ಕನ್ನಡ ವಿರೋಧಿ ವರ್ತನೆ ವಿರುದ್ಧ ಕರ್ನಾಟಕ ಸೇನಾಪಡೆ ಪ್ರತಿಭಟನೆ


Team Udayavani, Aug 4, 2019, 3:00 AM IST

kannada-vi

ಚಾಮರಾಜನಗರ: ನಗರದ ಇಂಡಿಯನ್‌ ಬ್ಯಾಂಕ್‌ ವ್ಯವಸ್ಥಾಪಕರು ಬ್ಯಾಂಕ್‌ಗೆ ಬರುವ ಗ್ರಾಹಕರನ್ನು ಹಿಂದಿಯಲ್ಲಿ ಮಾತನಾಡಿ ಎನ್ನುವ ಮೂಲಕ ಕನ್ನಡ ವಿರೋಧಿ ವರ್ತನೆ ತೋರಿಸುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು ಬ್ಯಾಂಕ್‌ ಎದುರು ಪ್ರತಿಭಟನೆ ನಡೆಸಿದರು. ನಗರದ ಭ್ರಮರಾಂಬ ಬಡಾವಣೆಯ ಇಂಡಿಯನ್‌ ಬ್ಯಾಂಕ್‌ ಎದುರು ಕರ್ನಾಟಕ ಸೇನಾಪಡೆ ರಾಜ್ಯಾಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಧರಣಿ ನಡೆಸಿದ ಪ್ರತಿಭಟನಾಕಾರರು, ಬ್ಯಾಂಕ್‌ ವ್ಯವಸ್ಥಾಪಕರ ವಿರುದ್ಧ ಧಿಕ್ಕಾರ ಕೂಗಿ ತರಾಟೆಗೆ ತೆಗೆದುಕೊಂಡರು.

ಕರ್ನಾಟಕ ಸೇನಾ ಪಡೆ ರಾಜ್ಯಾಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ನಗರದ ಇಂಡಿಯನ್‌ ಬ್ಯಾಂಕ್‌ನ ವ್ಯವಸ್ಥಾಪಕರು ಬ್ಯಾಂಕ್‌ಗೆ ಬರುವ ಕನ್ನಡಿಗರ ಜೊತೆ ಕನ್ನಡದಲ್ಲಿ ವ್ಯವಹರಿಸುತ್ತಿಲ್ಲ. ಕನ್ನಡದಲ್ಲಿ ಮಾತನಾಡಿದರೆ, ಹಿಂದಿಯಲ್ಲಿ ಉತ್ತರ ನೀಡುತ್ತಾರೆ. ತನಗೆ ಕನ್ನಡ ಅರ್ಥವಾಗುವುದಿಲ್ಲ. ಹಿಂದಿಯಲ್ಲಿ ಮಾತನಾಡಿ ಎಂದು ಒತ್ತಾಯಿಸುತ್ತಿದ್ದಾರೆ. ಕನ್ನಡದಲ್ಲಿ ಮಾತನಾಡಲು ಗ್ರಾಹಕರು ಒತ್ತಾಯಿಸಿದರೆ, ತನಗೆ ಬರುವುದಿಲ್ಲ. ನಮ್ಮ ಪ್ರಧಾನ ಕಚೇರಿಗೆ ದೂರು ನೀಡಿ ಎಂಬ ಉಡಾಫೆ ಉತ್ತರ ನೀಡುತ್ತಾರೆ ಎಂದು ಆರೋಪಿಸಿದರು.

