ನಗರಾಭಿವೃದ್ಧಿ ಕನಸು ಕಂಡಿದ್ದ ಕೆಂಪೇಗೌಡರು

ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಅಭಿಮತ

Team Udayavani, Jun 28, 2019, 7:34 AM IST

CN-TDY-1..

ನಗರದಲ್ಲಿ ಜಿಲ್ಲಾಡಳಿತ, ಕನ್ನಡ ಸಂಸ್ಕೃತಿ ಇಲಾಖೆಯಿಂದ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯ ಕ್ರಮದಲ್ಲಿ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಚಾಮರಾಜನಗರ: ನಾಡಪ್ರಭು ಎಂದೇ ಖ್ಯಾತರಾದ ಕೆಂಪೇಗೌಡರು ಅಂದಿನ ಕಾಲದಲ್ಲೇ ನಗರನಿರ್ಮಾಣ ಮಾಡುವ ಕುರಿತು ಆಲೋಚನೆ ಮಾಡಿದ್ದರು, ಅವರು ಬೆಂಗಳೂರು ಕಟ್ಟುವುದಕ್ಕೆ ಮಾತ್ರ ಸೀಮಿತವಾಗಿರಲಿಲ್ಲ. ನಾಡುನುಡಿಯ ರಕ್ಷಣೆಯೇ ಆಶಯವಾಗಿತ್ತು ಎಂದು ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಹೇಳಿದರು.

ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಏರ್ಪಡಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೆಂಪೇ ಗೌಡರು ದೂರದೃಷ್ಟಿಯುಳ್ಳ ಆಡಳಿತಗಾರ ರಾಗಿದ್ದರು. ಅವರು ಕಟ್ಟಿದ ಬೆಂಗಳೂರು ಇಂದು ಜಗದ್ವಿಖ್ಯಾತ ನಗರವಾಗಿ ಬೆಳೆದಿದೆ. ಕನ್ನಡಿಗರ ಹೆಮ್ಮೆಯ ನಾಯಕ ಕೆಂಪೇಗೌಡರು ಎಂದು ಬಣ್ಣಿಸಿದರು.

ವಿಶ್ವದಲ್ಲೇ ಪ್ರಮುಖ ಸಿಲಿಕಾನ್‌ ಸಿಟಿ: ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಉಪನಿರ್ದೇಶಕಿ, ಸಾಹಿತಿ ಡಾ.ಟಿ.ಸಿ.ಪೂರ್ಣಿಮಾ ಮಾತನಾಡಿ, ನಗರಾ ಭಿವೃ ದ್ಧಿಯ ಮೊದಲ ಕನಸು ಕಂಡವರು ನಾಡಪ್ರಭು ಕೆಂಪೇಗೌಡರು. ತಮ್ಮ 9 ನೇ ವಯಸ್ಸಿನಲ್ಲೇ ಗುರುಕುಲ ವಿದ್ಯಾಭ್ಯಾಸ ಪಡೆದರು, 1531 ರಲ್ಲಿ ಪಟ್ಟಕ್ಕೆ ಬಂದ ನಂತರ ಒಂದು ನಗರವನ್ನು ಹೇಗೆ ನಿರ್ಮಾಣ ಮಾಡಬೇಕು ಎಂದು ಆಲೋಚನೆ ಮಾಡಿ, 4 ದಿಕ್ಕು ಗಳಲ್ಲಿ ಗಡಿರೇಖೆ ನಿರ್ಮಿಸಿ ಹೊನ್ನೇರುಕಟ್ಟಿ ಭೂಮಿ ಪೂಜೆ ಮಾಡಿದರು, ಅಂದು ಮಾಡಿದ ಭೂಮಿ ಪೂಜೆಯ ಫಲವಾಗಿ ಸಣ್ಣ ಗ್ರಾಮವಾಗಿದ್ದ ಬೆಂದಕಾ ಳೂರು ಇಂದು ಬೃಹದಾಕಾರವಾಗಿ ಗಡಿಯನ್ನು ಮೀರಿ ವಿಶಾಲವಾಗಿ ಬೆಳೆದು, ವಿಶ್ವದಲ್ಲೇ ಸಿಲಿಕಾನ್‌ ಸಿಟಿ ಎಂದು ಖ್ಯಾತಿಗಳಿಸಿದೆ ಎಂದರು.

