗಳ ಕಾಲ‌ ಉತ್ತಮ ಆಡಳಿತ ನೀಡಿದರು. ಮಲ್ಲಿಕಾರ್ಜುನ ಖರ್ಗೆ ಸೋಲು ಪಾರ್ಲಿಮೆಂಟ್‌ ಸೋಲಾಗಿದೆ ಎಂದರು.

ಬಡ್ತಿಗೆ ಒತ್ತಾಯ: ಗೃಹರಕ್ಷಕ ದಳ ನೌಕರರಿಗೆ ಆಂಧ್ರಪ್ರದೇಶದಲ್ಲಿ 23 ಸಾವಿರ ರೂ. ಹಾಗೂ ತೆಲಂಗಾಣ 21 ಸಾವಿರ ವೇತನ ನೀಡುತ್ತಿದ್ದಾರೆ ಆದರೆ ಕರ್ನಾಟಕದಲ್ಲಿ 13 ಸಾವಿರ ವೇತನ ನೀಡುವುದು ಯಾವ ನ್ಯಾಯ? ಕೂಡಲೇ ರಾಜ್ಯ ಸರ್ಕಾರ ಅವರ ವೇತನ ಹೆಚ್ಚು ಮಾಡಬೇಕು ಹಾಗೂ ಡಿ ಗ್ರೂಪ್‌ ನೌಕರರಲ್ಲಿ ಪದವೀಧರರು, ರಾಜ್ಯಪ್ರಶಸ್ತಿ ಪುರಸ್ಕೃತರು ಇದ್ದಾರೆ. ಅವರಿಗೆ ಬಡ್ತಿ ನೀಡಬೇಕು ಎಂದು ಒತ್ತಾಯಿಸಿದರು.

ಉಪನಗರ ನಿರ್ಮಾಣವಾಗಲಿ: ಮುಂದಿನ ದಿನಗಳಲ್ಲಿ ಪ್ರತಿಹಳ್ಳಿಹಳ್ಳಿಗಳಿಗೆ ಭೇಟಿ ಅಲ್ಲಿನ ಕುಂದುಕೊರತೆಗಳನ್ನು ಆಲಿಸಿ ಸರ್ಕಾರದ ಗಮನಕ್ಕೆ ತರಲಾಗುವುದು ಅಲ್ಲದೆ ಚಾಮರಾಜನಗರ ನಗರಸಭಾ ವ್ಯಾಪ್ತಿಯ ಎಲ್ಲ ವಾರ್ಡ್‌ಗಳಿಗೂ ಭೇಟಿ ನೀಡಲಾಗುವುದು. ಚಾಮರಾಜನಗರಕ್ಕೆ ತಿ. ನರಸೀಪುರದಿಂದ ಕಾವೇರಿ ನೀರಿನ 2 ನೇ ಹಂತ ಆಗಬೇಕು. ಮೋಳೆಗಳಲ್ಲಿನ ಜನರು ಗುಡಿಸಲಿನಲ್ಲಿ ವಾಸ ಮಾಡುತ್ತಿದ್ದಾರೆ. ಅವರ ಅಭಿವೃದ್ಧಿಯಾಗಬೇಕು. ಜಿಲ್ಲೆಗೆ ಐದು ಸಾವಿರ ಮನೆ ಗಳನ್ನು ನೀಡಬೇಕು. ಬದನಗುಪ್ಪೆ ಹತ್ತಿರ ಉಪನಗರ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದರು.

ವಾಟಾಳ್‌ ಪಕ್ಷದ ಮುಖಂಡರಾದ ದಳಪತಿವೀರತಪ್ಪ, ಕಾರ್‌ನಾಗೇಶ್‌, ಶಿವಲಿಂಗಮೂರ್ತಿ, ಗು.ಪುರುಷೋತ್ತಮ, ಚಿಕ್ಕಲಿಂಗಪ್ಪ, ನಾಗರಾಜಮೂರ್ತಿ, ವರದರಾಜು, ಗೋವಿಂದರಾಜು, ನಾಗರಾಜು ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.