ವಡ್ಡರದೊಡ್ಡಿ ಗ್ರಾಮದಲ್ಲಿ ಸಮರ್ಪಕ ಮೂಲಭೂತ ಸೌಕರ್ಯ ಕೊರತೆ ಸಮಸ್ಯೆ


Team Udayavani, Jul 11, 2020, 4:25 PM IST

ವಡ್ಡರದೊಡ್ಡಿ ಗ್ರಾಮದಲ್ಲಿ ಸಮರ್ಪಕ ಮೂಲಭೂತ ಸೌಕರ್ಯ ಕೊರತೆ ಸಮಸ್ಯೆ

ಹನೂರು(ಚಾಮರಾಜನಗರ): ತಾಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡ್ಡರದೊಡ್ಡಿ ಗ್ರಾಮಕ್ಕೆ ಸಮರ್ಪಕ ಮೂಲಭೂತ ಸೌಕರ್ಯ ಲಭಿಸದೆ ಗ್ರಾಮದ ವಾಸಿಗಳು ಪರಿತಪಿಸುವಂತಾಗಿದೆ.

ಮಾರ್ಟಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ವಡ್ಡರದೊಡ್ಡಿ ಗ್ರಾಮದ ಮೇಲುನತ್ತ ಎಂಬುವಲ್ಲಿ 7 ಬೀದಿಗಳಿದ್ದು ಕೇವಲ 3 ಬೀದಿಗಳಿಗೆ ಮಾತ್ರ ಕಾಂಕ್ರೀಟ್ ರಸ್ತೆ ಸೌಲಭ್ಯ ಕಲ್ಪಿಸಲಾಗಿದೆ. ಈ ಬಡಾವಣೆಗಳಲ್ಲಿ ಅಲ್ಪಸಂಖ್ಯಾತರೇ ಹೆಚ್ಚು ವಾಸಿಸುತ್ತಿದ್ದು ಸುಮಾರು 100 ಕುಟುಂಬಗಳಿದ್ದು 500ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದೆ. ಈ ಬಡಾವಣೆಗಳಿಗೆ ಮೂಲಸೌಕರ್ಯ ಮರೀಚಿಕೆಯಾಗಿದ್ದು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕೂಡಲೇ ಸಮಸ್ಯೆ ಬಗೆಹರಿಸುವಂತೆ ಸಆರ್ವಜನಿಕರು ಆಗ್ರಹಿಸಿದ್ದಾರೆ.

ಮಣ್ಣಿನ ರಸ್ತೆಯಲ್ಲಿಯೇ ಸಂಚಾರ: ಈ ಗ್ರಾಮದಲ್ಲಿ ಬೀದಿಗಳಿದ್ದು ಕೇವಲ 2 ಬೀದಿಗಳಿಗೆ ಮಾತ್ರ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ನಿರ್ಮಾಣ ಮಾಡಲಾಗಿದೆ. ಇನ್ನುಳಿದ 5 ಬೀದಿಗಳಿಗೆ ಇನ್ನು ಕಾಂಕ್ರೀಟ್ ರಸ್ತೆಗಳೂ ಸಹ ನಿರ್ಮಾಣವಾಗಿಲ್ಲದ್ದರಿಂದ ಮಣ್ಣಿನ ರಸ್ತೆಯಲ್ಲಿಯೇ ಸಂಚರಿಸಬೇಕಿದೆ. ಅಲ್ಲದೆ ಕೆಲ ಬೀದಿಗಳಿಗೆ ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೆ ಮನೆಯ ಮುಂಭಾಗದಲ್ಲಿಯೇ ಕೊಳಚೆ ನೀರು ಹರಿಯುವಂತಾಗಿದೆ. ಈ ಬೀದಿಗಳು ಮುಖ್ಯ ರಸ್ತೆಯಿಂದ ಇಳಿಜಾರಾದ ಪ್ರದೇಶದಲ್ಲಿರುವುದರಿಂದ ಮಳೆಗಾಲದ ಸಂದರ್ಭದಲ್ಲಿ ಮಳೆಯ ನೀರು ಮನೆಯ ಅಂಗಳದವರೆಗೂ ಬಂದು ನಿಲ್ಲುವಂತಹ ಪರಿಸ್ಥಿತಿಯಿದೆ.

