Kollegala ಮದುವೆಯಾದ ಐದೇ ದಿನಕ್ಕೆ ನೇಣಿಗೆ ಶರಣಾದ ವ್ಯಕ್ತಿ
ಮೊದಲರಾತ್ರಿಯೂ ದೇಹ ಸಂಪರ್ಕ ಮಾಡಿರಲಿಲ್ಲ ಎಂದ ನವ ವಧು!
Team Udayavani, Jun 11, 2023, 8:22 PM IST
ಕೊಳ್ಳೇಗಾಲ: ಮದುವೆಯಾದ ಐದೇ ದಿನಕ್ಕೆ ವರನೊಬ್ಬ ತನ್ನ ಮನೆಯಲ್ಲಿ ಭಾನುವಾರ ನೇಣು ಬಿಗಿದುಕೊಂಡು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.
ಇಲ್ಲಿನ ಜಿ.ಪಿ.ಮಲ್ಲಪ್ಪಪುರಂ ಬಡಾವಣೆಯ ನಿವಾಸಿ ಬೇಸಾಯ ವೃತ್ತಿ ಮಾಡುತ್ತಿದ್ದ ಸತೀಶ್ ಬಾಬು (43) ಸಾವಿಗೀಡಾಗಿರುವ ಮೃತ ದುರ್ದೈವಿ.
ಮದುವೆಯಾಗಿ ಕೇವಲ ಐದೇ ದಿನಕ್ಕೆ ಸಾವನ್ನಪ್ಪಿರುವ ಘಟನೆಯನ್ನು ಕೇಳಿ ನಗರವೇ ಬೆಚ್ಚಿ ಬಿದ್ದಿದೆ. ಸತೀಶ್ ಬಾಬು ಹಾಗೂ ಚೆನ್ನಾಜಮ್ಮ ಮನೆಯವರ ಸಮ್ಮುಖದಲ್ಲಿ ಅದ್ದೂರಿಯಾಗಿ ಮದುವೆಯಾಗಿದ್ದರು. ಮದುವೆಯಾದ ಮೂರನೇ ದಿನಕ್ಕೆ ಕುಟುಂಬಸ್ಥರು ಒಟ್ಟಾಗಿ ಸೇರಿ ಸಾಂಪ್ರದಾಯದಂತೆ ಮೊದಲನೆಯ ರಾತ್ರಿ ಏರ್ಪಡಿಸಿದ್ದರು ಆ ಮೊದಲನೇ ರಾತ್ರಿ ಸತೀಶ್ ಬಾಬು ನನಗೆ ಅನಾರೋಗ್ಯ ಸಮಸ್ಯೆ ಇದೆ ಹಾಗಾಗಿ ಮೊದಲನೇ ರಾತ್ರಿ ಯಾವ ಸಾಂಪ್ರದಾಯಗಳು ಬೇಡವೆಂದು ಮನೆಯಲ್ಲಿ ಮಲಗಿದ್ದರು.
ನಂತರ ಎಂದಿನಂತೆ ಬೆಳಗ್ಗೆ ಎದ್ದು ಕೆಲಸ ಕಾರ್ಯಗಳನ್ನು ಮಾಡುತ್ತಿದ್ದರು. ಅದಾದ ನಂತರ ಶನಿವಾರ ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ್ದು ಬೆಳಗ್ಗೆ ಎದ್ದು ಜಮೀನಿಗಳಿಗೆ ತೆರಳಿದ್ದರು ನಂತರ ಮನೆಯ ಕೊಠಡಿ ಒಳಗೆ ಹೋಗಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ .
ಮದುವೆಯಾದ ಮೊದಲರಾತ್ರಿಯೂ ಸಹ ನನ್ನ ಜೊತೆ ಯಾವುದೇ ದೇಹ ಸಂಪರ್ಕ ಮಾಡಿರಲಿಲ್ಲ. ಈ ಸಾವಿನ ಹಿಂದೆ ನನಗೆ ಹಲವಾರು ಅನುಮಾನಗಳಿವೆ ಹಾಗಾಗಿ ನನ್ನ ಗಂಡನ ಸಾವಿಗೆ ತಂದೆ ಲಿಂಗರಾಜು, ತಾಯಿ ಮಹದೇವಿ, ಸಂಬಂಧಿಕರಾದ ದೇವಾನಂದ್, ಪ್ರಕಾಶ್, ವಿಜಯಕುಮಾರ್ ಕಾರಣರಾಗಿದ್ದಾರೆ ಹಾಗಾಗಿ ಇವರುಗಳ ಮೇಲೆ ತನಿಖೆ ನಡೆಸಿ ನನಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ಮೃತರ ಪತ್ನಿ ಟಿ ನರಸೀಪುರ ತಾಲ್ಲೂಕಿನ ಕನ್ನಹಳ್ಳಿ ಗ್ರಾಮದ ಚೆನ್ನಾಜಮ್ಮ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪೊಲೀಸರು ಶವವನ್ನು ಸರ್ಕಾರಿ ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