ತುಂಡಾಗಿ ಬಿದ್ದಿದ್ದ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ರೈತ ಸಾವು:ಕರಕಲಾಗಿ ಬೇರ್ಪಟ್ಟ ರುಂಡ!
Team Udayavani, Apr 19, 2021, 10:20 AM IST
ಚಾಮರಾಜನಗರ: ಜಮೀನಿನಲ್ಲಿ ಹಾದು ಹೋಗಿದ್ದ 11 KV ಹೈಟೆನ್ಷನ ವಿದ್ಯುತ್ ತಂತಿಗೆ ಸಿಲುಕಿ ರೈತನೋರ್ವ ದಾರುಣವಾಗಿ ಮೃತಪಟ್ಟ ಘಟನೆ ತಾಲೂಕಿನ ಕಾಳನಹುಂಡಿ ರಸ್ತೆಯ ಕಟ್ಟೇಪುರ ಬಳಿಯ ಜಮೀನೊಂದರಲ್ಲಿ ನಡೆದಿದೆ.
ಭಾನುವಾರ ರಾತ್ರಿ 9.30ರ ಸುಮಾರಿಗೆ ವೇಲುಸ್ವಾಮಿ (55 ವ) ಎಂಬ ರೈತ ಜಮೀನಿನಲ್ಲಿ ನೀರು ಎತ್ತುವ ಮೋಟಾರ್ ಸ್ವಿಚ್ ಆನ್ ಮಾಡಲು ಹೋಗಿದ್ದಾರೆ. ಪಕ್ಕದಲ್ಲೇ ಹಾದುಹೋಗಿರುವ 11 ಕೆವಿ ವಿದ್ಯುತ್ ತಂತಿ ತುಂಡಾಗಿ ನೇತಾಡುತ್ತಿತ್ತು. ಕತ್ತಲೆಯಲ್ಲಿ ಇದನ್ನು ಗಮನಿಸದೇ, ಅವರ ತಲೆಗೆ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ರುಂಡ ಸುಟ್ಟು ಕರಕಲಾಗಿ ತಂತಿಗೇ ಅಂಟಿಕೊಂಡಿದೆ. ರುಂಡ-ಮುಂಡ ಬೇರೆಯಾಗಿ ಬಿದ್ದಿವೆ. ತಲೆ ಮೂರು ಅಡಿ ಎತ್ತರದ ಲೈನ್ ನಲ್ಲಿ ಸಿಲುಕಿ ನೇತಾಡುತ್ತಿದ್ದರೆ, ದೇಹ ಕೆಳಗಿ ಬಿದ್ದಿದೆ.
ಇದನ್ನೂ ಓದಿ:ಕಂಬಳದ ಪಯಣ ಕೊನೆಗೊಳಿಸಿ ಕಾಲನ ಕರೆಗೆ ಓಗೊಟ್ಟ ‘ಬೋಳಂತೂರು ಕಾಟಿ’
ಸ್ಥಳಕ್ಕೆ ಸೆಸ್ಕ್ ಸಿಬ್ಬಂದಿ, ಪೊಲೀಸರು ಭೇಟಿ ನೀಡಿದ್ದಾರೆ.
ಜಮೀನುಗಳಲ್ಲಿ ಹಾದು ಹೋಗಿರುವ ಹೈಟೆನ್ಷನ್ ವಿದ್ಯುತ್ ತಂತಿಗಳು ನೇತಾಡುತ್ತಿದ್ದರೂ ಅದನ್ನು ನಿರ್ವಹಣೆ ಮಾಡಿ ಎತ್ತಿ ಬಿಗಿ ಮಾಡದ ಕಾರಣ ಇಂಥ ಅವಘಡಗಳು ಸಂಭವಿಸುತ್ತಿದ್ದು, ಘಟನೆಗೆ ಕಾರಣರಾದವರ ವಿರುದ್ದ ಕ್ರಮ ಕೈಗೊಳ್ಳಬೇಕು. ಮೃತ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