ಜಾತ್ಯತೀತ ಮನೋಭಾವ: ಕುವೆಂಪು ಹೇಗೆ ಜಾತ್ಯ ತೀತ ನಿಲುವು ಹೊಂದಿದ್ದರೋ ಆ ಮಾದರಿಯಲ್ಲಿ ಕೆಂಪೇಗೌಡರು ಜಾತ್ಯತೀತ ಮನೋಭಾವ ಹೊಂದಿ ದ್ದು, ಕಸುಬುಗಳಿಗೆ ಆಧಾರವಾಗಿ ಅಂದು ವ್ಯಾಪಾರ ಮಾಡಲು ಅನುಕೂಲವಾಗುವಂತೆ 54 ಪೇಟೆಗಳನ್ನು ಸ್ಥಾಪಿಸಿದರು ಎಂದರು.

ಸ್ವಯಂಕೃತ ಅಪರಾಧ: ಕುಡಿಯುವ ನೀರಿಗೆ ಅನೂ ಕೂಲವಾಗುವಂತೆ ಸಾವಿರಾರು ಕೆರೆಕಟ್ಟೆಗಳನ್ನು ನಿರ್ಮಾಣ ಮಾಡಿದರು, ಕೆರೆಕಟ್ಟೆ ಇದ್ದ ಜಾಗದಲ್ಲಿ ಬಸ್‌ನಿಲ್ದಾಣ, ಬೃಹತ್‌ಕಟ್ಟಡಗಳು ತಲೆಎತ್ತಿದ್ದು, ಇಂದು ಬೆಂಗಳೂರಿನಲ್ಲಿ ಕುಡಿಯುವ ಸಮಸ್ಯೆ ಎದುರಾಗಿದ್ದು, ಇದು ಪ್ರಕೃತಿ ನಿರ್ಮಿತ ಬರವಲ್ಲ. ಇದು ನಾವೇ ತಂದುಕೊಂಡ ಸ್ವಯಂಕೃತ ಅಪರಾಧ ಎಂದು ವಿಷಾದಿಸಿದರು.

ವಿಶ್ವದ ಗಮನ ಸೆಳೆದ ಬೆಂಗಳೂರು: ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್‌.ಲತಾಕುಮಾರಿ ಮಾತನಾಡಿ, ಕರ್ನಾಟಕದಲ್ಲಿ ಅನೇಕ ರಾಜಮಹಾ ರಾಜರು ಆಳಿಹೋಗಿದ್ದಾರೆ, ಆದರೆ ಅವರ ಪೈಕಿ ಮುಂದಿನ ದಿನಗಳಲ್ಲಿ ಯಾವರೀತಿ ಯೋಜನೆ ಹಾಕಿಕೊಳ್ಳಬೇಕು ಎಂಬುದನ್ನು 15 ನೇ ಶತಮಾನದಲ್ಲೇ ಕೆಂಪೇಗೌಡರು ಕಂಡುಕೊಂಡಿದ್ದರು. ಇದರ ಫಲವೇ ಬೆಂಗಳೂರು ನಗರ ಕರ್ನಾಟಕ ರಾಜಧಾನಿಯಾಗಿ ಜಗತ್ತಿನ ಗಮನಸೆಳೆಯುತ್ತಿದೆ ಎಂದರು.

