Kollegala: ಕಾಡು ಕುರಿ ಬೇಟೆಯಾಡಿದವನ ಬಂಧನ; ತಲೆಮರೆಸಿಕೊಂಡಿರುವ ಇನ್ನೋರ್ವ
Team Udayavani, Oct 19, 2023, 8:39 PM IST
ಕೊಳ್ಳೇಗಾಲ: ಅರಣ್ಯ ಪ್ರದೇಶದಲ್ಲಿ ಕಾಡು ಕುರಿಯನ್ನು ಬೇಟೆಯಾಡಿದ್ದ ಓರ್ವ ವ್ಯಕ್ತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ತಾಲೂಕಿನ ಜಾಗೇರಿ ಅರಣ್ಯ ಪ್ರದೇಶದಲ್ಲಿ ಗುರುವಾರ ಬಂಧಿಸಿದ್ದಾರೆ.
ತಾಲೂಕಿನ ಜಾಗೇರಿ ಗ್ರಾಮದ ನಿವಾಸಿ ಧೋಮಿದಿನ್ ಬಂಧಿತ ಆರೋಪಿ. ಮತ್ತೋರ್ವ ಆರೋಪಿ ಜಪಪಾಕ್ಯಂ ತಲೆಮರೆಸಿ ಕೊಂಡಿದ್ದಾನೆ.
ಬಂಧಿತರಿಂದ ಚರ್ಮ, ಮಚ್ಚು, ಚೂರಿ, ತಲೆ ಬ್ಯಾಟರಿ, ಒಂದು ನಾಡಬಂದೂಕನ್ನು ವಶಪಡಿಸಿಕೊಂಡಿದ್ದಾರೆ..
ಆರೋಪಿಗಳುಜಾಗೇರಿಯ ಅರಣ್ಯ ಪ್ರದೇಶದ ದೊಡ್ಡ ಮಾಕಳಿಯಲ್ಲಿ ಭೇಟೆಯಾಡಿ ಅದರ ಮಾಂಸವನ್ನು ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿಯ ಮೇರೆಗೆ ಅರಣ್ಯ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಈ ಸಂಬಂಧ ಅರಣ್ಯ ಇಲಾಖೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.
ಕಾರ್ಯಾಚರಣೆಯಲ್ಲಿ ಡಿಎಫ್ಓ ಸಂತೋಷ್ ಕುಮಾರ್, ಎಸಿಎಫ್ ಶಶಿಧರ್, ಆರ್.ಎಫ್.ಓ ಭರತ್, ಡಿ.ಆರ್.ಎಫ್.ಓ ನಂದೀಶ್ ಹಾಗೂ ಸಿಬಂದಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು