Bengaluru Bandh: ಗಡಿಯಲ್ಲಿ ಕರ್ನಾಟಕ ಪ್ರವೇಶಿಸುವ ತಮಿಳುನಾಡು ನೋಂದಣಿ ವಾಹನ ನಿರ್ಬಂಧ
Team Udayavani, Sep 26, 2023, 9:43 AM IST
ಗುಂಡ್ಲುಪೇಟೆ(ಚಾಮರಾಜನಗರ): ಕಾವೇರಿ ಕಿಚ್ಚು ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದ್ದು, ಇಂದು(ಸೆ.26) ಬೆಂಗಳೂರು ಬಂದ್ ಗೆ ವಿವಿಧ ಸಂಘಟನೆಗಳು ಕರೆಕೊಟ್ಟ ಹಿನ್ನಲೆ ತಮಿಳುನಾಡು ಸರ್ಕಾರ ಟಿಎನ್(ತಮಿಳುನಾಡು) ನೋಂದಣಿಯ ವಾಹನಗಳು ಕರ್ನಾಟಕಕ್ಕೆ ತೆರಳದಂತೆ ಗಡಿಯಲ್ಲಿ ನಿರ್ಬಂಧ ಹೇರಿದೆ.
ಬೆಂಗಳೂರು ಬಂದ್ ಹಿನ್ನಲೆ ಮುನ್ನೆಚ್ವರಿಕೆ ಕ್ರಮವಾಗಿ ಗುಂಡ್ಲುಪೇಟೆ ತಾಲೂಕಿನ ಕರ್ನಾಟಕ-ತಮಿಳುನಾಡು ಗಡಿ ಕೆಕ್ಕನಹಳ್ಳ ಚೆಕ್ ಪೋಸ್ಟ್ ಮೂಲಕ ಸಂಚಾರ ಮಾಡುವ ಎಲ್ಲಾ ರೀತಿಯ ತಮಿಳುನಾಡು ವಾಹನ ಸಂಚಾರಕ್ಕೆ ಅಲ್ಲಿನ ಜಿಲ್ಲಾಡಳಿತ ನಿರ್ಬಂಧ ಹಾಕಿದ್ದು, ಗಡಿಗೆ ಬರುವ ತಮಿಳುನಾಡು ನೋಂದಣಿ ವಾಹನಗಳನ್ನು ವಾಪಸ್ ಕಳುಹಿಸಲಾಗುತ್ತಿದೆ.
ಬೆಳಗ್ಗೆ 8:30 ರವರೆಗೆ ಸಂಪೂರ್ಣ ವಾಹನ ನಿರ್ಬಂಧ: ಸೆ.26ರ ಬೆಳಗ್ಗೆ 6 ಗಂಟೆಯಿಂದ 8:30ರವರೆಗೆ ಕರ್ನಾಟಕ-ತಮಿಳುನಾಡಿ ಗಡಿಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿತ್ತು. ಮಾಹಿತಿ ಅರಿವಿಲ್ಲದೆ ಹಲವು ವಾಹನ ಸವಾರರು ಗುಂಡ್ಲುಪೇಟೆ ಮೂಲಕ ಕರ್ನಾಟಕದ ಗಡಿ ಕೆಕ್ಕನಹಳ್ಳಿ ಚೆಕ್ ಪೋಸ್ಟ್ ಗೆ ತೆರಳಿ ವಾಪಸ್ಸಾದರು. ಇನ್ನು ತಮಿಳುನಾಡಿಗೆ ತೆರಳುವ ತರಕಾರಿ ತುಂಬಿದ ಸರಕು ಸಾಗಣೆ ಲಾರಿಗಳು ಚೆಕ್ ಪೋಸ್ಟ್ ಆಸುಪಾಸು ಕಿ.ಮೀ ದೂರದವರೆಗೆ ನಿಂತಿದ್ದವು.
ಬೆಳಗ್ಗೆ 8:30ರ ನಂತರ ಕರ್ನಾಟಕದಿಂದ ಸಂಚಾರ ಮಾಡುವ ಎಲ್ಲಾ ವಾಹನಗಳ ಸಂಚಾರಕ್ಕೆ ತಮಿಳುನಾಡು ಸರ್ಕಾರ ಅನುವು ಮಾಡಿದ ಹಿನ್ನಲೆ ವಾಹನ ಸಂಚಾರ ಯಥಾಸ್ಥಿತಿಗೆ ಮರಳಿತು.
ಸ್ಥಳದಲ್ಲಿ ಪೊಲೀಸರ ಮೊಕ್ಕಾಂ: ಕರ್ನಾಟಕ-ತಮಿಳುನಾಡಿ ಗಡಿ ಕೆಕ್ಕನಹಳ್ಳ ಚೆಕ್ ಪೋಸ್ಟ್ ಬಂದ್ ಮಾಡಿದ ಹಿನ್ನಲೆ ಗುಂಡ್ಲುಪೇಟೆ ಪೊಲೀಸ್ ಇನ್ಸ್ ಪೆಕ್ಟರ್ ಪರಶಿವಮೂರ್ತಿ ನೇತೃತ್ವದ ತಂಡ ಸ್ಥಳದಲ್ಲಿ ಮೊಕ್ಕಾಂ ಹೂಡಿ, ಪರಿಸ್ಥಿತಿ ತಿಳಿಗೊಳಿಸಿ ವಾಹನ ಸುಗಮ ಸಂಚಾರಕ್ಕೆ ಅನುವು ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