14ಕ್ಕೆ ವಡ್ಡಗೆರೆ ಕೆರೆಗೆ ಕಬಿನಿ ನೀರು
Team Udayavani, Dec 7, 2019, 12:32 PM IST
ಗುಂಡ್ಲುಪೇಟೆ: ಡಿ.14ರಂದು ತಾಲೂಕಿನ ಹುತ್ತೂರು ಕೆರೆಯಿಂದ ವಡ್ಡಗೆರೆ ಕೆರೆಗೆ ಕಬಿನಿ ನೀರು ಹರಿಸಲಾಗುವುದು ಎಂದು ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು.
ತಾಲೂಕಿನ ಕೊಡಸೋಗೆಯಲ್ಲಿ 20 ಲಕ್ಷ ರೂ. ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಹುತ್ತೂರು ಕೆರೆಯಿಂದ ವಡ್ಡಗೆರೆ ಕೆರೆಗೆ ಕಬಿನಿ ನದಿ ಮೂಲದಿಂದ ನೀರು ಹರಿಸುವ ಕಾರ್ಯವನ್ನು ಡಿ.14ರಂದು ಸಚಿವ ಸುರೇಶ್ ಕುಮಾರ್ ನೆರವೇರಿಸಲಿದ್ದಾರೆ. ಜಿಲ್ಲೆಯ ಕೆರೆಗಳಿಗೆ ನದಿ ಮೂಲದ ನೀರು ತುಂಬಿಸಲು ಕಾರಣರಾದ ಸಿಎಂ ಯಡಿಯೂರಪ್ಪ ಅವರಿಂದಲೇ ಚಾಲನೆ ಕೊಡಲು ಉದ್ದೇಶಿಸಿದ್ದರೂ, ದಿನಾಂಕಗಳು ಸಾಧ್ಯವಾಗದ ಹಿನ್ನೆಲೆಯಲ್ಲಿ ಸಚಿವ ಸುರೇಶ್ ಕುಮಾರ್ ಅವರಿಂದ ಚಾಲನೆ ನೀಡಲಾಗುವುದು. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕರೆಸಿ ರೈತರ ಜನತೆಯ ಪರವಾಗಿ ಸನ್ಮಾನಿಸಲಾಗುವುದು ಎಂದರು.
ಪಾಪಿಗಳಿಗೆ ಎಚ್ಚರಿಕೆ ಗಂಟೆ: ಹೈದರಾಬಾದ್ ಮೂಲದ ಅತ್ಯಾಚಾರಿಗಳನ್ನು ಎನ್ಕೌಂಟರ್ ಮಾಡುವ ಮೂಲಕ ಪೊಲೀಸ್ ಅಧಿಕಾರಿ ವಿಶ್ವನಾಥ್ ಸಜ್ಜನರ್ ದುರ್ಜನರಿಗೆ ತಕ್ಕ ಶಾಸ್ತಿ ಮಾಡಿದ್ದಾರೆ. ಇದು ಪಾಪಿಗಳಿಗೆ ಎಚ್ಚರಿಕೆಯ ಗಂಟೆ. ಹತ್ಯೆ ವಿಚಾರದಲ್ಲಿ ವಿಳಂಬವಿಲ್ಲದೆ ನ್ಯಾಯ ದೊರಕಿದಂತಾಗಿದ್ದು, ಅವರ ಕುಟುಂಬಕ್ಕೂ ಸ್ವಲ್ಪವಾದರೂ ಸಮಾಧಾನ ದೊರಕಿದೆ ಎಂದು ಹೇಳಿದರು.
ಈ ವೇಳೆ ಮುಖಂಡ ಕೊಡಸೋಗೆ ಶಿವಬಸಪ್ಪ, ಮಹದೇವ ಪ್ರಸಾದ್, ರಾಜು, ಮಲ್ಲಿಕಾರ್ಜುನ್, ಜಗದೀಶ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು