ಉಮೇದುವಾರ್‌ ಶುರು; ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರಿಂದ ಕಲ್ಲು ತೂರಾಟ


Team Udayavani, Mar 21, 2017, 3:45 AM IST

Ban21031701Medn.jpg

ಗುಂಡ್ಲುಪೇಟೆ: ಸಚಿವ ಮಹದೇವಪ್ರಸಾದ್‌ರವರ ನಿಧನದಿಂದ ತೆರವಾಗಿರುವ ಗುಂಡ್ಲುಪೇಟೆ ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆಯಾದ ಮೊದಲು ದಿನವೇ ಹಿಂಸಾರಂಭ ಪಡೆದುಕೊಂಡಿದೆ. ನಾಮಪತ್ರ ಸಲ್ಲಿಕೆ ವೇಳೆ ತಾಲೂಕು ಕಚೇರಿ ಮುಂಭಾಗದಲ್ಲಿ ನೆರೆದಿದ್ದ ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಕಲ್ಲು ತೂರಾಟ ನಡೆಸಿದರು. ಪರಿಣಾಮವಾಗಿ ಮೂವರು ಪೊಲೀಸರು ಸೇರಿ ಏಳು ಮಂದಿ ಗಾಯಗೊಂಡಿದ್ದಾರೆ.

ಬೆಳಗ್ಗೆ 11 ಗಂಟೆಗೆ ಬಿಜೆಪಿ ಅಭ್ಯರ್ಥಿ ಸಿ.ಎಸ್‌.ನಿರಂಜನಕುಮಾರ್‌ ಮತ್ತು ಮಧ್ಯಾಹ್ನ 12.30ಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಡಾ.ಗೀತಾ ಮಹದೇವಪ್ರಸಾದ್‌ರಿಗೆ ನಾಮಪತ್ರ ಸಲ್ಲಿಸಲು ಸಮಯ ನಿಗದಿಯಾಗಿತ್ತು. ಬಿಜೆಪಿ ಅಭ್ಯರ್ಥಿ ನಿರಂಜನಕುಮಾರ್‌ ಮೆರವಣಿಗೆ ನಡೆಸಿ ಬಹಿರಂಗ ಸಭೆ ಮುಗಿಸಿಕೊಂಡು ತಾಲೂಕು ಕಚೇರಿಗೆ ಬರುವ ವೇಳೆಗೆ 12.10 ಆಗಿತ್ತು. ಈ ಸಮಯಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಡಾ|ಗೀತಾ ಮಹದೇವಪ್ರಸಾದ್‌ ನಾಮಪತ್ರ ಸಲ್ಲಿಸಲು ತಾಲೂಕು ಕಚೇರಿ ಕಡೆಗೆ ಸಾಗುತ್ತಿರುವ ಮಾಹಿತಿ ಬಂದಿತು. ಆಗ ಬಿಜೆಪಿ ಮುಖಂಡರು ತಾಲೂಕು ಕಚೇರಿಗೆ ಹೋಗಿ ನಾಮಪತ್ರ ಸಲ್ಲಿಸಿ ಹೊರಬಂದರು. ಅದೇ ಸಮಯಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಗೀತಾರವರು ತಮ್ಮ ಅಪಾರ ಬೆಂಬಲಿಗರೊಂದಿಗೆ ತಾಲೂಕು ಕಚೇರಿ ಹತ್ತಿರ ಬಂದಿದ್ದರು. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ತಾಲೂಕು ಕಚೇರಿ ಎದುರು ಮುಖಾಮುಖೀಯಾದರು.

ಈ ಸಮಯದನ್ನು ದುರುಪಯೋಗಪಡಿಸಿಕೊಂಡ ದುಷ್ಕರ್ಮಿಗಳು ಕಲ್ಲು, ಚಪ್ಪಲಿ ತೂರಿದ್ದಾರೆ. ಇದರಿಂದ ವ್ಯಗ್ರಗೊಂಡ ಎರಡೂ ಪಕ್ಷದ ಕಾರ್ಯಕರ್ತರು ಪರಸ್ಪರ ಕಲ್ಲು, ಚಪ್ಪಲಿ ತೂರಿದರು. ಇದನ್ನು ಕಂಡ ಪೊಲೀಸರು ಮೊದಲು ಶಾಂತಿಯುತವಾಗಿ ಪರಿಸ್ಥಿತಿಯನ್ನು ನಿಭಾಯಿಸಲು ಪ್ರಯತ್ನಿಸಿದರಾದರೂ ಉದ್ರಿಕ್ತರು ನಿಯಂತ್ರಣಕ್ಕೆ ಬರಲಿಲ್ಲ. ಆಗ ಪೊಲೀಸರು ಲಘುಲಾಠಿ ಪ್ರಹಾರ ನಡೆಸಿದರು. ಈ ಮಧ್ಯೆ ಪೊಲೀಸರು ಕಡೆಗೂ ದುಷ್ಕರ್ಮಿಗಳು ಕಲ್ಲು ತೂರಿದರು. ಪರಿಣಾಮ ಎಎಸ್‌ಐ ನಾಗರಾಜು, ಪೇದೆಗಳಾದ ಮಂಜುನಾಥಸ್ವಾಮಿ, ನಾಗರಾಜು ಗಾಯಗೊಂಡುರು. ಪರಿಸ್ಥಿತಿ ಕೈಮೀರುವುದನ್ನು ಅರಿತ ಪೊಲೀಸರು ಲಾಠಿಪ್ರಹಾರ ನಡೆಸಿ ಜನರನ್ನು ಚದುರಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.

ಘಟನೆಯಲ್ಲಿ ಬಿಜೆಪಿ ಕಾರ್ಯಕರ್ತರೆನ್ನಲಾದ ನಾಲ್ವರು ಗಾಯಗೊಂಡಿದ್ದು, ಇವರನ್ನು ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.