karnataka election: ಗುಂಡ್ಲುಪೇಟೆ ಬಿಜೆಪಿ ಅಭ್ಯರ್ಥಿ ನಿರಂಜನಕುಮಾರ್ ನಾಮಪತ್ರ ಸಲ್ಲಿಕೆ
Team Udayavani, Apr 17, 2023, 5:13 PM IST
ಗುಂಡ್ಲುಪೇಟೆ(ಚಾಮರಾಜನಗರ): ಪಟ್ಟಣದ ತಾಲೂಕು ಕಚೇರಿ ಸಭಾ ಭವನದಲ್ಲಿ ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಸಿ.ಎಸ್. ನಿರಂಜನಕುಮಾರ್ ಇಂದು ನಾಮಪತ್ರ ಸಲ್ಲಿಕೆ ಮಾಡಿದರು.
ಚುನಾವಣೆ ಅಧಿಕಾರಿ ಮಲ್ಲಿಕಾರ್ಜುನ ಅವರಿಗೆ ಬಿಜೆಪಿ ಅಭ್ಯರ್ಥಿ ನಿರಂಜನಕುಮಾರ್ ಮೂರು ಸೆಟ್ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಶ್ರೀಕಂಠಪ್ಪ, ಎನ್.ಮಲ್ಲೇಶ್, ವಕೀಲ ಶಿವಣ್ಣ ಹಾಜರಿದ್ದರು.
ಅದ್ದೂರಿ ಮೆರವಣಿಗೆ
ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂಗಣದಿಂದ ತಮ್ಮ ಅಪಾರ ಬೆಂಬಲಿಗರೊಂದಿಗೆ ರಾಷ್ಟ್ರೀಯ ಹೆದ್ದಾರಿ ಮೂಲಕ ಬೃಹತ್ ಮೆರವಣಿಗೆ ನಡೆಸುವ ಈ ವೇಳೆ ಬಿಜೆಪಿ ಅಭ್ಯರ್ಥಿ ನಿರಂಜನಕುಮಾರ್ ಶಕ್ತಿ ಪ್ರದರ್ಶನ ನಡೆಸಿದರು.