ಗಡಿ ಕನ್ನಡಿಗರ ಪ್ರದೇಶವಾದ ಚಾಮರಾಜನಗರದಲ್ಲಿ ಇಂಡಿಯನ್‌ ಬ್ಯಾಂಕ್‌ ವ್ಯವಸ್ಥಾಪಕರು ಬ್ಯಾಂಕ್‌ಗೆ ಬರುವ ಗ್ರಾಹಕರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಕನ್ನಡ ಭಾಷೆ ಮಾತನಾಡುತ್ತಿಲ್ಲ. ಕನ್ನಡ ಭಾಷೆಗೆ ಅಗೌರವ ತರುವ ಕೆಲಸ ಮಾಡುತ್ತಿದ್ದಾರೆ. ಈ ವ್ಯವಸ್ಥಾಪಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಲೀಡ್‌ ವ್ಯವಸ್ಥಾಪಕರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲಾಡಳಿತ ಇಂಡಿಯನ್‌ ಬ್ಯಾಂಕ್‌ ವ್ಯವಸ್ಥಾಪಕರು, ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕರ ವಿರುದ್ಧ ಕೂಡಲೇ ಕ್ರಮಕೈಗೊಳ್ಳಬೇಕು. ಇನ್ನು ಒಂದು ವಾರದೊಳಗೆ ಬ್ಯಾಂಕ್‌ ವ್ಯವಸ್ಥಾಪಕರನ್ನು ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ಸೇನಾಪಡೆ ಗೌರವ ಅಧ್ಯಕ್ಷ ಶಾ.ಮುರಳಿ ಮಾತನಾಡಿ, ಈ ಬ್ಯಾಂಕ್‌ ವ್ಯವಸ್ಥಾಪಕರು ಕರ್ನಾಟಕ ಶಾಖೆಯಲ್ಲಿ ಕೆಲಸ ಮಾಡುವಾಗ, ಕನ್ನಡ ಕಲಿಯಬೇಕು. ಗ್ರಾಹಕರೊಡನೆ ಅವರ ಭಾಷೆಯಲ್ಲಿ ವ್ಯವಹರಿಸಬೇಕು. ಅದು ಬಿಟ್ಟು ತಾನು ಉತ್ತರಪ್ರದೇಶದಿಂದ ಬಂದಿರುವುದಾಗಿಯೂ, ಹಿಂದಿಯಲ್ಲೇ ಮಾತನಾಡುವುದಾಗಿ ಬೇಜವಾಬ್ದಾರಿತನದಿಂದ ನಡೆದುಕೊಳ್ಳುತ್ತಿದ್ದಾರೆಂದು ಟೀಕಿಸಿದರು.

ಕೇಂದ್ರ-ರಾಜ್ಯ ಸರ್ಕಾರ ವಿವಿಧ ಯೋಜನೆಗಳ ಸಾಲ ಸೌಲಭ್ಯಗಳನ್ನು ಬ್ಯಾಂಕ್‌ ಮೂಲಕ ನೀಡಲಾಗುತ್ತಿದೆ. ಅದೇ ರೀತಿಯಲ್ಲೂ ಇಂಡಿಯನ್‌ ಬ್ಯಾಂಕ್‌ಗೆ ಸಹಾಯಧನ ವರ್ಗಾವಣೆ ಮಾಡಿದ್ದರೂ ಬ್ಯಾಂಕ್‌ ವ್ಯವಸ್ಥಾಪಕರು ಫ‌ಲಾನುಭವಿಗಳಿಗೆ ಸಹಾಯಧನ ನೀಡದೇ ಸತಾಯಿಸುತ್ತಿದ್ದಾರೆ. ಇದರಿಂದ ಫ‌ಲಾನುಭವಿಗಳಿಗೆ ತುಂಬಾ ಸಮಸ್ಯೆಯಾಗಿದೆ. ಬ್ಯಾಂಕ್‌ಗೆ ಬರುವ ಗ್ರಾಹಕರೊಂದಿಗೆ ಅತ್ಯಂತ ಬೇಜಾವಾಬ್ದಾರಿತನದಿಂದ ನಡೆದುಕೊಳ್ಳುತ್ತಿದ್ದಾರೆ.

ಜಿಲ್ಲಾಡಳಿತ ಕೂಡಲೇ ಇಂಡಿಯನ್‌ ಬ್ಯಾಂಕ್‌ ವ್ಯವಸ್ಥಾಪಕರನ್ನು ವರ್ಗಾಯಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ನಿಜಧ್ವನಿ ಗೋವಿಂದರಾಜು, ಗು.ಪುರುಷೋತ್ತಮ, ನಗರಸಭಾ ಮಾಜಿ ಸದಸ್ಯ ಸಿ.ಕೆ.ಮಂಜುನಾಥ್‌, ಸ್ವಾಮಿ, ಬಿ.ಎಲ್‌.ಮಹದೇವಸ್ವಾಮಿ, ಶಿವಣ್ಣ, ಗುಡ್ಡಯ್ಯ, ಕೇಶವ, ವೀರಭದ್ರ, ತಾಂಡವಮೂರ್ತಿ, ರವಿಚಂದ್ರಪ್ರಸಾದ್‌ ಕಹಳೆ, ಚಾ.ರಾ.ಕುಮಾರ್‌, ದೊರೆ, ಪಾಪು ಇದ್ದರು.

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ

Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ

Kollegala; ಪ್ರಧಾನಿ ಮೋದಿಯವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ

Kollegala; ಪ್ರಧಾನಿ ಮೋದಿಯವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ

ಸತ್ತೇಗಾಲ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದ 1.58 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ

ಸತ್ತೇಗಾಲ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದ 1.58 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ

1-weeeqwe

ಯಳಂದೂರು: ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ ಅಕ್ರಮ ಮದ್ಯ ವಶ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.