ದೂರದೃಷ್ಟಿ ಹೊಂದಿದ್ದ ನಾಡಪ್ರಭು ಕೆಂಪೇಗೌಡ: ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಮಾತನಾಡಿ, ಕೆಂಪೇಗೌಡರು ಪಾಳೇ ಗಾರರಾಗಿದ್ದು, ಅನೇಕ ಕೆರೆಕಟ್ಟೆ ಕಟ್ಟುವ ಮೂಲಕ ಮುಂಬರುವ ದಿನಗಳಲ್ಲಿ ಏನಾ ದರೂ ಬದಲಾವಣೆ ಯಾಗಬಹುದು ಎಂಬ ದೂರ ದೃಷ್ಟಿಕೋನ ಹೊಂದಿದ್ದರು. ಅದಕ್ಕೆ ಮುನ್ನುಡಿ ಯಾಗಿಯೇ ಅವರು ನಿರ್ಮಿಸಿದ ಬೆಂಗಳೂರು ನಗರ ವಿಶಾಲವಾಗಿ ಬೆಳೆದು, ಇಡೀ ಪ್ರಪಂಚದ ಗಮನಸೆಳೆ ಯುತ್ತಿದೆ, ನಗರಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅವರ ಚಿಂತನೆಗಳನ್ನು ಅಳವಡಿಸಿಕೊಳ್ಳುವುದು ಪ್ರಸ್ತುತದಲ್ಲಿ ಸೂಕ್ತ ಎಂದರು.

ಸನ್ಮಾನ: ಅಂತಾರಾಷ್ಟ್ರೀಯ ಕಿಕ್‌ಬಾಕ್ಸಿಂಗ್‌ ಪಂದ್ಯದಲ್ಲಿ ಚಿನ್ನದಪದಕ ಪಡೆದ ಪಣ್ಯದಹುಂಡಿ ಗ್ರಾಮದ ಆರ್‌.ವಂಶಿ, ಪ್ರಸಕ್ತಸಾಲಿನ ಎಸ್‌ಎಸ್‌ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳಿಸಿದ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಎಎಸ್ಪಿ ಅನಿತಾ, ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಪುಟ್ಟಸ್ವಾಮಿಗೌಡ, ಜಿಪಂ ಸದಸ್ಯ ಸಿ.ಎನ್‌.ಬಾಲರಾಜು, ತಾಪಂ ಉಪಾಧ್ಯಕ್ಷ ಬಸವಣ್ಣ, ಸದಸ್ಯ ಮಹದೇವಶೆಟ್ಟಿ, ಹಿಂದುಳಿದ ವರ್ಗಗಳ ಕಲ್ಯಾಣಇಲಾಖೆ ಉಪನಿರ್ದೇಶಕ ಸೋಮಶೇಖರ್‌, ಕನ್ನಡ ಮತ್ತು ಸಂಸ್ಕೃತಿಇಲಾಖೆ ಸಿಬ್ಬಂದಿ, ನಾನಾಗ್ರಾಮಗಳ ಒಕ್ಕಲಿಗ ಸಂಘದ ಮುಖಂಡರು, ಗ್ರಾಮಸ್ಥರು ಹಾಜರಿದ್ದರು.

ಮೆರವಣಿಗೆ: ಇದಕ್ಕೂ ಮೊದಲು ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ಅವರ ಭಾವಚಿತ್ರದ ಮೆರವಣಿಗೆ ನಡೆಯಿತು ನಗರದ ಚಾಮರಾಜೇಶ್ವರದೇವಸ್ಥಾನದ ಆವರಣದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಒಕ್ಕಲಿಗ ಸಂಘದ ಪದಾಧಿಕಾರಿಗಳು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

ಡೊಳ್ಳುಕುಣಿತ, ಬ್ಯಾಂಡ್‌ಸೆಟ್ ಕಲಾತಂಡ ಗಳೊಂದಿಗೆ ಮೆರವಣಿಗೆ ಜೋಡಿರಸ್ತೆ ಮುಖಾಂತರ ವೇದಿಕೆ ಕಾರ್ಯಕ್ರಮ ಆಯೋಜಿಸಿದ್ದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಸಮಾವೇಶಗೊಂಡಿತು.

ಕಾರ್ಯಕ್ರಮಕ್ಕೂ ಮುನ್ನ ಜಾನಪದ ಗಾಯಕರಾದ ಅರುಣ್‌ಕುಮಾರ್‌ ಹಾಗೂ ಸಿ.ಎಂ.ನರಸಿಂಹಮೂರ್ತಿ ಭಾವಗೀತೆಗಳ ಕಾರ್ಯಕ್ರಮ ನಡೆಸಿಕೊಟ್ಟರು.

ಟಾಪ್ ನ್ಯೂಸ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.