ಸಮರ್ಪಕ ವಿದ್ಯುತ್, ಬೀದಿ ದೀಪಗಳಿಲ್ಲ: ಈ ಬಡಾವಣೆಯ ಎಲ್ಲಾ ಮನೆಗಳಿಗೂ ಮಾರ್ಟಳ್ಳಿ- ವಡಕೆಹಳ್ಳ ಮುಖ್ಯ ರಸ್ತೆಯಲ್ಲಿ ಹಾದು ಹೋಗಿರುವ ವಿದ್ಯುತ್ ಕಂಬಗಳಿಂದ ಸಂಪರ್ಕ ನೀಡಲಾಗಿದೆ. ಆದರೆ ಮುಖ್ಯ ರಸ್ತೆಯ ಕಂಬದಿಂದ ಮನೆಗಳು ಸುಮಾರು 300-400 ಮೀಟರ್ ಅಂತರದಲ್ಲಿರುವುದರಿಂದ ವಿದ್ಯುತ್ ತಂತಿಗಳು ಮನೆಯ ಮೇಲೆ, ರಸ್ತೆಗೆ ಅಡ್ಡಲಾಗಿ ನೇತಾಡುತ್ತಿದ್ದು ಪ್ರಾಣ ಭಯದಿಂದಲೇ ರಸ್ತೆಯಲ್ಲಿ ಓಡಾಡಬೇಕಾದ ಪರಿಸ್ಥಿತಿಯಿದೆ. ಅಲ್ಲದೆ ಸಂಜೆಯಾಗುತ್ತಲೇ ವಿದ್ಯುತ್ ದೀಪಗಳು ಚಿಮಣಿಯಂತೆ ಉರಿಯುತ್ತಿದ್ದು ಸಮರ್ಪಕ ವೋಲ್ಟೇಜ್ ವ್ಯವಸ್ಥೆಯೂ ಇಲ್ಲ. ಇನ್ನು ಬೀದಿ ದೀಪಗಳಂತು ಕನಸಿನ ಮಾತಾಗಿದ್ದು ರಾತ್ರಿಯಾಗುತ್ತಲೇ ವಿಷಜಂತುಗಳ ಹಾವಳಿಯಿಂದಾಗಿ ಪ್ರಾಣಭಯದಿಂದಲೇ ಸಂಚರಿಸಬೇಕಿದೆ. ಅಲ್ಲದೆ ಈ ಬಡಾವಣೆಗಳಲ್ಲಿ ವಿಷಜಂತುಗಳ ಹಾವಳಿಗೂ ಕೆಲವರು ಸಿಲುಕಿ ಸಮಸ್ಯೆಗಳಾಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿಲ್ಲ.

ವಡ್ಡರದೊಡ್ಡಿ

ಆದುದರಿಂದ ಸಂಬಂಧಪಟ್ಟ ಸೆಸ್ಕ್ ಇಲಾಖಾ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಈ ಬಗ್ಗೆ ಕೂಡಲೇ ಗಮನಹರಿಸಿ ಬಡಾವಣೆಗೆ ಸುಸಜ್ಜಿತ ರಸ್ತೆ, ಚರಂಡಿ ನಿರ್ಮಾಣ ಮಆಡಿಕೊಟ್ಟು ಅಗತ್ಯತೆಗನುಗುಣವಾಗಿ ವಿದ್ಯುತ್ ಕಂಬಗಳನ್ನು ಅಳವಡಿಸಿ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸಿ ಬೀದಿದೀಪ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ.

ಈ ಬಡಾವಣೆಗೆ ವಿದ್ಯುತ್ ಕಂಬ ಅಳವಡಿಸಿ ಬೀದಿ ದೀಪಗಳನ್ನು ಹಾಕಲು 12 ಲಕ್ಷ ಅನುದಾನವನ್ನು ಮೀಸಲಿರಿಸಲಾಗಿತ್ತು. ಆದರೆ ಗ್ರಾಮ ಪಂಚಾಯಿತಿ ಅನುದಾನದಲ್ಲಿ ವಿದ್ಯುತ್ ಕಂಬಗಳನ್ನು ಹಾಕಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಕಾಮಗಾರಿಯನ್ನು ಕೈಬಿಟ್ಟಿದ್ದಾರೆ. ಆದರೆ ಆ ಹಣ ಯಾವುದಕ್ಕೆ ಬಳಕೆಯಾಗಿದೆ ಎಂಬುದರ ಬಗ್ಗೆ ಮಾಹಿತಿಯಿಲ್ಲ. ಇನ್ನು ನರೇಗಾ ಯೋಜನೆಯಡಿ ಚರಂಡಿ, ರಸ್ತೆ ನಿರ್ಮಾಣ ಮಾಡಲು ಕಾನೂನು ತೊಡಕುಗಳಿದ್ದು ಕೂಡಲೇ ಈ ಸಂಬಂಧ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಕ್ರಮವಹಿಸಲಾಗುವುದು ಎಂದು ಗ್ರಾ.ಪಂ ಸದಸ್ಯ ಶಿವು ಹೇಳಿದರು.

ಟಾಪ್ ನ್ಯೂಸ್

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.