ತಿದ್ದುಪಡಿ ಕಾಯ್ದೆಗೆ ಕಿಸಾನ್ ಸಂಘ ವಿರೋಧ
Team Udayavani, Aug 4, 2020, 8:20 AM IST
ಯಳಂದೂರು: ರಾಜ್ಯ ಸರ್ಕಾರದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ರೈತರ ಮರಣ ಶಾಸನವಾಗಿದೆ. ಇದನ್ನು ಕೂಡಲೇ ರದ್ದುಮಾಡಬೇಕು ಎಂದು ಭಾರತೀಯ ಕಿಸಾನ್ ಸಂಘದ ಸದಸ್ಯರು ಉಪತಹಶೀಲ್ದಾರ್ ವೈ.ಎಂ. ನಂಜಯ್ಯ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
ಸಂಘದ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, 1961ರ ಭೂ ಸುಧಾರಣಾ ಕಾಯ್ದೆಯಲ್ಲಿರುವ 79 ಎಸಿಬಿ ಮತ್ತು 80ನೇ ಕಾಲಂಗಳನ್ನು ರದ್ದುಗೊಳಿಸಿ, ಕೃಷಿ ಭೂಮಿಯ ಖರೀದಿ ಮಿತಿಯನ್ನು ಹೆಚ್ಚುಗೊಳಿಸುವ ಕಲಂ 63ಕ್ಕೆ ಬದಲಾವಣೆಯನ್ನು ತರುತ್ತಿರುವ ಕ್ರಮ ಸರಿಯಾಗಿಲ್ಲ. ಈ ನಿರ್ಧಾರದಿಂದ ಕೃಷಿ ಕ್ಷೇತ್ರ ಸರ್ವನಾಶವಾಗುತ್ತದೆ ಎಂದರು.
ರೈತರಿಗೆ ಕೋವಿಡ್ ಸಂಕಷ್ಟ: ಕೋವಿಡ್ ಸಂಕಷ್ಟದಿಂದ ರೈತರು ಪರದಾಡುತ್ತಿದ್ದಾರೆ. ಮಾನವ ಕುಲವೇ ತತ್ತರಿಸಿರುವ ಇಂತಹ ಸಂದರ್ಭದಲ್ಲಿ ರೈತರ ಮರಣ ಶಾಸಕನವಾಗಿರುವ ಈ ಕಾನೂನು ಜಾರಿಯಾದರೆ, ಗ್ರಾಮೀಣ ಭಾಗದ ರೈತರು ಬೀದಿಗೆ ಬೀಳಲಿದ್ದಾರೆ. ಉಳ್ಳವರ ಪಾಲಿಗೆ ಜಮೀನು ಸೇರಲಿದೆ. ಈ ಬಗ್ಗೆ ಸರ್ಕಾರ ಕೃಷಿ ಪರಿಣಿತರ ರೈತರ ಸಲಹೆಗಳನ್ನು ಪಾಲಿಸದೆ ಏಕಾಏಕಿ ನಿರ್ಧಾರ ಮಾಡಿರುವುದು ಸರಿಯಲ್ಲ. ಇದಕ್ಕೆ ಸದನದ ಕಲಾಪಗಳೂ ಇಲ್ಲದ ಕಾಲದಲ್ಲಿ ವಿಷಯ ಚರ್ಚೆಗೊಳ್ಳದೆ ನಿರ್ಧಾರ ಮಾಡಿರುವುದು ಸರಿಯಾದ ಕ್ರಮವಲ್ಲ. ಕೂಡಲೇ ಇದನ್ನು ಸರ್ಕಾರ ಕೈಬಿಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಉಪ ತಹಶೀಲ್ದಾರ್ ವೈ.ಎಂ.ನಂಜಯ್ಯರಿಗೆ ಮನವಿ ಸಲ್ಲಿಸಲಾಯಿತು. ಸಂಘದ ಹೋಬಳಿ ಅಧ್ಯಕ್ಷ ನಾಗಪ್ಪ, ಶಾಂತರಾಜು, ಚೇತನ್, ಸೋಮಣ್ಣ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್ ಟಿಕೆಟ್?
Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು
Lok Sabha Poll 2024: ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಕ್ಷೇತ್ರದಲ್ಲಿ ಈಗ ಬಿಜೆಪಿ ಪ್ರಾಬಲ್ಯ
Chamarajanagar: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್; ಪ್ರಯಾಣಿಕರಿಗೆ ಗಾಯ
ಚಾಮರಾಜನಗರಕ್ಕೆ ಬಂದಷ್ಟೂ ನನ್ನ ಅಧಿಕಾರ ಗಟ್ಟಿಯಾಗುತ್ತೆ: ಸಿದ್ದರಾಮಯ್ಯ